HomeಮುಖಪುಟJ&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

J&K Result |ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ, ಕೆಲವೊಂದು ಗಮನಾರ್ಹ ವಿಷಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಅವುಗಳಲ್ಲಿ ಚೌಧರಿ ಲಾಲ್ ಸಿಂಗ್ ಸೋಲು ಕೂಡ ಒಂದು.

ಕಥುವಾ ಬಾಲಕಿಯ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದ ಚೌಧರಿ ಲಾಲ್ ಸಿಂಗ್‌ಗೆ ಈ ಬಾರಿಯ ಚುನಾವಣೆಯಲ್ಲಿ ಬಸೋಹ್ಲಿ ಕ್ಷೇತ್ರದ ಟಿಕೆಟ್‌ ಅನ್ನು ಕಾಂಗ್ರೆಸ್ ನೀಡಿತ್ತು.

ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, ಚೌಧರಿ ಲಾಲ್ ಸಿಂಗ್ ಬಸೋಹ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿ ದರ್ಶನ್ ಕುಮಾರ್ ವಿರುದ್ಧ 16,034 ಮತಗಳಿಂದ ಸೋತಿದ್ದಾರೆ. ಕುಮಾರ್ ಅವರು 31,874 ಮತಗಳನ್ನು ಗಳಿಸಿದರೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಅವರು ಒಟ್ಟು 15,840 ಮತಗಳನ್ನು ಗಳಿಸಿದ್ದಾರೆ.

ಲಾಲ್ ಸಿಂಗ್‌ಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟಾಗ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಅವರ ಸೋಲಿನ ಮೂಲಕ ಕಾಂಗ್ರೆಸ್‌ಗೆ ರಾಜಕೀಯವಾಗಿ ಮತ್ತು ನೈತಿಕವಾಗಿ ಮುಖಭಂಗವಾಗಿದೆ.

ಚೌಧರಿ ಲಾಲ್ ಸಿಂಗ್ ಯಾರು?

2018ರಲ್ಲಿ ಜಮ್ಮು ಕಾಶ್ಮೀರದ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಲಾಲ್‌ ಸಿಂಗ್, ಎಂಟು ವರ್ಷದ ಅಲೆಮಾರಿ ಬುಡಕಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬೆಂಬಲಿಸಿ ಸ್ಥಳೀಯ ಹಿಂದುತ್ವ ನಾಯಕರು ಆಯೋಜಿಸಿದ್ದ’ಹಿಂದೂ ಏಕತಾ’ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಇದು ಲಾಲ್ ಸಿಂಗ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಅತ್ಯಾಚಾರ ಆರೋಪಿಗಳಾದ ಪರ್ವೇಶ್ ಕುಮಾರ್, ಸಂಜಿ ರಾಮ್ ಮತ್ತು ದೀಪಕ್ ಖಜುರಿಯಾ ಪರ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಲಾಲ್ ಸಿಂಗ್, ಪೊಲೀಸ್ ತನಿಖೆಯನ್ನು ಪ್ರಶ್ನಿಸಿದ್ದರು ಮತ್ತು ಅತ್ಯಾಚಾರ ಆರೋಪ ‘ಹಿಂದೂಗಳ ವಿರುದ್ಧದ ಪಿತೂರಿಯ ಪ್ರಯತ್ನ’ ಎಂದಿದ್ದರು. ಲಾಲ್ ಸಿಂಗ್‌ ಅವರ ಈ ಹೇಳಿಕೆ, ಆಗಿನ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ದ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಲಾಲ್ ಸಿಂಗ್ ‘ಡೋಗ್ರಾ ಸ್ವಾಭಿಮಾನ್ ಸಂಘಟನೆ’ ಎಂಬ ಪಕ್ಷ ಕಟ್ಟಿದ್ದರು. ನಂತರ, ಲೋಕಸಭೆ ಚುನಾವಣೆಯ ಸಂದರ್ಭ ಮಾರ್ಚ್ 20, 2024ರಂದು ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗಿದ್ದರು ಮತ್ತು ತನ್ನ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಬಳಿಕ, ಲೋಕಸಭಾ ಚುನಾವಣೆಗೆ ಲಾಲ್ ಸಿಂಗ್‌ಗೆ ಉದಂಪುರ-ದೋಡಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಅವರು 1.24 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ಲಾಲ್ ಸಿಂಗ್ ಅವರು ಈ ಹಿಂದೆ ಮೂರು ಬಾರಿ ಗೆದ್ದಿರುವ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದರು. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ, ಉದ್ಯಮಿ ದರ್ಶನ್ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಲಾಲ್ ಸಿಂಗ್

2014ಕ್ಕಿಂತ ಮೊದಲು ಲಾಲ್‌ ಸಿಂಗ್‌ ಕಾಂಗ್ರೆಸ್‌ನಲ್ಲೇ ಇದ್ದರು. ಎರಡು ಬಾರಿ ಪಕ್ಷದ ಟಿಕೆಟ್‌ನಲ್ಲಿ ಉಂದಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಸಂಸದರಾಗಿದ್ದರು. 2014ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಬಿಜೆಪಿ ಸೇರ್ಪಡೆಗೊಂಡು ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

ಜನವರಿ 2023ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು ಪ್ರವೇಶಿಸಿದಾಗ, ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಥುವಾ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಲಾಲ್ ಸಿಂಗ್, ಅವರ ಪತ್ನಿ ಮತ್ತು ಮಾಜಿ ಶಾಸಕ ಕಾಂತಾ ಅಂಡೋತ್ರಾ ನಡೆಸುತ್ತಿದ್ದ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು.

ಈ ವರ್ಷದ ಮಾರ್ಚ್‌ನಲ್ಲಿ ಲಾಲ್‌ ಸಿಂಗ್‌ಗೆ ಮರು ಸೇರ್ಪಡೆಗೊಂಡಾಗ, ಕಾಂಗ್ರೆಸ್ ವಿರುದ್ದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, “ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಾಲ್‌ ಸಿಂಗ್‌ ಅನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾಚಿಕೆಯಾಗಬೇಕು. 8 ವರ್ಷದ ಬಾಲಕಿಯ ಅತ್ಯಾಚಾರಿಗಳನ್ನು ಬೆಂಬಲಿಸಿದ ಲಾಲ್ ಸಿಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಮೂಲ ತತ್ವಗಳು ಮತ್ತು ಸಿದ್ಧಾಂತಗಳಿಗೆ ದ್ರೋಹ ಬಗೆದಿದೆ” ಎಂದಿದ್ದರು.

ಲಾಲ್‌ ಸಿಂಗ್‌ಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದು ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಂದು ಹೇಳಲಾಗಿತ್ತು. ಆದರೆ, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ. ಸಚಿವರಾಗಿದ್ದಾಗಲೇ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆದ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ, ಹಿಂದುತ್ವದ ಪ್ರತಿಪಾದಕನಿಗೆ ಟಿಕೆಟ್ ಕೊಟ್ಟಿದ್ದ ಕಾಂಗ್ರೆಸ್‌ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು : ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...