HomeUncategorizedಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

- Advertisement -
- Advertisement -

ರಾಜ್ಯದ ಜನರಿಗೆ ಅತಂತ್ರ ವಿಧಾನಸಭಾ ಪರಿಸ್ಥಿತಿ ತಪ್ಪಿಸುವ ಆಯ್ಕೆಯಾಗಿ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ ಎಂದು ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. ಪಕ್ಷದ ಝಾದಿಬಲ್ ಅಭ್ಯರ್ಥಿ ತನ್ವಿರ್ ಸಾದಿಕ್ ಅವರನ್ನು ಬೆಂಬಲಿಸಿ ದಾಲ್ ಸರೋವರದಲ್ಲಿ ಶಿಕಾರಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದರಲ್ಲಿ ಸ್ಪರ್ಧಿಸಲಿವೆ. ಉಳಿದ ಆರು ಸ್ಥಾನಗಳು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ “ಸೌಹಾರ್ದ ಸ್ಪರ್ಧೆ” ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂಓದಿ:‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

“ಈವಿಎಮ್‌ ಯಂತ್ರದಲ್ಲಿ ಏನಿದೆಯೊ ಗೊತ್ತಿಲ್ಲ. ಆದರೆ ಅತಂತ್ರ ಚುನಾವಣೆಯ ಇದು ಆಗಿರುವುದಿಲ್ಲ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. “ನಾವು ಜಮ್ಮು ಕಾಶ್ಮೀರ ಚುನಾವಣೋತ್ತರ ಮೈತ್ರಿಗೆ ಹೋಗಬಹುದಿತ್ತು ಆದರೆ ಜನರಿಗೆ ಒಂದು ಆಯ್ಕೆಯನ್ನು ನೀಡಲು (ಚುನಾವಣೆಯ ಮೊದಲು) ಮೈತ್ರಿಯನ್ನು ರಚಿಸಲಾಗಿದೆ. ಇದರಿಂದದಾಗಿ, ಅತಂತ್ರ ವಿಧಾನಸಭೆ ಇರುವುದಿಲ್ಲ ಮತ್ತು ಸರ್ಕಾರ ರಚನೆಯಾಗುವುದಿಲ್ಲ ಎಂಬ ಅನುಮಾನ ಜನರಿಗೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯನ್ನು ವಿಸ್ತರಿಸಲು ಬಿಜೆಪಿಯು ಅತಂತ್ರ ವಿಧಾನಸಭಾ ಫಲಿತಾಂಶ ಬಯಸುತ್ತದೆ ಎಂದು ಅಬ್ದುಲ್ಲಾ ಹೇಳಿದ್ದಾರೆ. “ಬಿಜೆಪಿಯು ಹಂಗ್ ಅಸೆಂಬ್ಲಿಯನ್ನು ಫಲಿತಾಂಶಕ್ಕಾಗಿ ಬಯಸುತ್ತದೆ., ಇದರಿಂದಾಗಿ ಅವರು (ಲೆಫ್ಟಿನೆಂಟ್) ರಾಜ್ಯಪಾಲರ ಆಳ್ವಿಕೆಯನ್ನು ವಿಸ್ತಬಹುದು. ಆದರೆ ಜನರು ಅದನ್ನು ಸಂಭವಿಸಲು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಉನ್ನತ ನಾಯಕರು ಜಮ್ಮುವಿನಲ್ಲಿ ಮಾಡುವಂತೆ ಕಾಶ್ಮೀರದಲ್ಲಿ ಏಕೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕಣಿವೆಯಲ್ಲಿ ಅವರಿಗೆ ಏನೂ ದಕ್ಕುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

“ಬಿಜೆಪಿಗೆ ಕಾಶ್ಮೀರದಲ್ಲಿ ಏನೂ ದಕ್ಕುವುದಿಲ್ಲ. ಮುಸ್ಲಿಮರ ಬಗ್ಗೆ ಬಿಜೆಪಿಯ ಧೋರಣೆ ನಮಗೆ ಚೆನ್ನಾಗಿ ತಿಳಿದಿದೆ. ದೇಶದ ಹದಿನಾರು ಪ್ರತಿಶತದಷ್ಟು ಜನಸಂಖ್ಯೆಯ ಮುಸ್ಲಿಮಲ್ಲಿ, ಅವರಿಗೆ (ಬಿಜೆಪಿ ನಾಯಕರಿಗೆ) ಒಬ್ಬರನ್ನೂ ಹುಡುಕಲಾಗಲಿಲ್ಲ. ಈ ಜನಸಂಖ್ಯೆಗೆ ಯಾವುದೇ ಪ್ರಾತಿನಿಧ್ಯವಿಲ್ಲದಿರುವಾಗ, ಅವರು ಮುಸ್ಲಿಮರ ಬಗ್ಗೆ ಯಾವ ರೀತಿಯ ಚಿಂತನೆಯನ್ನು ಹೊಂದಿದ್ದಾರೆಂದು ನಮಗೆ ತಿಳಿದಿದೆ” ಎಂದು ಅಬ್ದುಲ್ಲಾ ಹೇಳಿದ್ದಾರೆ.

ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಲು ಜಮ್ಮು ಕಾಶ್ಮೀರದಲ್ಲಿ “ಮೂರು ಕುಟುಂಬಗಳ ಆಡಳಿತ” ನಡೆಯುತ್ತಿದೆ ಎಂದು ಪ್ರಚಾರ ಮಾಡುತ್ತಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಆರೋಪಿಸಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಏನೂ ಸಿಕ್ಕಿಲ್ಲ. ಬಿಜೆಪಿಗೆ ತೋರಿಸಲು ಏನೂ ಇಲ್ಲ. ಆದ್ದರಿಂದ ಪ್ರಧಾನಿ ಮತ್ತು ಗೃಹ ಸಚಿವರು ಮೂರು ಕುಟುಂಬಗಳನ್ನು ಗುರಿಯಾಗಿಸುತ್ತಿದ್ದಾರೆ. ಅವರು ಏನಾದರೂ ಮಾಡಿದ್ದರೆ ಅವರು ಇದನ್ನು ಮಾಡಬೇಕಾಗಿರಲಿಲ್ಲ” ಅವರು ಹೇಳಿದ್ದಾರೆ.

ಇದನ್ನೂಓದಿ: ಅಲ್-ಜಝೀರಾ ಕಚೇರಿಗೆ ದಾಳಿ ನಡೆಸಿದ ಇಸ್ರೇಲಿ ಪಡೆ : 45 ದಿನಗಳೊಳಗೆ ಮುಚ್ಚುವಂತೆ ಆದೇಶ

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ 2014 ರ ವಿಧಾನಸಭಾ ಚುನಾವಣೆಗಳಿಗೆ ಹೋಲಿಸಿದರೆ ಈ ವರ್ಷ ಕಡಿಮೆ ಮತದಾನದ ಆಗರುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

“2014 ಕ್ಕಿಂತ ಕಡಿಮೆ ಮತದಾನ ನಡೆದ ಕೆಲವು ಕ್ಷೇತ್ರಗಳಿವೆ. ಉದಾಹರಣೆಗೆ, ನೂರಾಬಾದ್ (ಈಗ ಡಿ ಎಚ್ ಪೋರಾ) ಭಾಗದಲ್ಲಿ 2014 ರಲ್ಲಿ ಶೇಕಡಾ 80 ರಷ್ಟು ಮತದಾನವಾಗಿತ್ತು ಆದರೆ ಈ ಬಾರಿ ಅದು ಶೇಕಡಾ 20 ರಷ್ಟು ಕಡಿಮೆಯಾಗಿದೆ (ಶೇ 68). ಈ ಬಾರಿ ಬಹಿಷ್ಕಾರ ಇಲ್ಲದಿದ್ದರೂ ಅವರ ಪ್ರಕಾರ ಎಲ್ಲವೂ ಸಹಜವಾಗಿದ್ದರೂ ಈ ಬಾರಿ ಏಕೆ ಹೀಗಾಯಿತು ಎಂಬುದನ್ನು ಈಗಿನ ಸರಕಾರ ಯೋಚಿಸಬೇಕಿದೆ” ಎಂದಿದ್ದಾರೆ.

ಸೋಮವಾರ ರಾಹುಲ್ ಗಾಂಧಿಯವರ ಕಾಶ್ಮೀರ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಎದುರಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕರಿಗೆ ಇನ್ನೂ ಒಂದೆರಡು ಭೇಟಿ ನೀಡುವಂತೆ ಸಲಹೆ ನೀಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...