Homeಮುಖಪುಟಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ...

ಜಮ್ಮು ಕಾಶ್ಮೀರ | 370ನೇ ವಿಧಿ ಮರುಸ್ಥಾಪಿಸಲು ಆಗ್ರಹಿಸಿ ನಿರ್ಣಯ ಅಂಗೀಕಾರ : ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಮರುಸ್ಥಾಪಿಸಲು ಆಗ್ರಹಿಸಿ ವಿಧಾನಸಭೆಯಲ್ಲಿ ಬುಧವಾರ (ನ.6) ನಿರ್ಣಯ ಅಂಗೀಕರಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸದಸ್ಯರು, ನಿರ್ಣಯ ಹಿಂಪಡೆಯುವವರೆಗೂ ಕಲಾಪ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಪಡೆಯುತ್ತಿದ್ದಂತೆ, ಅದರ ಪ್ರತಿಗಳನ್ನು ಹರಿದು ಬಿಸಾಕಿದ ಬಿಜೆಪಿ ಸದಸ್ಯರು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

“ಆಗಸ್ಟ್ 5 ಝಿಂದಾಬಾದ್”, “ಜೈ ಶ್ರೀ ರಾಮ್”, “ವಂದೇ ಮಾತರಂ”, “ದೇಶ ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಜಮ್ಮು ವಿರೋಧಿ ಅಜೆಂಡಾ ನಡೆಯುವುದಿಲ್ಲ”, “ಪಾಕಿಸ್ತಾನಿ ಅಜೆಂಡಾ ನಡೆಯುವುದಿಲ್ಲ” ಇತ್ಯಾದಿ ಘೋಷಣೆಗಳನ್ನು ಕೂಗುತ್ತಾ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.  ಇದರಿಂದ ಕಲಾಪ ನಡೆಸಲು ಅಡ್ಡಿಯಾಯಿತು. ಆದ್ದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.

“ಸ್ಪೀಕರ್ ಪಕ್ಷಪಾತ ಮಾಡುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಸುನೀಲ್ ಶರ್ಮಾ ಆರೋಪಿಸಿದ್ದಾರೆ. “ನೀವು (ಸ್ಪೀಕರ್) ನಿನ್ನೆ ಸಚಿವರ ಸಭೆಯನ್ನು ಕರೆದಿದ್ದೀರಿ ಮತ್ತುನೀವೇ ನಿರ್ಣಯವನ್ನು ರಚಿಸಿದ್ದೀರಿ” ಎಂದು ನಮಗೆ ಮಾಹಿತಿ ದೊರೆತಿದೆ” ಎಂದಿದ್ದಾರೆ.

ಮತ್ತೊಬ್ಬ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಮಾತನಾಡಿ, “ಅತಿಥಿ ಗೃಹದಲ್ಲಿ ಸ್ಪೀಕರ್ ಜೊತೆ ಒಪ್ಪಂದ ಮಾಡಿಕೊಂಡು ನಿರ್ಣಯವನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದ್ದಾರೆ.

“ಜನಾದೇಶ (ವಿಧಾನಸಭಾ ಚುನಾವಣೆ) 370ನೇ ವಿಧಿಯ ರದ್ದತಿಯ ಪರವಾಗಿತ್ತು. ಏಕೆಂದರೆ, ನಾವು (ಬಿಜೆಪಿ) ಶೇ.26 ರಷ್ಟು ಮತಗಳನ್ನು ಪಡೆದಿದ್ದೇವೆ. ನ್ಯಾಷನಲ್ ಕಾನ್ಫರೆನ್ಸ್ 23 ಶೇ. ಮತಗಳನ್ನಷ್ಟೇ ಪಡೆದಿದೆ. ಸ್ಪೀಕರ್ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಂತೆ ವರ್ತಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿರುವ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ಪುನಃಸ್ಥಾಪಿಸುವ ನಿರ್ಣಯವನ್ನು ಮಂಡಿಸಿದ್ದಾರೆ.

“ಈ ಕಲಾಪವು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುವ ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. 370ನೇ ವಿಧಿಯನ್ನು ಏಕಪಕ್ಷೀಯವಾಗಿ ತೆಗೆದು ಹಾಕಿದ್ದರ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ” ಎಂದು ನಿರ್ಣಯ ಹೇಳಿದೆ.

ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಮರುಸ್ಥಾಪನೆಗಾಗಿ ಜಮ್ಮು ಮತ್ತು ಕಾಶ್ಮೀರದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕು ಮತ್ತು 370ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸಲು ಕೇಂದ್ರ ಸರ್ಕಾರ ಅಧಿವೇಶನ ಕರೆಯಬೇಕು” ಎಂದು ನಿರ್ಣಯ ಆಗ್ರಹಿಸಿದೆ.

370ನೇ ವಿಧಿಯ ಪುನಃಸ್ಥಾಪನೆಗಾಗಿ ನಡೆಸುವ ಯಾವುದೇ ಪ್ರಕ್ರಿಯೆ ರಾಷ್ಟ್ರೀಯ ಏಕತೆ ಮತ್ತು ಜಮ್ಮು ಕಾಶ್ಮೀರದ ಜನರ ನ್ಯಾಯಸಮ್ಮತ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ನಿರ್ಣಯ ಒತ್ತಿ ಹೇಳಿದೆ.

ಇದನ್ನೂ ಓದಿ : ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....