Homeಮುಖಪುಟಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ...

ಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಮರುಸ್ಥಾಪಿಸಲು ಆಗ್ರಹಿಸಿ ವಿಧಾನಸಭೆಯಲ್ಲಿ ಬುಧವಾರ (ನ.6) ನಿರ್ಣಯ ಅಂಗೀಕರಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸದಸ್ಯರು, ನಿರ್ಣಯ ಹಿಂಪಡೆಯುವವರೆಗೂ ಕಲಾಪ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಪಡೆಯುತ್ತಿದ್ದಂತೆ, ಅದರ ಪ್ರತಿಗಳನ್ನು ಹರಿದು ಬಿಸಾಕಿದ ಬಿಜೆಪಿ ಸದಸ್ಯರು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

“ಆಗಸ್ಟ್ 5 ಝಿಂದಾಬಾದ್”, “ಜೈ ಶ್ರೀ ರಾಮ್”, “ವಂದೇ ಮಾತರಂ”, “ದೇಶ ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಜಮ್ಮು ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಪಾಕಿಸ್ತಾನಿ ಅಜೆಂಡಾ ನಡೆಯುವುದಿಲ್ಲ” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.  ಇದರಿಂದ ಕಲಾಪ ನಡೆಸಲು ಅಡ್ಡಿಯಾಯಿತು. ಆದ್ದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.

“ಸ್ಪೀಕರ್ ಪಕ್ಷಪಾತ ಮಾಡುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಸುನೀಲ್ ಶರ್ಮಾ ಆರೋಪಿಸಿದ್ದಾರೆ. “ನೀವು (ಸ್ಪೀಕರ್) ನಿನ್ನೆ ಸಚಿವರ ಸಭೆಯನ್ನು ಕರೆದಿದ್ದೀರಿ ಮತ್ತುನೀವೇ ನಿರ್ಣಯವನ್ನು ರಚಿಸಿದ್ದೀರಿ” ಎಂದು ನಮಗೆ ಮಾಹಿತಿ ದೊರೆತಿದೆ” ಎಂದಿದ್ದಾರೆ.

ಮತ್ತೊಬ್ಬ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಮಾತನಾಡಿ, “ಅತಿಥಿ ಗೃಹದಲ್ಲಿ ಸ್ಪೀಕರ್ ಜೊತೆ ಒಪ್ಪಂದ ಮಾಡಿಕೊಂಡು ನಿರ್ಣಯವನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದ್ದಾರೆ.

“ಜನಾದೇಶ (ವಿಧಾನಸಭಾ ಚುನಾವಣೆ) 370ನೇ ವಿಧಿಯ ರದ್ದತಿಯ ಪರವಾಗಿತ್ತು. ಏಕೆಂದರೆ, ನಾವು (ಬಿಜೆಪಿ) ಶೇ.26 ರಷ್ಟು ಮತಗಳನ್ನು ಪಡೆದಿದ್ದೇವೆ. ನ್ಯಾಷನಲ್ ಕಾನ್ಫರೆನ್ಸ್ 23 ಶೇ. ಮತಗಳನ್ನಷ್ಟೇ ಪಡೆದಿದೆ. ಸ್ಪೀಕರ್ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಂತೆ ವರ್ತಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿರುವ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಪುನಃಸ್ಥಾಪಿಸುವ ನಿರ್ಣಯವನ್ನು ಮಂಡಿಸಿದ್ದಾರೆ.

“ಈ ಕಲಾಪವು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುವ ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. 370ನೇ ವಿಧಿಯನ್ನು ಏಕಪಕ್ಷೀಯವಾಗಿ ತೆಗೆದು ಹಾಕಿದ್ದರ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ” ಎಂದು ನಿರ್ಣಯ ಹೇಳಿದೆ.

ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಮರುಸ್ಥಾಪನೆಗಾಗಿ ಜಮ್ಮು ಮತ್ತು ಕಾಶ್ಮೀರದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕು ಮತ್ತು 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸಲು ಕೇಂದ್ರ ಸರ್ಕಾರ ಅಧಿವೇಶನ ಕರೆಯಬೇಕು” ಎಂದು ನಿರ್ಣಯ ಆಗ್ರಹಿಸಿದೆ.

370ನೇ ವಿಧಿಯ ಪುನಃಸ್ಥಾಪನೆಗಾಗಿ ನಡೆಸುವ ಯಾವುದೇ ಪ್ರಕ್ರಿಯೆ ರಾಷ್ಟ್ರೀಯ ಏಕತೆ ಮತ್ತು ಜಮ್ಮು ಕಾಶ್ಮೀರದ ಜನರ ನ್ಯಾಯಸಮ್ಮತ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ನಿರ್ಣಯ ಒತ್ತಿ ಹೇಳಿದೆ.

ಇದನ್ನೂ ಓದಿ : ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...