HomeUncategorizedಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

- Advertisement -
- Advertisement -

ರಾಜ್ಯದ ಜನರಿಗೆ ಅತಂತ್ರ ವಿಧಾನಸಭಾ ಪರಿಸ್ಥಿತಿ ತಪ್ಪಿಸುವ ಆಯ್ಕೆಯಾಗಿ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ ಎಂದು ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. ಪಕ್ಷದ ಝಾದಿಬಲ್ ಅಭ್ಯರ್ಥಿ ತನ್ವಿರ್ ಸಾದಿಕ್ ಅವರನ್ನು ಬೆಂಬಲಿಸಿ ದಾಲ್ ಸರೋವರದಲ್ಲಿ ಶಿಕಾರಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದರಲ್ಲಿ ಸ್ಪರ್ಧಿಸಲಿವೆ. ಉಳಿದ ಆರು ಸ್ಥಾನಗಳು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ “ಸೌಹಾರ್ದ ಸ್ಪರ್ಧೆ” ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂಓದಿ:‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

“ಈವಿಎಮ್‌ ಯಂತ್ರದಲ್ಲಿ ಏನಿದೆಯೊ ಗೊತ್ತಿಲ್ಲ. ಆದರೆ ಅತಂತ್ರ ಚುನಾವಣೆಯ ಇದು ಆಗಿರುವುದಿಲ್ಲ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. “ನಾವು ಜಮ್ಮು ಕಾಶ್ಮೀರ ಚುನಾವಣೋತ್ತರ ಮೈತ್ರಿಗೆ ಹೋಗಬಹುದಿತ್ತು ಆದರೆ ಜನರಿಗೆ ಒಂದು ಆಯ್ಕೆಯನ್ನು ನೀಡಲು (ಚುನಾವಣೆಯ ಮೊದಲು) ಮೈತ್ರಿಯನ್ನು ರಚಿಸಲಾಗಿದೆ. ಇದರಿಂದದಾಗಿ, ಅತಂತ್ರ ವಿಧಾನಸಭೆ ಇರುವುದಿಲ್ಲ ಮತ್ತು ಸರ್ಕಾರ ರಚನೆಯಾಗುವುದಿಲ್ಲ ಎಂಬ ಅನುಮಾನ ಜನರಿಗೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯನ್ನು ವಿಸ್ತರಿಸಲು ಬಿಜೆಪಿಯು ಅತಂತ್ರ ವಿಧಾನಸಭಾ ಫಲಿತಾಂಶ ಬಯಸುತ್ತದೆ ಎಂದು ಅಬ್ದುಲ್ಲಾ ಹೇಳಿದ್ದಾರೆ. “ಬಿಜೆಪಿಯು ಹಂಗ್ ಅಸೆಂಬ್ಲಿಯನ್ನು ಫಲಿತಾಂಶಕ್ಕಾಗಿ ಬಯಸುತ್ತದೆ., ಇದರಿಂದಾಗಿ ಅವರು (ಲೆಫ್ಟಿನೆಂಟ್) ರಾಜ್ಯಪಾಲರ ಆಳ್ವಿಕೆಯನ್ನು ವಿಸ್ತಬಹುದು. ಆದರೆ ಜನರು ಅದನ್ನು ಸಂಭವಿಸಲು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಉನ್ನತ ನಾಯಕರು ಜಮ್ಮುವಿನಲ್ಲಿ ಮಾಡುವಂತೆ ಕಾಶ್ಮೀರದಲ್ಲಿ ಏಕೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕಣಿವೆಯಲ್ಲಿ ಅವರಿಗೆ ಏನೂ ದಕ್ಕುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂಓದಿ:ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

“ಬಿಜೆಪಿಗೆ ಕಾಶ್ಮೀರದಲ್ಲಿ ಏನೂ ದಕ್ಕುವುದಿಲ್ಲ. ಮುಸ್ಲಿಮರ ಬಗ್ಗೆ ಬಿಜೆಪಿಯ ಧೋರಣೆ ನಮಗೆ ಚೆನ್ನಾಗಿ ತಿಳಿದಿದೆ. ದೇಶದ ಹದಿನಾರು ಪ್ರತಿಶತದಷ್ಟು ಜನಸಂಖ್ಯೆಯ ಮುಸ್ಲಿಮಲ್ಲಿ, ಅವರಿಗೆ (ಬಿಜೆಪಿ ನಾಯಕರಿಗೆ) ಒಬ್ಬರನ್ನೂ ಹುಡುಕಲಾಗಲಿಲ್ಲ. ಈ ಜನಸಂಖ್ಯೆಗೆ ಯಾವುದೇ ಪ್ರಾತಿನಿಧ್ಯವಿಲ್ಲದಿರುವಾಗ, ಅವರು ಮುಸ್ಲಿಮರ ಬಗ್ಗೆ ಯಾವ ರೀತಿಯ ಚಿಂತನೆಯನ್ನು ಹೊಂದಿದ್ದಾರೆಂದು ನಮಗೆ ತಿಳಿದಿದೆ” ಎಂದು ಅಬ್ದುಲ್ಲಾ ಹೇಳಿದ್ದಾರೆ.

ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಲು ಜಮ್ಮು ಕಾಶ್ಮೀರದಲ್ಲಿ “ಮೂರು ಕುಟುಂಬಗಳ ಆಡಳಿತ” ನಡೆಯುತ್ತಿದೆ ಎಂದು ಪ್ರಚಾರ ಮಾಡುತ್ತಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಆರೋಪಿಸಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಏನೂ ಸಿಕ್ಕಿಲ್ಲ. ಬಿಜೆಪಿಗೆ ತೋರಿಸಲು ಏನೂ ಇಲ್ಲ. ಆದ್ದರಿಂದ ಪ್ರಧಾನಿ ಮತ್ತು ಗೃಹ ಸಚಿವರು ಮೂರು ಕುಟುಂಬಗಳನ್ನು ಗುರಿಯಾಗಿಸುತ್ತಿದ್ದಾರೆ. ಅವರು ಏನಾದರೂ ಮಾಡಿದ್ದರೆ ಅವರು ಇದನ್ನು ಮಾಡಬೇಕಾಗಿರಲಿಲ್ಲ” ಅವರು ಹೇಳಿದ್ದಾರೆ.

ಇದನ್ನೂಓದಿ: ಅಲ್-ಜಝೀರಾ ಕಚೇರಿಗೆ ದಾಳಿ ನಡೆಸಿದ ಇಸ್ರೇಲಿ ಪಡೆ : 45 ದಿನಗಳೊಳಗೆ ಮುಚ್ಚುವಂತೆ ಆದೇಶ

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ 2014 ರ ವಿಧಾನಸಭಾ ಚುನಾವಣೆಗಳಿಗೆ ಹೋಲಿಸಿದರೆ ಈ ವರ್ಷ ಕಡಿಮೆ ಮತದಾನದ ಆಗರುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

“2014 ಕ್ಕಿಂತ ಕಡಿಮೆ ಮತದಾನ ನಡೆದ ಕೆಲವು ಕ್ಷೇತ್ರಗಳಿವೆ. ಉದಾಹರಣೆಗೆ, ನೂರಾಬಾದ್ (ಈಗ ಡಿ ಎಚ್ ಪೋರಾ) ಭಾಗದಲ್ಲಿ 2014 ರಲ್ಲಿ ಶೇಕಡಾ 80 ರಷ್ಟು ಮತದಾನವಾಗಿತ್ತು ಆದರೆ ಈ ಬಾರಿ ಅದು ಶೇಕಡಾ 20 ರಷ್ಟು ಕಡಿಮೆಯಾಗಿದೆ (ಶೇ 68). ಈ ಬಾರಿ ಬಹಿಷ್ಕಾರ ಇಲ್ಲದಿದ್ದರೂ ಅವರ ಪ್ರಕಾರ ಎಲ್ಲವೂ ಸಹಜವಾಗಿದ್ದರೂ ಈ ಬಾರಿ ಏಕೆ ಹೀಗಾಯಿತು ಎಂಬುದನ್ನು ಈಗಿನ ಸರಕಾರ ಯೋಚಿಸಬೇಕಿದೆ” ಎಂದಿದ್ದಾರೆ.

ಸೋಮವಾರ ರಾಹುಲ್ ಗಾಂಧಿಯವರ ಕಾಶ್ಮೀರ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಎದುರಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕರಿಗೆ ಇನ್ನೂ ಒಂದೆರಡು ಭೇಟಿ ನೀಡುವಂತೆ ಸಲಹೆ ನೀಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...