Homeಮುಖಪುಟಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ...

ಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಮರುಸ್ಥಾಪಿಸಲು ಆಗ್ರಹಿಸಿ ವಿಧಾನಸಭೆಯಲ್ಲಿ ಬುಧವಾರ (ನ.6) ನಿರ್ಣಯ ಅಂಗೀಕರಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸದಸ್ಯರು, ನಿರ್ಣಯ ಹಿಂಪಡೆಯುವವರೆಗೂ ಕಲಾಪ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಪಡೆಯುತ್ತಿದ್ದಂತೆ, ಅದರ ಪ್ರತಿಗಳನ್ನು ಹರಿದು ಬಿಸಾಕಿದ ಬಿಜೆಪಿ ಸದಸ್ಯರು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

“ಆಗಸ್ಟ್ 5 ಝಿಂದಾಬಾದ್”, “ಜೈ ಶ್ರೀ ರಾಮ್”, “ವಂದೇ ಮಾತರಂ”, “ದೇಶ ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಜಮ್ಮು ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಪಾಕಿಸ್ತಾನಿ ಅಜೆಂಡಾ ನಡೆಯುವುದಿಲ್ಲ” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.  ಇದರಿಂದ ಕಲಾಪ ನಡೆಸಲು ಅಡ್ಡಿಯಾಯಿತು. ಆದ್ದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.

“ಸ್ಪೀಕರ್ ಪಕ್ಷಪಾತ ಮಾಡುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಸುನೀಲ್ ಶರ್ಮಾ ಆರೋಪಿಸಿದ್ದಾರೆ. “ನೀವು (ಸ್ಪೀಕರ್) ನಿನ್ನೆ ಸಚಿವರ ಸಭೆಯನ್ನು ಕರೆದಿದ್ದೀರಿ ಮತ್ತುನೀವೇ ನಿರ್ಣಯವನ್ನು ರಚಿಸಿದ್ದೀರಿ” ಎಂದು ನಮಗೆ ಮಾಹಿತಿ ದೊರೆತಿದೆ” ಎಂದಿದ್ದಾರೆ.

ಮತ್ತೊಬ್ಬ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಮಾತನಾಡಿ, “ಅತಿಥಿ ಗೃಹದಲ್ಲಿ ಸ್ಪೀಕರ್ ಜೊತೆ ಒಪ್ಪಂದ ಮಾಡಿಕೊಂಡು ನಿರ್ಣಯವನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದ್ದಾರೆ.

“ಜನಾದೇಶ (ವಿಧಾನಸಭಾ ಚುನಾವಣೆ) 370ನೇ ವಿಧಿಯ ರದ್ದತಿಯ ಪರವಾಗಿತ್ತು. ಏಕೆಂದರೆ, ನಾವು (ಬಿಜೆಪಿ) ಶೇ.26 ರಷ್ಟು ಮತಗಳನ್ನು ಪಡೆದಿದ್ದೇವೆ. ನ್ಯಾಷನಲ್ ಕಾನ್ಫರೆನ್ಸ್ 23 ಶೇ. ಮತಗಳನ್ನಷ್ಟೇ ಪಡೆದಿದೆ. ಸ್ಪೀಕರ್ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಂತೆ ವರ್ತಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿರುವ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಪುನಃಸ್ಥಾಪಿಸುವ ನಿರ್ಣಯವನ್ನು ಮಂಡಿಸಿದ್ದಾರೆ.

“ಈ ಕಲಾಪವು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುವ ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. 370ನೇ ವಿಧಿಯನ್ನು ಏಕಪಕ್ಷೀಯವಾಗಿ ತೆಗೆದು ಹಾಕಿದ್ದರ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ” ಎಂದು ನಿರ್ಣಯ ಹೇಳಿದೆ.

ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಮರುಸ್ಥಾಪನೆಗಾಗಿ ಜಮ್ಮು ಮತ್ತು ಕಾಶ್ಮೀರದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕು ಮತ್ತು 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸಲು ಕೇಂದ್ರ ಸರ್ಕಾರ ಅಧಿವೇಶನ ಕರೆಯಬೇಕು” ಎಂದು ನಿರ್ಣಯ ಆಗ್ರಹಿಸಿದೆ.

370ನೇ ವಿಧಿಯ ಪುನಃಸ್ಥಾಪನೆಗಾಗಿ ನಡೆಸುವ ಯಾವುದೇ ಪ್ರಕ್ರಿಯೆ ರಾಷ್ಟ್ರೀಯ ಏಕತೆ ಮತ್ತು ಜಮ್ಮು ಕಾಶ್ಮೀರದ ಜನರ ನ್ಯಾಯಸಮ್ಮತ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ನಿರ್ಣಯ ಒತ್ತಿ ಹೇಳಿದೆ.

ಇದನ್ನೂ ಓದಿ : ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...