Homeಮುಖಪುಟಜಮ್ಮು ಕಾಶ್ಮೀರ: ಉಗ್ರರ ದಾಳಿಗೆ ಐವರು ಸೇನಾ ಸಿಬ್ಬಂದಿ ಸಾವು

ಜಮ್ಮು ಕಾಶ್ಮೀರ: ಉಗ್ರರ ದಾಳಿಗೆ ಐವರು ಸೇನಾ ಸಿಬ್ಬಂದಿ ಸಾವು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಯೋಧರ ವಾಹನದ ಮೇಲೆ ಹೊಂಚುದಾಳಿ ನಡೆಸಿದ್ದರಿಂದ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ರಜೌರಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿ ನಡೆದಿದೆ ಎಂದು ಸೇನೆಯ ಉತ್ತರ ಕಮಾಂಡ್ ಪ್ರಧಾನ ಕಚೇರಿ ತಿಳಿಸಿದೆ.

“… ರಾಜೌರಿ ಸೆಕ್ಟರ್‌ನಲ್ಲಿ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ ಚಲಿಸುತ್ತಿದ್ದ ಸೇನಾ ವಾಹನದ ಮೇಲೆ ಅಪರಿಚಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಭಾರೀ ಮಳೆ ಮತ್ತು ಪ್ರದೇಶದಲ್ಲಿನ ಮಸುಕಿನ ವಾತಾವರಣದ ಲಾಭವನ್ನು ಭಯೋತ್ಪಾದಕರು ಪಡೆದಿದ್ದಾರೆ” ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. “ಭಯೋತ್ಪಾದಕರು ಗ್ರೆನೇಡ್‌ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ತಲುಲಿದೆ” ಎಂದು ಮಾಹಿತಿ ನೀಡಿದ್ದಾರೆ.

ಮೃತರು ರಾಷ್ಟ್ರೀಯ ರೈಫಲ್ಸ್ ಘಟಕಕ್ಕೆ ಸೇರಿದವರಾಗಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.

ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರತಿಕ್ರಿಯಿಸಿದ್ದು, ಸೇನಾ ಸಿಬ್ಬಂದಿಯ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆಯನ್ನು ಎಂದಿಗೂ ಮರೆಯಲಾಗದು. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ” ಎಂದು ಅವರು ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಪುಲ್ವಾಮಾ ದಾಳಿಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ಆಘಾತಕಾರಿ ಬೆಳವಣಿಗೆಗಳು ಆಗಿವೆ.

“ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು” ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಸ್ಫೋಟಕ ಹೇಳಿಕೆ ನೀಡಿದ್ದರು.

ದಿ ವೈರ್ ಪತ್ರಕರ್ತ ಕರಣ್ ಥಾಪರ್‌ರವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, “ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದರು.

ಇದನ್ನೂ ಓದಿರಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು.

“ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು” ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದರು.

“ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ” ಎಂದು ಪ್ರಶ್ನಿಸಿದ್ದರು. ಸತ್ಯಪಾಲ್‌ ಅವರ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...