Homeಮುಖಪುಟಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ 

ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರದಂದು ಅಧಿಕಾರಿಗಳು ಬಾಧಾಲ್ ಅನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಿದ್ದು, ಮೊದಲನೆ ವಲಯದಲ್ಲಿ ಸಾವುಗಳು ಸಂಭವಿಸಿದ ಎಲ್ಲಾ ಕುಟುಂಬಗಳನ್ನು ಒಳಗೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನರಮಂಡಲದ ಮೇಲೆ ಕಾರ್ಯನಿರ್ವಹಿಸುವ ವಿಷದಿಂದಾಗಿ (Neurotoxin) ಸಾವುಗಳು ಸಂಭವಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಆದರೂ, ವ್ಯಾಪಕ ಪರೀಕ್ಷೆಯ ಹೊರತಾಗಿಯೂ ಇದಕ್ಕೆ ಸ್ಪಷ್ಟ ಕಾರಣವನ್ನು ತಜ್ಞರು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೀಡಿತ ಕುಟುಂಬಗಳ ಮನೆಗಳನ್ನು ಮುಚ್ಚಲಾಗುತ್ತದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯದ ಹೊರತು, ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ರಾಜೌರಿ) ರಾಜೀವ್ ಕುಮಾರ್ ಖಜುರಿಯಾ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಎರಡನೇ ವಲಯವನ್ನು ಸತ್ತವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನಿವಾಸಿಗಳ ಮನೆಗಳನ್ನು ಒಳಗೊಂಡಿದೆ. ಅವರ ಮೇಲ್ವಿಚಾರಣೆಗಾಗಿ ರಾಜೌರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ವರದಿ ಹೇಳಿದೆ. ಮೂರನೇ ವಲಯವು ಇತರ ಎಲ್ಲಾ ಮನೆಗಳನ್ನು ಒಳಗೊಂಡಿದೆ.

 

ಕಂಟೈನ್ಮೆಂಟ್ ವಲಯಗಳೊಳಗಿನ ಕುಟುಂಬಗಳಿಗೆ ನೀಡಲಾಗುವ ಎಲ್ಲಾ ಊಟಗಳನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪ್ರೋಟೋಕಾಲ್‌ಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುತ್ತದೆ. “ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕಂಟೈನ್ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಕೂಟಗಳನ್ನು ಇಲ್ಲಿ ನಿಷೇಧಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಪೀಡಿತ ಕುಟುಂಬಗಳು ಮತ್ತು ಅವರ ನಿಕಟ ಸಂಪರ್ಕದಲ್ಲಿರುವವರು ಜಿಲ್ಲಾಡಳಿತ ಒದಗಿಸಿದ ಆಹಾರ ಮತ್ತು ನೀರನ್ನು ಮಾತ್ರ ಸೇವಿಸುವುದು ಕಡ್ಡಾಯವಾಗಿದೆ. ಮನೆಗಳಲ್ಲಿ ಲಭ್ಯವಿರುವ ಯಾವುದೇ ಇತರ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.” ಎಂದು ಆದೇಶಿಸಲಾಗಿದೆ. ಜಮ್ಮು ಕಾಶ್ಮೀರ 

ಜಿಲ್ಲಾ ಅಧಿಕಾರಿಗಳು ಎಲ್ಲಾ ಆಹಾರ ಮತ್ತು ನೀರಿನ ಸರಬರಾಜುಗಳನ್ನು ತಕ್ಷಣ ಬದಲಾಯಿಸಲು ಆದೇಶಿಸಿದ್ದಾರೆ. ಸಾವುಗಳು ನಡೆದ ಮನೆಗಳಲ್ಲಿರುವ ಎಲ್ಲಾ ಖಾದ್ಯ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳವಾರದಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಯುತ್ತಿದೆ ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. “ಕೇಂದ್ರವು ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗಾಗಿ ತಂಡವನ್ನು ಸಹ ನಿಯೋಜಿಸಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ನಾಗರಿಕ ಆಡಳಿತ, ಪೊಲೀಸ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಯತ್ನಗಳು ಏನಾಯಿತು ಎಂಬುದರ ಕುರಿತು ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುತ್ತವೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ.” ಎಂದು ಸಿಎಂ ಹೇಳಿದ್ದಾರೆ.

ಘಟನೆಯು ಮೊದಲ ಬಾರಿಗೆ ಡಿಸೆಂಬರ್ 7 ರಂದು ಸಮುದಾಯಿಕ ಭೋಜನದ ನಂತರ ಒಂದೇ ಕುಟುಂಬದ ಏಳು ಸದಸ್ಯರು ಅಸ್ವಸ್ಥರಾಗಿದ್ದರು. ಇದರ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಈ ವೇಳೆ ಅವರಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.

ಡಿಸೆಂಬರ್ 2 ರಂದು ಫಜಲ್ ಹುಸೇನ್ ಎಂಬ ನಿವಾಸಿಯ ಮನೆಯಲ್ಲಿ ಮದುವೆಯ ಹಬ್ಬದ ಭಾಗವಾಗಿ ಸಮುದಾಯಿಕ ಭೋಜನವನ್ನು ಸಹ ನೀಡಲಾಗಿತ್ತು. ಫಜಲ್ ಮತ್ತು ಅವರ ಮೂವರು ಮಕ್ಕಳು ದಿನಗಳ ನಂತರ ನಿಧನರಾಗಿದ್ದರು. ಜಮ್ಮು ಕಾಶ್ಮೀರ

ಜನವರಿ 9 ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಜಲ್ ಅವರ ಮನೆಯಲ್ಲಿ ಮತ್ತೊಂದು ಸಮುದಾಯಿಕ ಭೋಜನವನ್ನು ನೀಡಲಾಗಿತ್ತು. ಈ ವೇಳೆ ಹಲವಾರು ಗ್ರಾಮಸ್ಥರು ಈ ಕೂಟಗಳಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.

ಜನವರಿ 15 ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂಓದಿ:  ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...