Homeಮುಖಪುಟಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ 

ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರದಂದು ಅಧಿಕಾರಿಗಳು ಬಾಧಾಲ್ ಅನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಿದ್ದು, ಮೊದಲನೆ ವಲಯದಲ್ಲಿ ಸಾವುಗಳು ಸಂಭವಿಸಿದ ಎಲ್ಲಾ ಕುಟುಂಬಗಳನ್ನು ಒಳಗೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನರಮಂಡಲದ ಮೇಲೆ ಕಾರ್ಯನಿರ್ವಹಿಸುವ ವಿಷದಿಂದಾಗಿ (Neurotoxin) ಸಾವುಗಳು ಸಂಭವಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಆದರೂ, ವ್ಯಾಪಕ ಪರೀಕ್ಷೆಯ ಹೊರತಾಗಿಯೂ ಇದಕ್ಕೆ ಸ್ಪಷ್ಟ ಕಾರಣವನ್ನು ತಜ್ಞರು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೀಡಿತ ಕುಟುಂಬಗಳ ಮನೆಗಳನ್ನು ಮುಚ್ಚಲಾಗುತ್ತದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯದ ಹೊರತು, ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ರಾಜೌರಿ) ರಾಜೀವ್ ಕುಮಾರ್ ಖಜುರಿಯಾ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಎರಡನೇ ವಲಯವನ್ನು ಸತ್ತವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನಿವಾಸಿಗಳ ಮನೆಗಳನ್ನು ಒಳಗೊಂಡಿದೆ. ಅವರ ಮೇಲ್ವಿಚಾರಣೆಗಾಗಿ ರಾಜೌರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ವರದಿ ಹೇಳಿದೆ. ಮೂರನೇ ವಲಯವು ಇತರ ಎಲ್ಲಾ ಮನೆಗಳನ್ನು ಒಳಗೊಂಡಿದೆ.

 

ಕಂಟೈನ್ಮೆಂಟ್ ವಲಯಗಳೊಳಗಿನ ಕುಟುಂಬಗಳಿಗೆ ನೀಡಲಾಗುವ ಎಲ್ಲಾ ಊಟಗಳನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪ್ರೋಟೋಕಾಲ್‌ಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುತ್ತದೆ. “ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕಂಟೈನ್ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಕೂಟಗಳನ್ನು ಇಲ್ಲಿ ನಿಷೇಧಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಪೀಡಿತ ಕುಟುಂಬಗಳು ಮತ್ತು ಅವರ ನಿಕಟ ಸಂಪರ್ಕದಲ್ಲಿರುವವರು ಜಿಲ್ಲಾಡಳಿತ ಒದಗಿಸಿದ ಆಹಾರ ಮತ್ತು ನೀರನ್ನು ಮಾತ್ರ ಸೇವಿಸುವುದು ಕಡ್ಡಾಯವಾಗಿದೆ. ಮನೆಗಳಲ್ಲಿ ಲಭ್ಯವಿರುವ ಯಾವುದೇ ಇತರ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.” ಎಂದು ಆದೇಶಿಸಲಾಗಿದೆ. ಜಮ್ಮು ಕಾಶ್ಮೀರ 

ಜಿಲ್ಲಾ ಅಧಿಕಾರಿಗಳು ಎಲ್ಲಾ ಆಹಾರ ಮತ್ತು ನೀರಿನ ಸರಬರಾಜುಗಳನ್ನು ತಕ್ಷಣ ಬದಲಾಯಿಸಲು ಆದೇಶಿಸಿದ್ದಾರೆ. ಸಾವುಗಳು ನಡೆದ ಮನೆಗಳಲ್ಲಿರುವ ಎಲ್ಲಾ ಖಾದ್ಯ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳವಾರದಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಯುತ್ತಿದೆ ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. “ಕೇಂದ್ರವು ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗಾಗಿ ತಂಡವನ್ನು ಸಹ ನಿಯೋಜಿಸಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ನಾಗರಿಕ ಆಡಳಿತ, ಪೊಲೀಸ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಯತ್ನಗಳು ಏನಾಯಿತು ಎಂಬುದರ ಕುರಿತು ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುತ್ತವೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ.” ಎಂದು ಸಿಎಂ ಹೇಳಿದ್ದಾರೆ.

ಘಟನೆಯು ಮೊದಲ ಬಾರಿಗೆ ಡಿಸೆಂಬರ್ 7 ರಂದು ಸಮುದಾಯಿಕ ಭೋಜನದ ನಂತರ ಒಂದೇ ಕುಟುಂಬದ ಏಳು ಸದಸ್ಯರು ಅಸ್ವಸ್ಥರಾಗಿದ್ದರು. ಇದರ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಈ ವೇಳೆ ಅವರಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.

ಡಿಸೆಂಬರ್ 2 ರಂದು ಫಜಲ್ ಹುಸೇನ್ ಎಂಬ ನಿವಾಸಿಯ ಮನೆಯಲ್ಲಿ ಮದುವೆಯ ಹಬ್ಬದ ಭಾಗವಾಗಿ ಸಮುದಾಯಿಕ ಭೋಜನವನ್ನು ಸಹ ನೀಡಲಾಗಿತ್ತು. ಫಜಲ್ ಮತ್ತು ಅವರ ಮೂವರು ಮಕ್ಕಳು ದಿನಗಳ ನಂತರ ನಿಧನರಾಗಿದ್ದರು. ಜಮ್ಮು ಕಾಶ್ಮೀರ

ಜನವರಿ 9 ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಜಲ್ ಅವರ ಮನೆಯಲ್ಲಿ ಮತ್ತೊಂದು ಸಮುದಾಯಿಕ ಭೋಜನವನ್ನು ನೀಡಲಾಗಿತ್ತು. ಈ ವೇಳೆ ಹಲವಾರು ಗ್ರಾಮಸ್ಥರು ಈ ಕೂಟಗಳಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.

ಜನವರಿ 15 ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂಓದಿ:  ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...