Homeಮುಖಪುಟಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ 

ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರದಂದು ಅಧಿಕಾರಿಗಳು ಬಾಧಾಲ್ ಅನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಿದ್ದು, ಮೊದಲನೆ ವಲಯದಲ್ಲಿ ಸಾವುಗಳು ಸಂಭವಿಸಿದ ಎಲ್ಲಾ ಕುಟುಂಬಗಳನ್ನು ಒಳಗೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನರಮಂಡಲದ ಮೇಲೆ ಕಾರ್ಯನಿರ್ವಹಿಸುವ ವಿಷದಿಂದಾಗಿ (Neurotoxin) ಸಾವುಗಳು ಸಂಭವಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಆದರೂ, ವ್ಯಾಪಕ ಪರೀಕ್ಷೆಯ ಹೊರತಾಗಿಯೂ ಇದಕ್ಕೆ ಸ್ಪಷ್ಟ ಕಾರಣವನ್ನು ತಜ್ಞರು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೀಡಿತ ಕುಟುಂಬಗಳ ಮನೆಗಳನ್ನು ಮುಚ್ಚಲಾಗುತ್ತದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯದ ಹೊರತು, ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ರಾಜೌರಿ) ರಾಜೀವ್ ಕುಮಾರ್ ಖಜುರಿಯಾ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಎರಡನೇ ವಲಯವನ್ನು ಸತ್ತವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನಿವಾಸಿಗಳ ಮನೆಗಳನ್ನು ಒಳಗೊಂಡಿದೆ. ಅವರ ಮೇಲ್ವಿಚಾರಣೆಗಾಗಿ ರಾಜೌರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ವರದಿ ಹೇಳಿದೆ. ಮೂರನೇ ವಲಯವು ಇತರ ಎಲ್ಲಾ ಮನೆಗಳನ್ನು ಒಳಗೊಂಡಿದೆ.

 

ಕಂಟೈನ್ಮೆಂಟ್ ವಲಯಗಳೊಳಗಿನ ಕುಟುಂಬಗಳಿಗೆ ನೀಡಲಾಗುವ ಎಲ್ಲಾ ಊಟಗಳನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪ್ರೋಟೋಕಾಲ್‌ಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುತ್ತದೆ. “ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕಂಟೈನ್ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಕೂಟಗಳನ್ನು ಇಲ್ಲಿ ನಿಷೇಧಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಪೀಡಿತ ಕುಟುಂಬಗಳು ಮತ್ತು ಅವರ ನಿಕಟ ಸಂಪರ್ಕದಲ್ಲಿರುವವರು ಜಿಲ್ಲಾಡಳಿತ ಒದಗಿಸಿದ ಆಹಾರ ಮತ್ತು ನೀರನ್ನು ಮಾತ್ರ ಸೇವಿಸುವುದು ಕಡ್ಡಾಯವಾಗಿದೆ. ಮನೆಗಳಲ್ಲಿ ಲಭ್ಯವಿರುವ ಯಾವುದೇ ಇತರ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.” ಎಂದು ಆದೇಶಿಸಲಾಗಿದೆ. ಜಮ್ಮು ಕಾಶ್ಮೀರ 

ಜಿಲ್ಲಾ ಅಧಿಕಾರಿಗಳು ಎಲ್ಲಾ ಆಹಾರ ಮತ್ತು ನೀರಿನ ಸರಬರಾಜುಗಳನ್ನು ತಕ್ಷಣ ಬದಲಾಯಿಸಲು ಆದೇಶಿಸಿದ್ದಾರೆ. ಸಾವುಗಳು ನಡೆದ ಮನೆಗಳಲ್ಲಿರುವ ಎಲ್ಲಾ ಖಾದ್ಯ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳವಾರದಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಯುತ್ತಿದೆ ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. “ಕೇಂದ್ರವು ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗಾಗಿ ತಂಡವನ್ನು ಸಹ ನಿಯೋಜಿಸಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ನಾಗರಿಕ ಆಡಳಿತ, ಪೊಲೀಸ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಯತ್ನಗಳು ಏನಾಯಿತು ಎಂಬುದರ ಕುರಿತು ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುತ್ತವೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ.” ಎಂದು ಸಿಎಂ ಹೇಳಿದ್ದಾರೆ.

ಘಟನೆಯು ಮೊದಲ ಬಾರಿಗೆ ಡಿಸೆಂಬರ್ 7 ರಂದು ಸಮುದಾಯಿಕ ಭೋಜನದ ನಂತರ ಒಂದೇ ಕುಟುಂಬದ ಏಳು ಸದಸ್ಯರು ಅಸ್ವಸ್ಥರಾಗಿದ್ದರು. ಇದರ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಈ ವೇಳೆ ಅವರಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.

ಡಿಸೆಂಬರ್ 2 ರಂದು ಫಜಲ್ ಹುಸೇನ್ ಎಂಬ ನಿವಾಸಿಯ ಮನೆಯಲ್ಲಿ ಮದುವೆಯ ಹಬ್ಬದ ಭಾಗವಾಗಿ ಸಮುದಾಯಿಕ ಭೋಜನವನ್ನು ಸಹ ನೀಡಲಾಗಿತ್ತು. ಫಜಲ್ ಮತ್ತು ಅವರ ಮೂವರು ಮಕ್ಕಳು ದಿನಗಳ ನಂತರ ನಿಧನರಾಗಿದ್ದರು. ಜಮ್ಮು ಕಾಶ್ಮೀರ

ಜನವರಿ 9 ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಜಲ್ ಅವರ ಮನೆಯಲ್ಲಿ ಮತ್ತೊಂದು ಸಮುದಾಯಿಕ ಭೋಜನವನ್ನು ನೀಡಲಾಗಿತ್ತು. ಈ ವೇಳೆ ಹಲವಾರು ಗ್ರಾಮಸ್ಥರು ಈ ಕೂಟಗಳಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.

ಜನವರಿ 15 ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂಓದಿ:  ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...