HomeUncategorizedಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

- Advertisement -
- Advertisement -

ರಾಜ್ಯದ ಜನರಿಗೆ ಅತಂತ್ರ ವಿಧಾನಸಭಾ ಪರಿಸ್ಥಿತಿ ತಪ್ಪಿಸುವ ಆಯ್ಕೆಯಾಗಿ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ ಎಂದು ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. ಪಕ್ಷದ ಝಾದಿಬಲ್ ಅಭ್ಯರ್ಥಿ ತನ್ವಿರ್ ಸಾದಿಕ್ ಅವರನ್ನು ಬೆಂಬಲಿಸಿ ದಾಲ್ ಸರೋವರದಲ್ಲಿ ಶಿಕಾರಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದರಲ್ಲಿ ಸ್ಪರ್ಧಿಸಲಿವೆ. ಉಳಿದ ಆರು ಸ್ಥಾನಗಳು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ “ಸೌಹಾರ್ದ ಸ್ಪರ್ಧೆ” ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂಓದಿ:‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

“ಈವಿಎಮ್‌ ಯಂತ್ರದಲ್ಲಿ ಏನಿದೆಯೊ ಗೊತ್ತಿಲ್ಲ. ಆದರೆ ಅತಂತ್ರ ಚುನಾವಣೆಯ ಇದು ಆಗಿರುವುದಿಲ್ಲ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. “ನಾವು ಜಮ್ಮು ಕಾಶ್ಮೀರ ಚುನಾವಣೋತ್ತರ ಮೈತ್ರಿಗೆ ಹೋಗಬಹುದಿತ್ತು ಆದರೆ ಜನರಿಗೆ ಒಂದು ಆಯ್ಕೆಯನ್ನು ನೀಡಲು (ಚುನಾವಣೆಯ ಮೊದಲು) ಮೈತ್ರಿಯನ್ನು ರಚಿಸಲಾಗಿದೆ. ಇದರಿಂದದಾಗಿ, ಅತಂತ್ರ ವಿಧಾನಸಭೆ ಇರುವುದಿಲ್ಲ ಮತ್ತು ಸರ್ಕಾರ ರಚನೆಯಾಗುವುದಿಲ್ಲ ಎಂಬ ಅನುಮಾನ ಜನರಿಗೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯನ್ನು ವಿಸ್ತರಿಸಲು ಬಿಜೆಪಿಯು ಅತಂತ್ರ ವಿಧಾನಸಭಾ ಫಲಿತಾಂಶ ಬಯಸುತ್ತದೆ ಎಂದು ಅಬ್ದುಲ್ಲಾ ಹೇಳಿದ್ದಾರೆ. “ಬಿಜೆಪಿಯು ಹಂಗ್ ಅಸೆಂಬ್ಲಿಯನ್ನು ಫಲಿತಾಂಶಕ್ಕಾಗಿ ಬಯಸುತ್ತದೆ., ಇದರಿಂದಾಗಿ ಅವರು (ಲೆಫ್ಟಿನೆಂಟ್) ರಾಜ್ಯಪಾಲರ ಆಳ್ವಿಕೆಯನ್ನು ವಿಸ್ತಬಹುದು. ಆದರೆ ಜನರು ಅದನ್ನು ಸಂಭವಿಸಲು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಉನ್ನತ ನಾಯಕರು ಜಮ್ಮುವಿನಲ್ಲಿ ಮಾಡುವಂತೆ ಕಾಶ್ಮೀರದಲ್ಲಿ ಏಕೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕಣಿವೆಯಲ್ಲಿ ಅವರಿಗೆ ಏನೂ ದಕ್ಕುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

“ಬಿಜೆಪಿಗೆ ಕಾಶ್ಮೀರದಲ್ಲಿ ಏನೂ ದಕ್ಕುವುದಿಲ್ಲ. ಮುಸ್ಲಿಮರ ಬಗ್ಗೆ ಬಿಜೆಪಿಯ ಧೋರಣೆ ನಮಗೆ ಚೆನ್ನಾಗಿ ತಿಳಿದಿದೆ. ದೇಶದ ಹದಿನಾರು ಪ್ರತಿಶತದಷ್ಟು ಜನಸಂಖ್ಯೆಯ ಮುಸ್ಲಿಮಲ್ಲಿ, ಅವರಿಗೆ (ಬಿಜೆಪಿ ನಾಯಕರಿಗೆ) ಒಬ್ಬರನ್ನೂ ಹುಡುಕಲಾಗಲಿಲ್ಲ. ಈ ಜನಸಂಖ್ಯೆಗೆ ಯಾವುದೇ ಪ್ರಾತಿನಿಧ್ಯವಿಲ್ಲದಿರುವಾಗ, ಅವರು ಮುಸ್ಲಿಮರ ಬಗ್ಗೆ ಯಾವ ರೀತಿಯ ಚಿಂತನೆಯನ್ನು ಹೊಂದಿದ್ದಾರೆಂದು ನಮಗೆ ತಿಳಿದಿದೆ” ಎಂದು ಅಬ್ದುಲ್ಲಾ ಹೇಳಿದ್ದಾರೆ.

ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಲು ಜಮ್ಮು ಕಾಶ್ಮೀರದಲ್ಲಿ “ಮೂರು ಕುಟುಂಬಗಳ ಆಡಳಿತ” ನಡೆಯುತ್ತಿದೆ ಎಂದು ಪ್ರಚಾರ ಮಾಡುತ್ತಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಆರೋಪಿಸಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಏನೂ ಸಿಕ್ಕಿಲ್ಲ. ಬಿಜೆಪಿಗೆ ತೋರಿಸಲು ಏನೂ ಇಲ್ಲ. ಆದ್ದರಿಂದ ಪ್ರಧಾನಿ ಮತ್ತು ಗೃಹ ಸಚಿವರು ಮೂರು ಕುಟುಂಬಗಳನ್ನು ಗುರಿಯಾಗಿಸುತ್ತಿದ್ದಾರೆ. ಅವರು ಏನಾದರೂ ಮಾಡಿದ್ದರೆ ಅವರು ಇದನ್ನು ಮಾಡಬೇಕಾಗಿರಲಿಲ್ಲ” ಅವರು ಹೇಳಿದ್ದಾರೆ.

ಇದನ್ನೂಓದಿ: ಅಲ್-ಜಝೀರಾ ಕಚೇರಿಗೆ ದಾಳಿ ನಡೆಸಿದ ಇಸ್ರೇಲಿ ಪಡೆ : 45 ದಿನಗಳೊಳಗೆ ಮುಚ್ಚುವಂತೆ ಆದೇಶ

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ 2014 ರ ವಿಧಾನಸಭಾ ಚುನಾವಣೆಗಳಿಗೆ ಹೋಲಿಸಿದರೆ ಈ ವರ್ಷ ಕಡಿಮೆ ಮತದಾನದ ಆಗರುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

“2014 ಕ್ಕಿಂತ ಕಡಿಮೆ ಮತದಾನ ನಡೆದ ಕೆಲವು ಕ್ಷೇತ್ರಗಳಿವೆ. ಉದಾಹರಣೆಗೆ, ನೂರಾಬಾದ್ (ಈಗ ಡಿ ಎಚ್ ಪೋರಾ) ಭಾಗದಲ್ಲಿ 2014 ರಲ್ಲಿ ಶೇಕಡಾ 80 ರಷ್ಟು ಮತದಾನವಾಗಿತ್ತು ಆದರೆ ಈ ಬಾರಿ ಅದು ಶೇಕಡಾ 20 ರಷ್ಟು ಕಡಿಮೆಯಾಗಿದೆ (ಶೇ 68). ಈ ಬಾರಿ ಬಹಿಷ್ಕಾರ ಇಲ್ಲದಿದ್ದರೂ ಅವರ ಪ್ರಕಾರ ಎಲ್ಲವೂ ಸಹಜವಾಗಿದ್ದರೂ ಈ ಬಾರಿ ಏಕೆ ಹೀಗಾಯಿತು ಎಂಬುದನ್ನು ಈಗಿನ ಸರಕಾರ ಯೋಚಿಸಬೇಕಿದೆ” ಎಂದಿದ್ದಾರೆ.

ಸೋಮವಾರ ರಾಹುಲ್ ಗಾಂಧಿಯವರ ಕಾಶ್ಮೀರ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಎದುರಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕರಿಗೆ ಇನ್ನೂ ಒಂದೆರಡು ಭೇಟಿ ನೀಡುವಂತೆ ಸಲಹೆ ನೀಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...