Homeಮುಖಪುಟಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ 

ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರದಂದು ಅಧಿಕಾರಿಗಳು ಬಾಧಾಲ್ ಅನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಿದ್ದು, ಮೊದಲನೆ ವಲಯದಲ್ಲಿ ಸಾವುಗಳು ಸಂಭವಿಸಿದ ಎಲ್ಲಾ ಕುಟುಂಬಗಳನ್ನು ಒಳಗೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನರಮಂಡಲದ ಮೇಲೆ ಕಾರ್ಯನಿರ್ವಹಿಸುವ ವಿಷದಿಂದಾಗಿ (Neurotoxin) ಸಾವುಗಳು ಸಂಭವಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಆದರೂ, ವ್ಯಾಪಕ ಪರೀಕ್ಷೆಯ ಹೊರತಾಗಿಯೂ ಇದಕ್ಕೆ ಸ್ಪಷ್ಟ ಕಾರಣವನ್ನು ತಜ್ಞರು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೀಡಿತ ಕುಟುಂಬಗಳ ಮನೆಗಳನ್ನು ಮುಚ್ಚಲಾಗುತ್ತದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯದ ಹೊರತು, ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ರಾಜೌರಿ) ರಾಜೀವ್ ಕುಮಾರ್ ಖಜುರಿಯಾ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಎರಡನೇ ವಲಯವನ್ನು ಸತ್ತವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನಿವಾಸಿಗಳ ಮನೆಗಳನ್ನು ಒಳಗೊಂಡಿದೆ. ಅವರ ಮೇಲ್ವಿಚಾರಣೆಗಾಗಿ ರಾಜೌರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ವರದಿ ಹೇಳಿದೆ. ಮೂರನೇ ವಲಯವು ಇತರ ಎಲ್ಲಾ ಮನೆಗಳನ್ನು ಒಳಗೊಂಡಿದೆ.

 

ಕಂಟೈನ್ಮೆಂಟ್ ವಲಯಗಳೊಳಗಿನ ಕುಟುಂಬಗಳಿಗೆ ನೀಡಲಾಗುವ ಎಲ್ಲಾ ಊಟಗಳನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪ್ರೋಟೋಕಾಲ್‌ಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುತ್ತದೆ. “ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕಂಟೈನ್ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಕೂಟಗಳನ್ನು ಇಲ್ಲಿ ನಿಷೇಧಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಪೀಡಿತ ಕುಟುಂಬಗಳು ಮತ್ತು ಅವರ ನಿಕಟ ಸಂಪರ್ಕದಲ್ಲಿರುವವರು ಜಿಲ್ಲಾಡಳಿತ ಒದಗಿಸಿದ ಆಹಾರ ಮತ್ತು ನೀರನ್ನು ಮಾತ್ರ ಸೇವಿಸುವುದು ಕಡ್ಡಾಯವಾಗಿದೆ. ಮನೆಗಳಲ್ಲಿ ಲಭ್ಯವಿರುವ ಯಾವುದೇ ಇತರ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.” ಎಂದು ಆದೇಶಿಸಲಾಗಿದೆ. ಜಮ್ಮು ಕಾಶ್ಮೀರ 

ಜಿಲ್ಲಾ ಅಧಿಕಾರಿಗಳು ಎಲ್ಲಾ ಆಹಾರ ಮತ್ತು ನೀರಿನ ಸರಬರಾಜುಗಳನ್ನು ತಕ್ಷಣ ಬದಲಾಯಿಸಲು ಆದೇಶಿಸಿದ್ದಾರೆ. ಸಾವುಗಳು ನಡೆದ ಮನೆಗಳಲ್ಲಿರುವ ಎಲ್ಲಾ ಖಾದ್ಯ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳವಾರದಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಯುತ್ತಿದೆ ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. “ಕೇಂದ್ರವು ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗಾಗಿ ತಂಡವನ್ನು ಸಹ ನಿಯೋಜಿಸಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ನಾಗರಿಕ ಆಡಳಿತ, ಪೊಲೀಸ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಯತ್ನಗಳು ಏನಾಯಿತು ಎಂಬುದರ ಕುರಿತು ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುತ್ತವೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ.” ಎಂದು ಸಿಎಂ ಹೇಳಿದ್ದಾರೆ.

ಘಟನೆಯು ಮೊದಲ ಬಾರಿಗೆ ಡಿಸೆಂಬರ್ 7 ರಂದು ಸಮುದಾಯಿಕ ಭೋಜನದ ನಂತರ ಒಂದೇ ಕುಟುಂಬದ ಏಳು ಸದಸ್ಯರು ಅಸ್ವಸ್ಥರಾಗಿದ್ದರು. ಇದರ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಈ ವೇಳೆ ಅವರಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.

ಡಿಸೆಂಬರ್ 2 ರಂದು ಫಜಲ್ ಹುಸೇನ್ ಎಂಬ ನಿವಾಸಿಯ ಮನೆಯಲ್ಲಿ ಮದುವೆಯ ಹಬ್ಬದ ಭಾಗವಾಗಿ ಸಮುದಾಯಿಕ ಭೋಜನವನ್ನು ಸಹ ನೀಡಲಾಗಿತ್ತು. ಫಜಲ್ ಮತ್ತು ಅವರ ಮೂವರು ಮಕ್ಕಳು ದಿನಗಳ ನಂತರ ನಿಧನರಾಗಿದ್ದರು. ಜಮ್ಮು ಕಾಶ್ಮೀರ

ಜನವರಿ 9 ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಜಲ್ ಅವರ ಮನೆಯಲ್ಲಿ ಮತ್ತೊಂದು ಸಮುದಾಯಿಕ ಭೋಜನವನ್ನು ನೀಡಲಾಗಿತ್ತು. ಈ ವೇಳೆ ಹಲವಾರು ಗ್ರಾಮಸ್ಥರು ಈ ಕೂಟಗಳಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.

ಜನವರಿ 15 ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂಓದಿ:  ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...