Homeಮುಖಪುಟಶ್ರೀನಗರ: ಪತ್ರಕರ್ತರನ್ನು ಥಳಿಸಿದ್ದ ಪೊಲೀಸರ ವಿರುದ್ಧ ಕ್ರಮಕ್ಕೆ ಆದೇಶ

ಶ್ರೀನಗರ: ಪತ್ರಕರ್ತರನ್ನು ಥಳಿಸಿದ್ದ ಪೊಲೀಸರ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ಶ್ರೀನಗರದಲ್ಲಿ ಮೊಹರಂ ಮೆರವಣಿಗೆಯನ್ನು ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿತ್ತು. ಹಲ್ಲೆ ನಡೆದು ಒಂದು ದಿನದ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಶ್ರೀನಗರ ಎಸ್‌ಎಸ್‌ಪಿಗೆ ಸೂಚಿಸಿದ್ದಾರೆ.

ಶ್ರೀನಗರದ ಕೆಲವು ಮಾಧ್ಯಮಗಳ ಜೊತೆಗೆ ಪೊಲೀಸರ ವರ್ತನೆಯ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಗಂಭೀರವಾದ  ಕ್ರಮವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಶ್ರೀನಗರದ ಜಹಾಂಗೀರ್ ಚೌಕ್ ಫ್ಲೈ ಓವರ್ ಬಳಿ 8 ನೇ ಮೊಹರಂ ಮೆರವಣಿಗೆಯನ್ನು ವರದಿ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ಫೋಟೋ ಜರ್ನಲಿಸ್ಟ್, ಸಾಜದ್ ಹಮೀದ್ ಅವರ ಕ್ಯಾಮೆರಾ ಲೆನ್ಸ್ ಅನ್ನು ಪೊಲೀಸರು ಹೊಡೆದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

ಶ್ರೀನಗರ ಪೊಲೀಸರು ಪತ್ರಕರ್ತರನ್ನು ಥಳಿಸುವ ವಿಡಿಯೊ, ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಪೊಲೀಸರ ಕೃತ್ಯಕ್ಕೆ ಕಾಶ್ಮೀರ ಪ್ರೆಸ್ ಕ್ಲಬ್ ಮತ್ತು ಕಾಶ್ಮೀರ ಪ್ರೆಸ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಸೇರಿದಂತೆ ಕಾಶ್ಮೀರ ಮೂಲದ ಮಾಧ್ಯಮ ಸಂಸ್ಥೆಗಳಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.

ಕಾಶ್ಮೀರ ಪ್ರೆಸ್ ಕ್ಲಬ್ , ’ಶೆರ್ಗರಿ ಪೊಲೀಸ್ ಠಾಣೆಯ ಪೊಲೀಸರು ಯಾವುದೇ ಪ್ರಚೋದನೆಯಿಲ್ಲದೆ ಮಾಧ್ಯಮದವರನ್ನು ಥಳಿಸಿದ್ದಾರೆ. ಈ ಪೊಲೀಸರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಪೊಲೀಸ್ ಅಧಿಕಾರಿಗಳು ಸಂವಿಧಾನದ ಪ್ರಕಾರ ಪತ್ರಿಕಾ ಸ್ವಾತಂತ್ರ್ಯವನ್ನು ಗೌರವಿಸಬೇಕು” ಎಂದು ಒತ್ತಾಯಿಸಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಕೂಡ ಘಟನೆಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಪೀಪಲ್ಸ್ ಕಾನ್ಫರೆನ್ಸ್ ಮತ್ತು ಅಪ್ನಿ ಪಾರ್ಟಿ ಸೇರಿದಂತೆ ಇತರ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳು ಕೂಡ ಘಟನೆಯನ್ನು ಖಂಡಿಸಿವೆ.


ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ದೆಹಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...