HomeಮುಖಪುಟJ&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

J&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ, ಕೆಲವೊಂದು ಗಮನಾರ್ಹ ವಿಷಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಅವುಗಳಲ್ಲಿ ಚೌಧರಿ ಲಾಲ್ ಸಿಂಗ್ ಸೋಲು ಕೂಡ ಒಂದು.

ಕಥುವಾ ಬಾಲಕಿಯ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದ ಚೌಧರಿ ಲಾಲ್ ಸಿಂಗ್‌ಗೆ ಈ ಬಾರಿಯ ಚುನಾವಣೆಯಲ್ಲಿ ಬಸೋಹ್ಲಿ ಕ್ಷೇತ್ರದ ಟಿಕೆಟ್‌ ಅನ್ನು ಕಾಂಗ್ರೆಸ್ ನೀಡಿತ್ತು.

ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, ಚೌಧರಿ ಲಾಲ್ ಸಿಂಗ್ ಬಸೋಹ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿ ದರ್ಶನ್ ಕುಮಾರ್ ವಿರುದ್ಧ 16,034 ಮತಗಳಿಂದ ಸೋತಿದ್ದಾರೆ. ಕುಮಾರ್ ಅವರು 31,874 ಮತಗಳನ್ನು ಗಳಿಸಿದರೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಅವರು ಒಟ್ಟು 15,840 ಮತಗಳನ್ನು ಗಳಿಸಿದ್ದಾರೆ.

ಲಾಲ್ ಸಿಂಗ್‌ಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟಾಗ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಅವರ ಸೋಲಿನ ಮೂಲಕ ಕಾಂಗ್ರೆಸ್‌ಗೆ ರಾಜಕೀಯವಾಗಿ ಮತ್ತು ನೈತಿಕವಾಗಿ ಮುಖಭಂಗವಾಗಿದೆ.

ಚೌಧರಿ ಲಾಲ್ ಸಿಂಗ್ ಯಾರು?

2018ರಲ್ಲಿ ಜಮ್ಮು ಕಾಶ್ಮೀರದ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಲಾಲ್‌ ಸಿಂಗ್, ಎಂಟು ವರ್ಷದ ಅಲೆಮಾರಿ ಬುಡಕಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬೆಂಬಲಿಸಿ ಸ್ಥಳೀಯ ಹಿಂದುತ್ವ ನಾಯಕರು ಆಯೋಜಿಸಿದ್ದ’ಹಿಂದೂ ಏಕತಾ’ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಇದು ಲಾಲ್ ಸಿಂಗ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಅತ್ಯಾಚಾರ ಆರೋಪಿಗಳಾದ ಪರ್ವೇಶ್ ಕುಮಾರ್, ಸಂಜಿ ರಾಮ್ ಮತ್ತು ದೀಪಕ್ ಖಜುರಿಯಾ ಪರ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಲಾಲ್ ಸಿಂಗ್, ಪೊಲೀಸ್ ತನಿಖೆಯನ್ನು ಪ್ರಶ್ನಿಸಿದ್ದರು ಮತ್ತು ಅತ್ಯಾಚಾರ ಆರೋಪ ‘ಹಿಂದೂಗಳ ವಿರುದ್ಧದ ಪಿತೂರಿಯ ಪ್ರಯತ್ನ’ ಎಂದಿದ್ದರು. ಲಾಲ್ ಸಿಂಗ್‌ ಅವರ ಈ ಹೇಳಿಕೆ, ಆಗಿನ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ದ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಲಾಲ್ ಸಿಂಗ್ ‘ಡೋಗ್ರಾ ಸ್ವಾಭಿಮಾನ್ ಸಂಘಟನೆ’ ಎಂಬ ಪಕ್ಷ ಕಟ್ಟಿದ್ದರು. ನಂತರ, ಲೋಕಸಭೆ ಚುನಾವಣೆಯ ಸಂದರ್ಭ ಮಾರ್ಚ್ 20, 2024ರಂದು ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗಿದ್ದರು ಮತ್ತು ತನ್ನ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಬಳಿಕ, ಲೋಕಸಭಾ ಚುನಾವಣೆಗೆ ಲಾಲ್ ಸಿಂಗ್‌ಗೆ ಉದಂಪುರ-ದೋಡಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಅವರು 1.24 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ಲಾಲ್ ಸಿಂಗ್ ಅವರು ಈ ಹಿಂದೆ ಮೂರು ಬಾರಿ ಗೆದ್ದಿರುವ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದರು. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ, ಉದ್ಯಮಿ ದರ್ಶನ್ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಲಾಲ್ ಸಿಂಗ್

2014ಕ್ಕಿಂತ ಮೊದಲು ಲಾಲ್‌ ಸಿಂಗ್‌ ಕಾಂಗ್ರೆಸ್‌ನಲ್ಲೇ ಇದ್ದರು. ಎರಡು ಬಾರಿ ಪಕ್ಷದ ಟಿಕೆಟ್‌ನಲ್ಲಿ ಉಂದಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಸಂಸದರಾಗಿದ್ದರು. 2014ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಬಿಜೆಪಿ ಸೇರ್ಪಡೆಗೊಂಡು ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

ಜನವರಿ 2023ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು ಪ್ರವೇಶಿಸಿದಾಗ, ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಥುವಾ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಲಾಲ್ ಸಿಂಗ್, ಅವರ ಪತ್ನಿ ಮತ್ತು ಮಾಜಿ ಶಾಸಕ ಕಾಂತಾ ಅಂಡೋತ್ರಾ ನಡೆಸುತ್ತಿದ್ದ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು.

ಈ ವರ್ಷದ ಮಾರ್ಚ್‌ನಲ್ಲಿ ಲಾಲ್‌ ಸಿಂಗ್‌ಗೆ ಮರು ಸೇರ್ಪಡೆಗೊಂಡಾಗ, ಕಾಂಗ್ರೆಸ್ ವಿರುದ್ದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, “ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಾಲ್‌ ಸಿಂಗ್‌ ಅನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾಚಿಕೆಯಾಗಬೇಕು. 8 ವರ್ಷದ ಬಾಲಕಿಯ ಅತ್ಯಾಚಾರಿಗಳನ್ನು ಬೆಂಬಲಿಸಿದ ಲಾಲ್ ಸಿಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಮೂಲ ತತ್ವಗಳು ಮತ್ತು ಸಿದ್ಧಾಂತಗಳಿಗೆ ದ್ರೋಹ ಬಗೆದಿದೆ” ಎಂದಿದ್ದರು.

ಲಾಲ್‌ ಸಿಂಗ್‌ಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದು ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಂದು ಹೇಳಲಾಗಿತ್ತು. ಆದರೆ, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ. ಸಚಿವರಾಗಿದ್ದಾಗಲೇ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆದ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ, ಹಿಂದುತ್ವದ ಪ್ರತಿಪಾದಕನಿಗೆ ಟಿಕೆಟ್ ಕೊಟ್ಟಿದ್ದ ಕಾಂಗ್ರೆಸ್‌ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು : ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...