Homeಮುಖಪುಟಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ...

ಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಮರುಸ್ಥಾಪಿಸಲು ಆಗ್ರಹಿಸಿ ವಿಧಾನಸಭೆಯಲ್ಲಿ ಬುಧವಾರ (ನ.6) ನಿರ್ಣಯ ಅಂಗೀಕರಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸದಸ್ಯರು, ನಿರ್ಣಯ ಹಿಂಪಡೆಯುವವರೆಗೂ ಕಲಾಪ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಪಡೆಯುತ್ತಿದ್ದಂತೆ, ಅದರ ಪ್ರತಿಗಳನ್ನು ಹರಿದು ಬಿಸಾಕಿದ ಬಿಜೆಪಿ ಸದಸ್ಯರು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

“ಆಗಸ್ಟ್ 5 ಝಿಂದಾಬಾದ್”, “ಜೈ ಶ್ರೀ ರಾಮ್”, “ವಂದೇ ಮಾತರಂ”, “ದೇಶ ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಜಮ್ಮು ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಪಾಕಿಸ್ತಾನಿ ಅಜೆಂಡಾ ನಡೆಯುವುದಿಲ್ಲ” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.  ಇದರಿಂದ ಕಲಾಪ ನಡೆಸಲು ಅಡ್ಡಿಯಾಯಿತು. ಆದ್ದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.

“ಸ್ಪೀಕರ್ ಪಕ್ಷಪಾತ ಮಾಡುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಸುನೀಲ್ ಶರ್ಮಾ ಆರೋಪಿಸಿದ್ದಾರೆ. “ನೀವು (ಸ್ಪೀಕರ್) ನಿನ್ನೆ ಸಚಿವರ ಸಭೆಯನ್ನು ಕರೆದಿದ್ದೀರಿ ಮತ್ತುನೀವೇ ನಿರ್ಣಯವನ್ನು ರಚಿಸಿದ್ದೀರಿ” ಎಂದು ನಮಗೆ ಮಾಹಿತಿ ದೊರೆತಿದೆ” ಎಂದಿದ್ದಾರೆ.

ಮತ್ತೊಬ್ಬ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಮಾತನಾಡಿ, “ಅತಿಥಿ ಗೃಹದಲ್ಲಿ ಸ್ಪೀಕರ್ ಜೊತೆ ಒಪ್ಪಂದ ಮಾಡಿಕೊಂಡು ನಿರ್ಣಯವನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದ್ದಾರೆ.

“ಜನಾದೇಶ (ವಿಧಾನಸಭಾ ಚುನಾವಣೆ) 370ನೇ ವಿಧಿಯ ರದ್ದತಿಯ ಪರವಾಗಿತ್ತು. ಏಕೆಂದರೆ, ನಾವು (ಬಿಜೆಪಿ) ಶೇ.26 ರಷ್ಟು ಮತಗಳನ್ನು ಪಡೆದಿದ್ದೇವೆ. ನ್ಯಾಷನಲ್ ಕಾನ್ಫರೆನ್ಸ್ 23 ಶೇ. ಮತಗಳನ್ನಷ್ಟೇ ಪಡೆದಿದೆ. ಸ್ಪೀಕರ್ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಂತೆ ವರ್ತಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿರುವ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಪುನಃಸ್ಥಾಪಿಸುವ ನಿರ್ಣಯವನ್ನು ಮಂಡಿಸಿದ್ದಾರೆ.

“ಈ ಕಲಾಪವು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುವ ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. 370ನೇ ವಿಧಿಯನ್ನು ಏಕಪಕ್ಷೀಯವಾಗಿ ತೆಗೆದು ಹಾಕಿದ್ದರ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ” ಎಂದು ನಿರ್ಣಯ ಹೇಳಿದೆ.

ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಮರುಸ್ಥಾಪನೆಗಾಗಿ ಜಮ್ಮು ಮತ್ತು ಕಾಶ್ಮೀರದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕು ಮತ್ತು 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸಲು ಕೇಂದ್ರ ಸರ್ಕಾರ ಅಧಿವೇಶನ ಕರೆಯಬೇಕು” ಎಂದು ನಿರ್ಣಯ ಆಗ್ರಹಿಸಿದೆ.

370ನೇ ವಿಧಿಯ ಪುನಃಸ್ಥಾಪನೆಗಾಗಿ ನಡೆಸುವ ಯಾವುದೇ ಪ್ರಕ್ರಿಯೆ ರಾಷ್ಟ್ರೀಯ ಏಕತೆ ಮತ್ತು ಜಮ್ಮು ಕಾಶ್ಮೀರದ ಜನರ ನ್ಯಾಯಸಮ್ಮತ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ನಿರ್ಣಯ ಒತ್ತಿ ಹೇಳಿದೆ.

ಇದನ್ನೂ ಓದಿ : ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...