Homeಮುಖಪುಟಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ...

ಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಮರುಸ್ಥಾಪಿಸಲು ಆಗ್ರಹಿಸಿ ವಿಧಾನಸಭೆಯಲ್ಲಿ ಬುಧವಾರ (ನ.6) ನಿರ್ಣಯ ಅಂಗೀಕರಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸದಸ್ಯರು, ನಿರ್ಣಯ ಹಿಂಪಡೆಯುವವರೆಗೂ ಕಲಾಪ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಪಡೆಯುತ್ತಿದ್ದಂತೆ, ಅದರ ಪ್ರತಿಗಳನ್ನು ಹರಿದು ಬಿಸಾಕಿದ ಬಿಜೆಪಿ ಸದಸ್ಯರು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

“ಆಗಸ್ಟ್ 5 ಝಿಂದಾಬಾದ್”, “ಜೈ ಶ್ರೀ ರಾಮ್”, “ವಂದೇ ಮಾತರಂ”, “ದೇಶ ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಜಮ್ಮು ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಪಾಕಿಸ್ತಾನಿ ಅಜೆಂಡಾ ನಡೆಯುವುದಿಲ್ಲ” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.  ಇದರಿಂದ ಕಲಾಪ ನಡೆಸಲು ಅಡ್ಡಿಯಾಯಿತು. ಆದ್ದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.

“ಸ್ಪೀಕರ್ ಪಕ್ಷಪಾತ ಮಾಡುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಸುನೀಲ್ ಶರ್ಮಾ ಆರೋಪಿಸಿದ್ದಾರೆ. “ನೀವು (ಸ್ಪೀಕರ್) ನಿನ್ನೆ ಸಚಿವರ ಸಭೆಯನ್ನು ಕರೆದಿದ್ದೀರಿ ಮತ್ತುನೀವೇ ನಿರ್ಣಯವನ್ನು ರಚಿಸಿದ್ದೀರಿ” ಎಂದು ನಮಗೆ ಮಾಹಿತಿ ದೊರೆತಿದೆ” ಎಂದಿದ್ದಾರೆ.

ಮತ್ತೊಬ್ಬ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಮಾತನಾಡಿ, “ಅತಿಥಿ ಗೃಹದಲ್ಲಿ ಸ್ಪೀಕರ್ ಜೊತೆ ಒಪ್ಪಂದ ಮಾಡಿಕೊಂಡು ನಿರ್ಣಯವನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದ್ದಾರೆ.

“ಜನಾದೇಶ (ವಿಧಾನಸಭಾ ಚುನಾವಣೆ) 370ನೇ ವಿಧಿಯ ರದ್ದತಿಯ ಪರವಾಗಿತ್ತು. ಏಕೆಂದರೆ, ನಾವು (ಬಿಜೆಪಿ) ಶೇ.26 ರಷ್ಟು ಮತಗಳನ್ನು ಪಡೆದಿದ್ದೇವೆ. ನ್ಯಾಷನಲ್ ಕಾನ್ಫರೆನ್ಸ್ 23 ಶೇ. ಮತಗಳನ್ನಷ್ಟೇ ಪಡೆದಿದೆ. ಸ್ಪೀಕರ್ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಂತೆ ವರ್ತಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿರುವ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಪುನಃಸ್ಥಾಪಿಸುವ ನಿರ್ಣಯವನ್ನು ಮಂಡಿಸಿದ್ದಾರೆ.

“ಈ ಕಲಾಪವು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುವ ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. 370ನೇ ವಿಧಿಯನ್ನು ಏಕಪಕ್ಷೀಯವಾಗಿ ತೆಗೆದು ಹಾಕಿದ್ದರ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ” ಎಂದು ನಿರ್ಣಯ ಹೇಳಿದೆ.

ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಮರುಸ್ಥಾಪನೆಗಾಗಿ ಜಮ್ಮು ಮತ್ತು ಕಾಶ್ಮೀರದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕು ಮತ್ತು 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸಲು ಕೇಂದ್ರ ಸರ್ಕಾರ ಅಧಿವೇಶನ ಕರೆಯಬೇಕು” ಎಂದು ನಿರ್ಣಯ ಆಗ್ರಹಿಸಿದೆ.

370ನೇ ವಿಧಿಯ ಪುನಃಸ್ಥಾಪನೆಗಾಗಿ ನಡೆಸುವ ಯಾವುದೇ ಪ್ರಕ್ರಿಯೆ ರಾಷ್ಟ್ರೀಯ ಏಕತೆ ಮತ್ತು ಜಮ್ಮು ಕಾಶ್ಮೀರದ ಜನರ ನ್ಯಾಯಸಮ್ಮತ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ನಿರ್ಣಯ ಒತ್ತಿ ಹೇಳಿದೆ.

ಇದನ್ನೂ ಓದಿ : ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...