HomeUncategorizedಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

- Advertisement -
- Advertisement -

ರಾಜ್ಯದ ಜನರಿಗೆ ಅತಂತ್ರ ವಿಧಾನಸಭಾ ಪರಿಸ್ಥಿತಿ ತಪ್ಪಿಸುವ ಆಯ್ಕೆಯಾಗಿ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ ಎಂದು ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. ಪಕ್ಷದ ಝಾದಿಬಲ್ ಅಭ್ಯರ್ಥಿ ತನ್ವಿರ್ ಸಾದಿಕ್ ಅವರನ್ನು ಬೆಂಬಲಿಸಿ ದಾಲ್ ಸರೋವರದಲ್ಲಿ ಶಿಕಾರಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದರಲ್ಲಿ ಸ್ಪರ್ಧಿಸಲಿವೆ. ಉಳಿದ ಆರು ಸ್ಥಾನಗಳು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ “ಸೌಹಾರ್ದ ಸ್ಪರ್ಧೆ” ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂಓದಿ:‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

“ಈವಿಎಮ್‌ ಯಂತ್ರದಲ್ಲಿ ಏನಿದೆಯೊ ಗೊತ್ತಿಲ್ಲ. ಆದರೆ ಅತಂತ್ರ ಚುನಾವಣೆಯ ಇದು ಆಗಿರುವುದಿಲ್ಲ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. “ನಾವು ಜಮ್ಮು ಕಾಶ್ಮೀರ ಚುನಾವಣೋತ್ತರ ಮೈತ್ರಿಗೆ ಹೋಗಬಹುದಿತ್ತು ಆದರೆ ಜನರಿಗೆ ಒಂದು ಆಯ್ಕೆಯನ್ನು ನೀಡಲು (ಚುನಾವಣೆಯ ಮೊದಲು) ಮೈತ್ರಿಯನ್ನು ರಚಿಸಲಾಗಿದೆ. ಇದರಿಂದದಾಗಿ, ಅತಂತ್ರ ವಿಧಾನಸಭೆ ಇರುವುದಿಲ್ಲ ಮತ್ತು ಸರ್ಕಾರ ರಚನೆಯಾಗುವುದಿಲ್ಲ ಎಂಬ ಅನುಮಾನ ಜನರಿಗೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯನ್ನು ವಿಸ್ತರಿಸಲು ಬಿಜೆಪಿಯು ಅತಂತ್ರ ವಿಧಾನಸಭಾ ಫಲಿತಾಂಶ ಬಯಸುತ್ತದೆ ಎಂದು ಅಬ್ದುಲ್ಲಾ ಹೇಳಿದ್ದಾರೆ. “ಬಿಜೆಪಿಯು ಹಂಗ್ ಅಸೆಂಬ್ಲಿಯನ್ನು ಫಲಿತಾಂಶಕ್ಕಾಗಿ ಬಯಸುತ್ತದೆ., ಇದರಿಂದಾಗಿ ಅವರು (ಲೆಫ್ಟಿನೆಂಟ್) ರಾಜ್ಯಪಾಲರ ಆಳ್ವಿಕೆಯನ್ನು ವಿಸ್ತಬಹುದು. ಆದರೆ ಜನರು ಅದನ್ನು ಸಂಭವಿಸಲು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಉನ್ನತ ನಾಯಕರು ಜಮ್ಮುವಿನಲ್ಲಿ ಮಾಡುವಂತೆ ಕಾಶ್ಮೀರದಲ್ಲಿ ಏಕೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕಣಿವೆಯಲ್ಲಿ ಅವರಿಗೆ ಏನೂ ದಕ್ಕುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

“ಬಿಜೆಪಿಗೆ ಕಾಶ್ಮೀರದಲ್ಲಿ ಏನೂ ದಕ್ಕುವುದಿಲ್ಲ. ಮುಸ್ಲಿಮರ ಬಗ್ಗೆ ಬಿಜೆಪಿಯ ಧೋರಣೆ ನಮಗೆ ಚೆನ್ನಾಗಿ ತಿಳಿದಿದೆ. ದೇಶದ ಹದಿನಾರು ಪ್ರತಿಶತದಷ್ಟು ಜನಸಂಖ್ಯೆಯ ಮುಸ್ಲಿಮಲ್ಲಿ, ಅವರಿಗೆ (ಬಿಜೆಪಿ ನಾಯಕರಿಗೆ) ಒಬ್ಬರನ್ನೂ ಹುಡುಕಲಾಗಲಿಲ್ಲ. ಈ ಜನಸಂಖ್ಯೆಗೆ ಯಾವುದೇ ಪ್ರಾತಿನಿಧ್ಯವಿಲ್ಲದಿರುವಾಗ, ಅವರು ಮುಸ್ಲಿಮರ ಬಗ್ಗೆ ಯಾವ ರೀತಿಯ ಚಿಂತನೆಯನ್ನು ಹೊಂದಿದ್ದಾರೆಂದು ನಮಗೆ ತಿಳಿದಿದೆ” ಎಂದು ಅಬ್ದುಲ್ಲಾ ಹೇಳಿದ್ದಾರೆ.

ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಲು ಜಮ್ಮು ಕಾಶ್ಮೀರದಲ್ಲಿ “ಮೂರು ಕುಟುಂಬಗಳ ಆಡಳಿತ” ನಡೆಯುತ್ತಿದೆ ಎಂದು ಪ್ರಚಾರ ಮಾಡುತ್ತಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಆರೋಪಿಸಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಏನೂ ಸಿಕ್ಕಿಲ್ಲ. ಬಿಜೆಪಿಗೆ ತೋರಿಸಲು ಏನೂ ಇಲ್ಲ. ಆದ್ದರಿಂದ ಪ್ರಧಾನಿ ಮತ್ತು ಗೃಹ ಸಚಿವರು ಮೂರು ಕುಟುಂಬಗಳನ್ನು ಗುರಿಯಾಗಿಸುತ್ತಿದ್ದಾರೆ. ಅವರು ಏನಾದರೂ ಮಾಡಿದ್ದರೆ ಅವರು ಇದನ್ನು ಮಾಡಬೇಕಾಗಿರಲಿಲ್ಲ” ಅವರು ಹೇಳಿದ್ದಾರೆ.

ಇದನ್ನೂಓದಿ: ಅಲ್-ಜಝೀರಾ ಕಚೇರಿಗೆ ದಾಳಿ ನಡೆಸಿದ ಇಸ್ರೇಲಿ ಪಡೆ : 45 ದಿನಗಳೊಳಗೆ ಮುಚ್ಚುವಂತೆ ಆದೇಶ

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ 2014 ರ ವಿಧಾನಸಭಾ ಚುನಾವಣೆಗಳಿಗೆ ಹೋಲಿಸಿದರೆ ಈ ವರ್ಷ ಕಡಿಮೆ ಮತದಾನದ ಆಗರುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

“2014 ಕ್ಕಿಂತ ಕಡಿಮೆ ಮತದಾನ ನಡೆದ ಕೆಲವು ಕ್ಷೇತ್ರಗಳಿವೆ. ಉದಾಹರಣೆಗೆ, ನೂರಾಬಾದ್ (ಈಗ ಡಿ ಎಚ್ ಪೋರಾ) ಭಾಗದಲ್ಲಿ 2014 ರಲ್ಲಿ ಶೇಕಡಾ 80 ರಷ್ಟು ಮತದಾನವಾಗಿತ್ತು ಆದರೆ ಈ ಬಾರಿ ಅದು ಶೇಕಡಾ 20 ರಷ್ಟು ಕಡಿಮೆಯಾಗಿದೆ (ಶೇ 68). ಈ ಬಾರಿ ಬಹಿಷ್ಕಾರ ಇಲ್ಲದಿದ್ದರೂ ಅವರ ಪ್ರಕಾರ ಎಲ್ಲವೂ ಸಹಜವಾಗಿದ್ದರೂ ಈ ಬಾರಿ ಏಕೆ ಹೀಗಾಯಿತು ಎಂಬುದನ್ನು ಈಗಿನ ಸರಕಾರ ಯೋಚಿಸಬೇಕಿದೆ” ಎಂದಿದ್ದಾರೆ.

ಸೋಮವಾರ ರಾಹುಲ್ ಗಾಂಧಿಯವರ ಕಾಶ್ಮೀರ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಎದುರಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕರಿಗೆ ಇನ್ನೂ ಒಂದೆರಡು ಭೇಟಿ ನೀಡುವಂತೆ ಸಲಹೆ ನೀಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...