HomeಮುಖಪುಟJ&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

J&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ, ಕೆಲವೊಂದು ಗಮನಾರ್ಹ ವಿಷಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಅವುಗಳಲ್ಲಿ ಚೌಧರಿ ಲಾಲ್ ಸಿಂಗ್ ಸೋಲು ಕೂಡ ಒಂದು.

ಕಥುವಾ ಬಾಲಕಿಯ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದ ಚೌಧರಿ ಲಾಲ್ ಸಿಂಗ್‌ಗೆ ಈ ಬಾರಿಯ ಚುನಾವಣೆಯಲ್ಲಿ ಬಸೋಹ್ಲಿ ಕ್ಷೇತ್ರದ ಟಿಕೆಟ್‌ ಅನ್ನು ಕಾಂಗ್ರೆಸ್ ನೀಡಿತ್ತು.

ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, ಚೌಧರಿ ಲಾಲ್ ಸಿಂಗ್ ಬಸೋಹ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿ ದರ್ಶನ್ ಕುಮಾರ್ ವಿರುದ್ಧ 16,034 ಮತಗಳಿಂದ ಸೋತಿದ್ದಾರೆ. ಕುಮಾರ್ ಅವರು 31,874 ಮತಗಳನ್ನು ಗಳಿಸಿದರೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಅವರು ಒಟ್ಟು 15,840 ಮತಗಳನ್ನು ಗಳಿಸಿದ್ದಾರೆ.

ಲಾಲ್ ಸಿಂಗ್‌ಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟಾಗ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಅವರ ಸೋಲಿನ ಮೂಲಕ ಕಾಂಗ್ರೆಸ್‌ಗೆ ರಾಜಕೀಯವಾಗಿ ಮತ್ತು ನೈತಿಕವಾಗಿ ಮುಖಭಂಗವಾಗಿದೆ.

ಚೌಧರಿ ಲಾಲ್ ಸಿಂಗ್ ಯಾರು?

2018ರಲ್ಲಿ ಜಮ್ಮು ಕಾಶ್ಮೀರದ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಲಾಲ್‌ ಸಿಂಗ್, ಎಂಟು ವರ್ಷದ ಅಲೆಮಾರಿ ಬುಡಕಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬೆಂಬಲಿಸಿ ಸ್ಥಳೀಯ ಹಿಂದುತ್ವ ನಾಯಕರು ಆಯೋಜಿಸಿದ್ದ’ಹಿಂದೂ ಏಕತಾ’ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಇದು ಲಾಲ್ ಸಿಂಗ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಅತ್ಯಾಚಾರ ಆರೋಪಿಗಳಾದ ಪರ್ವೇಶ್ ಕುಮಾರ್, ಸಂಜಿ ರಾಮ್ ಮತ್ತು ದೀಪಕ್ ಖಜುರಿಯಾ ಪರ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಲಾಲ್ ಸಿಂಗ್, ಪೊಲೀಸ್ ತನಿಖೆಯನ್ನು ಪ್ರಶ್ನಿಸಿದ್ದರು ಮತ್ತು ಅತ್ಯಾಚಾರ ಆರೋಪ ‘ಹಿಂದೂಗಳ ವಿರುದ್ಧದ ಪಿತೂರಿಯ ಪ್ರಯತ್ನ’ ಎಂದಿದ್ದರು. ಲಾಲ್ ಸಿಂಗ್‌ ಅವರ ಈ ಹೇಳಿಕೆ, ಆಗಿನ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ದ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಲಾಲ್ ಸಿಂಗ್ ‘ಡೋಗ್ರಾ ಸ್ವಾಭಿಮಾನ್ ಸಂಘಟನೆ’ ಎಂಬ ಪಕ್ಷ ಕಟ್ಟಿದ್ದರು. ನಂತರ, ಲೋಕಸಭೆ ಚುನಾವಣೆಯ ಸಂದರ್ಭ ಮಾರ್ಚ್ 20, 2024ರಂದು ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗಿದ್ದರು ಮತ್ತು ತನ್ನ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಬಳಿಕ, ಲೋಕಸಭಾ ಚುನಾವಣೆಗೆ ಲಾಲ್ ಸಿಂಗ್‌ಗೆ ಉದಂಪುರ-ದೋಡಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಅವರು 1.24 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ಲಾಲ್ ಸಿಂಗ್ ಅವರು ಈ ಹಿಂದೆ ಮೂರು ಬಾರಿ ಗೆದ್ದಿರುವ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದರು. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ, ಉದ್ಯಮಿ ದರ್ಶನ್ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಲಾಲ್ ಸಿಂಗ್

2014ಕ್ಕಿಂತ ಮೊದಲು ಲಾಲ್‌ ಸಿಂಗ್‌ ಕಾಂಗ್ರೆಸ್‌ನಲ್ಲೇ ಇದ್ದರು. ಎರಡು ಬಾರಿ ಪಕ್ಷದ ಟಿಕೆಟ್‌ನಲ್ಲಿ ಉಂದಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಸಂಸದರಾಗಿದ್ದರು. 2014ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಬಿಜೆಪಿ ಸೇರ್ಪಡೆಗೊಂಡು ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

ಜನವರಿ 2023ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು ಪ್ರವೇಶಿಸಿದಾಗ, ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಥುವಾ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಲಾಲ್ ಸಿಂಗ್, ಅವರ ಪತ್ನಿ ಮತ್ತು ಮಾಜಿ ಶಾಸಕ ಕಾಂತಾ ಅಂಡೋತ್ರಾ ನಡೆಸುತ್ತಿದ್ದ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು.

ಈ ವರ್ಷದ ಮಾರ್ಚ್‌ನಲ್ಲಿ ಲಾಲ್‌ ಸಿಂಗ್‌ಗೆ ಮರು ಸೇರ್ಪಡೆಗೊಂಡಾಗ, ಕಾಂಗ್ರೆಸ್ ವಿರುದ್ದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, “ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಾಲ್‌ ಸಿಂಗ್‌ ಅನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾಚಿಕೆಯಾಗಬೇಕು. 8 ವರ್ಷದ ಬಾಲಕಿಯ ಅತ್ಯಾಚಾರಿಗಳನ್ನು ಬೆಂಬಲಿಸಿದ ಲಾಲ್ ಸಿಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಮೂಲ ತತ್ವಗಳು ಮತ್ತು ಸಿದ್ಧಾಂತಗಳಿಗೆ ದ್ರೋಹ ಬಗೆದಿದೆ” ಎಂದಿದ್ದರು.

ಲಾಲ್‌ ಸಿಂಗ್‌ಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದು ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಂದು ಹೇಳಲಾಗಿತ್ತು. ಆದರೆ, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ. ಸಚಿವರಾಗಿದ್ದಾಗಲೇ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆದ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ, ಹಿಂದುತ್ವದ ಪ್ರತಿಪಾದಕನಿಗೆ ಟಿಕೆಟ್ ಕೊಟ್ಟಿದ್ದ ಕಾಂಗ್ರೆಸ್‌ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು : ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...