HomeUncategorizedಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

- Advertisement -
- Advertisement -

ರಾಜ್ಯದ ಜನರಿಗೆ ಅತಂತ್ರ ವಿಧಾನಸಭಾ ಪರಿಸ್ಥಿತಿ ತಪ್ಪಿಸುವ ಆಯ್ಕೆಯಾಗಿ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ ಎಂದು ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. ಪಕ್ಷದ ಝಾದಿಬಲ್ ಅಭ್ಯರ್ಥಿ ತನ್ವಿರ್ ಸಾದಿಕ್ ಅವರನ್ನು ಬೆಂಬಲಿಸಿ ದಾಲ್ ಸರೋವರದಲ್ಲಿ ಶಿಕಾರಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದರಲ್ಲಿ ಸ್ಪರ್ಧಿಸಲಿವೆ. ಉಳಿದ ಆರು ಸ್ಥಾನಗಳು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ “ಸೌಹಾರ್ದ ಸ್ಪರ್ಧೆ” ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂಓದಿ:‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

“ಈವಿಎಮ್‌ ಯಂತ್ರದಲ್ಲಿ ಏನಿದೆಯೊ ಗೊತ್ತಿಲ್ಲ. ಆದರೆ ಅತಂತ್ರ ಚುನಾವಣೆಯ ಇದು ಆಗಿರುವುದಿಲ್ಲ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. “ನಾವು ಜಮ್ಮು ಕಾಶ್ಮೀರ ಚುನಾವಣೋತ್ತರ ಮೈತ್ರಿಗೆ ಹೋಗಬಹುದಿತ್ತು ಆದರೆ ಜನರಿಗೆ ಒಂದು ಆಯ್ಕೆಯನ್ನು ನೀಡಲು (ಚುನಾವಣೆಯ ಮೊದಲು) ಮೈತ್ರಿಯನ್ನು ರಚಿಸಲಾಗಿದೆ. ಇದರಿಂದದಾಗಿ, ಅತಂತ್ರ ವಿಧಾನಸಭೆ ಇರುವುದಿಲ್ಲ ಮತ್ತು ಸರ್ಕಾರ ರಚನೆಯಾಗುವುದಿಲ್ಲ ಎಂಬ ಅನುಮಾನ ಜನರಿಗೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯನ್ನು ವಿಸ್ತರಿಸಲು ಬಿಜೆಪಿಯು ಅತಂತ್ರ ವಿಧಾನಸಭಾ ಫಲಿತಾಂಶ ಬಯಸುತ್ತದೆ ಎಂದು ಅಬ್ದುಲ್ಲಾ ಹೇಳಿದ್ದಾರೆ. “ಬಿಜೆಪಿಯು ಹಂಗ್ ಅಸೆಂಬ್ಲಿಯನ್ನು ಫಲಿತಾಂಶಕ್ಕಾಗಿ ಬಯಸುತ್ತದೆ., ಇದರಿಂದಾಗಿ ಅವರು (ಲೆಫ್ಟಿನೆಂಟ್) ರಾಜ್ಯಪಾಲರ ಆಳ್ವಿಕೆಯನ್ನು ವಿಸ್ತಬಹುದು. ಆದರೆ ಜನರು ಅದನ್ನು ಸಂಭವಿಸಲು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಉನ್ನತ ನಾಯಕರು ಜಮ್ಮುವಿನಲ್ಲಿ ಮಾಡುವಂತೆ ಕಾಶ್ಮೀರದಲ್ಲಿ ಏಕೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕಣಿವೆಯಲ್ಲಿ ಅವರಿಗೆ ಏನೂ ದಕ್ಕುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

“ಬಿಜೆಪಿಗೆ ಕಾಶ್ಮೀರದಲ್ಲಿ ಏನೂ ದಕ್ಕುವುದಿಲ್ಲ. ಮುಸ್ಲಿಮರ ಬಗ್ಗೆ ಬಿಜೆಪಿಯ ಧೋರಣೆ ನಮಗೆ ಚೆನ್ನಾಗಿ ತಿಳಿದಿದೆ. ದೇಶದ ಹದಿನಾರು ಪ್ರತಿಶತದಷ್ಟು ಜನಸಂಖ್ಯೆಯ ಮುಸ್ಲಿಮಲ್ಲಿ, ಅವರಿಗೆ (ಬಿಜೆಪಿ ನಾಯಕರಿಗೆ) ಒಬ್ಬರನ್ನೂ ಹುಡುಕಲಾಗಲಿಲ್ಲ. ಈ ಜನಸಂಖ್ಯೆಗೆ ಯಾವುದೇ ಪ್ರಾತಿನಿಧ್ಯವಿಲ್ಲದಿರುವಾಗ, ಅವರು ಮುಸ್ಲಿಮರ ಬಗ್ಗೆ ಯಾವ ರೀತಿಯ ಚಿಂತನೆಯನ್ನು ಹೊಂದಿದ್ದಾರೆಂದು ನಮಗೆ ತಿಳಿದಿದೆ” ಎಂದು ಅಬ್ದುಲ್ಲಾ ಹೇಳಿದ್ದಾರೆ.

ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಲು ಜಮ್ಮು ಕಾಶ್ಮೀರದಲ್ಲಿ “ಮೂರು ಕುಟುಂಬಗಳ ಆಡಳಿತ” ನಡೆಯುತ್ತಿದೆ ಎಂದು ಪ್ರಚಾರ ಮಾಡುತ್ತಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಆರೋಪಿಸಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಏನೂ ಸಿಕ್ಕಿಲ್ಲ. ಬಿಜೆಪಿಗೆ ತೋರಿಸಲು ಏನೂ ಇಲ್ಲ. ಆದ್ದರಿಂದ ಪ್ರಧಾನಿ ಮತ್ತು ಗೃಹ ಸಚಿವರು ಮೂರು ಕುಟುಂಬಗಳನ್ನು ಗುರಿಯಾಗಿಸುತ್ತಿದ್ದಾರೆ. ಅವರು ಏನಾದರೂ ಮಾಡಿದ್ದರೆ ಅವರು ಇದನ್ನು ಮಾಡಬೇಕಾಗಿರಲಿಲ್ಲ” ಅವರು ಹೇಳಿದ್ದಾರೆ.

ಇದನ್ನೂಓದಿ: ಅಲ್-ಜಝೀರಾ ಕಚೇರಿಗೆ ದಾಳಿ ನಡೆಸಿದ ಇಸ್ರೇಲಿ ಪಡೆ : 45 ದಿನಗಳೊಳಗೆ ಮುಚ್ಚುವಂತೆ ಆದೇಶ

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ 2014 ರ ವಿಧಾನಸಭಾ ಚುನಾವಣೆಗಳಿಗೆ ಹೋಲಿಸಿದರೆ ಈ ವರ್ಷ ಕಡಿಮೆ ಮತದಾನದ ಆಗರುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

“2014 ಕ್ಕಿಂತ ಕಡಿಮೆ ಮತದಾನ ನಡೆದ ಕೆಲವು ಕ್ಷೇತ್ರಗಳಿವೆ. ಉದಾಹರಣೆಗೆ, ನೂರಾಬಾದ್ (ಈಗ ಡಿ ಎಚ್ ಪೋರಾ) ಭಾಗದಲ್ಲಿ 2014 ರಲ್ಲಿ ಶೇಕಡಾ 80 ರಷ್ಟು ಮತದಾನವಾಗಿತ್ತು ಆದರೆ ಈ ಬಾರಿ ಅದು ಶೇಕಡಾ 20 ರಷ್ಟು ಕಡಿಮೆಯಾಗಿದೆ (ಶೇ 68). ಈ ಬಾರಿ ಬಹಿಷ್ಕಾರ ಇಲ್ಲದಿದ್ದರೂ ಅವರ ಪ್ರಕಾರ ಎಲ್ಲವೂ ಸಹಜವಾಗಿದ್ದರೂ ಈ ಬಾರಿ ಏಕೆ ಹೀಗಾಯಿತು ಎಂಬುದನ್ನು ಈಗಿನ ಸರಕಾರ ಯೋಚಿಸಬೇಕಿದೆ” ಎಂದಿದ್ದಾರೆ.

ಸೋಮವಾರ ರಾಹುಲ್ ಗಾಂಧಿಯವರ ಕಾಶ್ಮೀರ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಎದುರಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕರಿಗೆ ಇನ್ನೂ ಒಂದೆರಡು ಭೇಟಿ ನೀಡುವಂತೆ ಸಲಹೆ ನೀಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...