Homeಮುಖಪುಟಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ...

ಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಮರುಸ್ಥಾಪಿಸಲು ಆಗ್ರಹಿಸಿ ವಿಧಾನಸಭೆಯಲ್ಲಿ ಬುಧವಾರ (ನ.6) ನಿರ್ಣಯ ಅಂಗೀಕರಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸದಸ್ಯರು, ನಿರ್ಣಯ ಹಿಂಪಡೆಯುವವರೆಗೂ ಕಲಾಪ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಪಡೆಯುತ್ತಿದ್ದಂತೆ, ಅದರ ಪ್ರತಿಗಳನ್ನು ಹರಿದು ಬಿಸಾಕಿದ ಬಿಜೆಪಿ ಸದಸ್ಯರು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

“ಆಗಸ್ಟ್ 5 ಝಿಂದಾಬಾದ್”, “ಜೈ ಶ್ರೀ ರಾಮ್”, “ವಂದೇ ಮಾತರಂ”, “ದೇಶ ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಜಮ್ಮು ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಪಾಕಿಸ್ತಾನಿ ಅಜೆಂಡಾ ನಡೆಯುವುದಿಲ್ಲ” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.  ಇದರಿಂದ ಕಲಾಪ ನಡೆಸಲು ಅಡ್ಡಿಯಾಯಿತು. ಆದ್ದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.

“ಸ್ಪೀಕರ್ ಪಕ್ಷಪಾತ ಮಾಡುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಸುನೀಲ್ ಶರ್ಮಾ ಆರೋಪಿಸಿದ್ದಾರೆ. “ನೀವು (ಸ್ಪೀಕರ್) ನಿನ್ನೆ ಸಚಿವರ ಸಭೆಯನ್ನು ಕರೆದಿದ್ದೀರಿ ಮತ್ತುನೀವೇ ನಿರ್ಣಯವನ್ನು ರಚಿಸಿದ್ದೀರಿ” ಎಂದು ನಮಗೆ ಮಾಹಿತಿ ದೊರೆತಿದೆ” ಎಂದಿದ್ದಾರೆ.

ಮತ್ತೊಬ್ಬ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಮಾತನಾಡಿ, “ಅತಿಥಿ ಗೃಹದಲ್ಲಿ ಸ್ಪೀಕರ್ ಜೊತೆ ಒಪ್ಪಂದ ಮಾಡಿಕೊಂಡು ನಿರ್ಣಯವನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದ್ದಾರೆ.

“ಜನಾದೇಶ (ವಿಧಾನಸಭಾ ಚುನಾವಣೆ) 370ನೇ ವಿಧಿಯ ರದ್ದತಿಯ ಪರವಾಗಿತ್ತು. ಏಕೆಂದರೆ, ನಾವು (ಬಿಜೆಪಿ) ಶೇ.26 ರಷ್ಟು ಮತಗಳನ್ನು ಪಡೆದಿದ್ದೇವೆ. ನ್ಯಾಷನಲ್ ಕಾನ್ಫರೆನ್ಸ್ 23 ಶೇ. ಮತಗಳನ್ನಷ್ಟೇ ಪಡೆದಿದೆ. ಸ್ಪೀಕರ್ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಂತೆ ವರ್ತಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿರುವ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಪುನಃಸ್ಥಾಪಿಸುವ ನಿರ್ಣಯವನ್ನು ಮಂಡಿಸಿದ್ದಾರೆ.

“ಈ ಕಲಾಪವು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುವ ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. 370ನೇ ವಿಧಿಯನ್ನು ಏಕಪಕ್ಷೀಯವಾಗಿ ತೆಗೆದು ಹಾಕಿದ್ದರ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ” ಎಂದು ನಿರ್ಣಯ ಹೇಳಿದೆ.

ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಮರುಸ್ಥಾಪನೆಗಾಗಿ ಜಮ್ಮು ಮತ್ತು ಕಾಶ್ಮೀರದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕು ಮತ್ತು 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸಲು ಕೇಂದ್ರ ಸರ್ಕಾರ ಅಧಿವೇಶನ ಕರೆಯಬೇಕು” ಎಂದು ನಿರ್ಣಯ ಆಗ್ರಹಿಸಿದೆ.

370ನೇ ವಿಧಿಯ ಪುನಃಸ್ಥಾಪನೆಗಾಗಿ ನಡೆಸುವ ಯಾವುದೇ ಪ್ರಕ್ರಿಯೆ ರಾಷ್ಟ್ರೀಯ ಏಕತೆ ಮತ್ತು ಜಮ್ಮು ಕಾಶ್ಮೀರದ ಜನರ ನ್ಯಾಯಸಮ್ಮತ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ನಿರ್ಣಯ ಒತ್ತಿ ಹೇಳಿದೆ.

ಇದನ್ನೂ ಓದಿ : ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...