HomeಮುಖಪುಟJ&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

J&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ, ಕೆಲವೊಂದು ಗಮನಾರ್ಹ ವಿಷಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಅವುಗಳಲ್ಲಿ ಚೌಧರಿ ಲಾಲ್ ಸಿಂಗ್ ಸೋಲು ಕೂಡ ಒಂದು.

ಕಥುವಾ ಬಾಲಕಿಯ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದ ಚೌಧರಿ ಲಾಲ್ ಸಿಂಗ್‌ಗೆ ಈ ಬಾರಿಯ ಚುನಾವಣೆಯಲ್ಲಿ ಬಸೋಹ್ಲಿ ಕ್ಷೇತ್ರದ ಟಿಕೆಟ್‌ ಅನ್ನು ಕಾಂಗ್ರೆಸ್ ನೀಡಿತ್ತು.

ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, ಚೌಧರಿ ಲಾಲ್ ಸಿಂಗ್ ಬಸೋಹ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿ ದರ್ಶನ್ ಕುಮಾರ್ ವಿರುದ್ಧ 16,034 ಮತಗಳಿಂದ ಸೋತಿದ್ದಾರೆ. ಕುಮಾರ್ ಅವರು 31,874 ಮತಗಳನ್ನು ಗಳಿಸಿದರೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಅವರು ಒಟ್ಟು 15,840 ಮತಗಳನ್ನು ಗಳಿಸಿದ್ದಾರೆ.

ಲಾಲ್ ಸಿಂಗ್‌ಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟಾಗ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಅವರ ಸೋಲಿನ ಮೂಲಕ ಕಾಂಗ್ರೆಸ್‌ಗೆ ರಾಜಕೀಯವಾಗಿ ಮತ್ತು ನೈತಿಕವಾಗಿ ಮುಖಭಂಗವಾಗಿದೆ.

ಚೌಧರಿ ಲಾಲ್ ಸಿಂಗ್ ಯಾರು?

2018ರಲ್ಲಿ ಜಮ್ಮು ಕಾಶ್ಮೀರದ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಲಾಲ್‌ ಸಿಂಗ್, ಎಂಟು ವರ್ಷದ ಅಲೆಮಾರಿ ಬುಡಕಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬೆಂಬಲಿಸಿ ಸ್ಥಳೀಯ ಹಿಂದುತ್ವ ನಾಯಕರು ಆಯೋಜಿಸಿದ್ದ’ಹಿಂದೂ ಏಕತಾ’ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಇದು ಲಾಲ್ ಸಿಂಗ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಅತ್ಯಾಚಾರ ಆರೋಪಿಗಳಾದ ಪರ್ವೇಶ್ ಕುಮಾರ್, ಸಂಜಿ ರಾಮ್ ಮತ್ತು ದೀಪಕ್ ಖಜುರಿಯಾ ಪರ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಲಾಲ್ ಸಿಂಗ್, ಪೊಲೀಸ್ ತನಿಖೆಯನ್ನು ಪ್ರಶ್ನಿಸಿದ್ದರು ಮತ್ತು ಅತ್ಯಾಚಾರ ಆರೋಪ ‘ಹಿಂದೂಗಳ ವಿರುದ್ಧದ ಪಿತೂರಿಯ ಪ್ರಯತ್ನ’ ಎಂದಿದ್ದರು. ಲಾಲ್ ಸಿಂಗ್‌ ಅವರ ಈ ಹೇಳಿಕೆ, ಆಗಿನ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ದ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಲಾಲ್ ಸಿಂಗ್ ‘ಡೋಗ್ರಾ ಸ್ವಾಭಿಮಾನ್ ಸಂಘಟನೆ’ ಎಂಬ ಪಕ್ಷ ಕಟ್ಟಿದ್ದರು. ನಂತರ, ಲೋಕಸಭೆ ಚುನಾವಣೆಯ ಸಂದರ್ಭ ಮಾರ್ಚ್ 20, 2024ರಂದು ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗಿದ್ದರು ಮತ್ತು ತನ್ನ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಬಳಿಕ, ಲೋಕಸಭಾ ಚುನಾವಣೆಗೆ ಲಾಲ್ ಸಿಂಗ್‌ಗೆ ಉದಂಪುರ-ದೋಡಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಅವರು 1.24 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ಲಾಲ್ ಸಿಂಗ್ ಅವರು ಈ ಹಿಂದೆ ಮೂರು ಬಾರಿ ಗೆದ್ದಿರುವ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದರು. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ, ಉದ್ಯಮಿ ದರ್ಶನ್ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಲಾಲ್ ಸಿಂಗ್

2014ಕ್ಕಿಂತ ಮೊದಲು ಲಾಲ್‌ ಸಿಂಗ್‌ ಕಾಂಗ್ರೆಸ್‌ನಲ್ಲೇ ಇದ್ದರು. ಎರಡು ಬಾರಿ ಪಕ್ಷದ ಟಿಕೆಟ್‌ನಲ್ಲಿ ಉಂದಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಸಂಸದರಾಗಿದ್ದರು. 2014ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಬಿಜೆಪಿ ಸೇರ್ಪಡೆಗೊಂಡು ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

ಜನವರಿ 2023ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು ಪ್ರವೇಶಿಸಿದಾಗ, ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಥುವಾ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಲಾಲ್ ಸಿಂಗ್, ಅವರ ಪತ್ನಿ ಮತ್ತು ಮಾಜಿ ಶಾಸಕ ಕಾಂತಾ ಅಂಡೋತ್ರಾ ನಡೆಸುತ್ತಿದ್ದ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು.

ಈ ವರ್ಷದ ಮಾರ್ಚ್‌ನಲ್ಲಿ ಲಾಲ್‌ ಸಿಂಗ್‌ಗೆ ಮರು ಸೇರ್ಪಡೆಗೊಂಡಾಗ, ಕಾಂಗ್ರೆಸ್ ವಿರುದ್ದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, “ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಾಲ್‌ ಸಿಂಗ್‌ ಅನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾಚಿಕೆಯಾಗಬೇಕು. 8 ವರ್ಷದ ಬಾಲಕಿಯ ಅತ್ಯಾಚಾರಿಗಳನ್ನು ಬೆಂಬಲಿಸಿದ ಲಾಲ್ ಸಿಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಮೂಲ ತತ್ವಗಳು ಮತ್ತು ಸಿದ್ಧಾಂತಗಳಿಗೆ ದ್ರೋಹ ಬಗೆದಿದೆ” ಎಂದಿದ್ದರು.

ಲಾಲ್‌ ಸಿಂಗ್‌ಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದು ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಂದು ಹೇಳಲಾಗಿತ್ತು. ಆದರೆ, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ. ಸಚಿವರಾಗಿದ್ದಾಗಲೇ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆದ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ, ಹಿಂದುತ್ವದ ಪ್ರತಿಪಾದಕನಿಗೆ ಟಿಕೆಟ್ ಕೊಟ್ಟಿದ್ದ ಕಾಂಗ್ರೆಸ್‌ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು : ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...