Homeಮುಖಪುಟಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ 

ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರದಂದು ಅಧಿಕಾರಿಗಳು ಬಾಧಾಲ್ ಅನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಿದ್ದು, ಮೊದಲನೆ ವಲಯದಲ್ಲಿ ಸಾವುಗಳು ಸಂಭವಿಸಿದ ಎಲ್ಲಾ ಕುಟುಂಬಗಳನ್ನು ಒಳಗೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನರಮಂಡಲದ ಮೇಲೆ ಕಾರ್ಯನಿರ್ವಹಿಸುವ ವಿಷದಿಂದಾಗಿ (Neurotoxin) ಸಾವುಗಳು ಸಂಭವಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಆದರೂ, ವ್ಯಾಪಕ ಪರೀಕ್ಷೆಯ ಹೊರತಾಗಿಯೂ ಇದಕ್ಕೆ ಸ್ಪಷ್ಟ ಕಾರಣವನ್ನು ತಜ್ಞರು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೀಡಿತ ಕುಟುಂಬಗಳ ಮನೆಗಳನ್ನು ಮುಚ್ಚಲಾಗುತ್ತದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯದ ಹೊರತು, ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ರಾಜೌರಿ) ರಾಜೀವ್ ಕುಮಾರ್ ಖಜುರಿಯಾ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಎರಡನೇ ವಲಯವನ್ನು ಸತ್ತವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನಿವಾಸಿಗಳ ಮನೆಗಳನ್ನು ಒಳಗೊಂಡಿದೆ. ಅವರ ಮೇಲ್ವಿಚಾರಣೆಗಾಗಿ ರಾಜೌರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ವರದಿ ಹೇಳಿದೆ. ಮೂರನೇ ವಲಯವು ಇತರ ಎಲ್ಲಾ ಮನೆಗಳನ್ನು ಒಳಗೊಂಡಿದೆ.

 

ಕಂಟೈನ್ಮೆಂಟ್ ವಲಯಗಳೊಳಗಿನ ಕುಟುಂಬಗಳಿಗೆ ನೀಡಲಾಗುವ ಎಲ್ಲಾ ಊಟಗಳನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪ್ರೋಟೋಕಾಲ್‌ಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುತ್ತದೆ. “ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕಂಟೈನ್ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಕೂಟಗಳನ್ನು ಇಲ್ಲಿ ನಿಷೇಧಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಪೀಡಿತ ಕುಟುಂಬಗಳು ಮತ್ತು ಅವರ ನಿಕಟ ಸಂಪರ್ಕದಲ್ಲಿರುವವರು ಜಿಲ್ಲಾಡಳಿತ ಒದಗಿಸಿದ ಆಹಾರ ಮತ್ತು ನೀರನ್ನು ಮಾತ್ರ ಸೇವಿಸುವುದು ಕಡ್ಡಾಯವಾಗಿದೆ. ಮನೆಗಳಲ್ಲಿ ಲಭ್ಯವಿರುವ ಯಾವುದೇ ಇತರ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.” ಎಂದು ಆದೇಶಿಸಲಾಗಿದೆ. ಜಮ್ಮು ಕಾಶ್ಮೀರ 

ಜಿಲ್ಲಾ ಅಧಿಕಾರಿಗಳು ಎಲ್ಲಾ ಆಹಾರ ಮತ್ತು ನೀರಿನ ಸರಬರಾಜುಗಳನ್ನು ತಕ್ಷಣ ಬದಲಾಯಿಸಲು ಆದೇಶಿಸಿದ್ದಾರೆ. ಸಾವುಗಳು ನಡೆದ ಮನೆಗಳಲ್ಲಿರುವ ಎಲ್ಲಾ ಖಾದ್ಯ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳವಾರದಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಯುತ್ತಿದೆ ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. “ಕೇಂದ್ರವು ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗಾಗಿ ತಂಡವನ್ನು ಸಹ ನಿಯೋಜಿಸಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ನಾಗರಿಕ ಆಡಳಿತ, ಪೊಲೀಸ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಯತ್ನಗಳು ಏನಾಯಿತು ಎಂಬುದರ ಕುರಿತು ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುತ್ತವೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ.” ಎಂದು ಸಿಎಂ ಹೇಳಿದ್ದಾರೆ.

ಘಟನೆಯು ಮೊದಲ ಬಾರಿಗೆ ಡಿಸೆಂಬರ್ 7 ರಂದು ಸಮುದಾಯಿಕ ಭೋಜನದ ನಂತರ ಒಂದೇ ಕುಟುಂಬದ ಏಳು ಸದಸ್ಯರು ಅಸ್ವಸ್ಥರಾಗಿದ್ದರು. ಇದರ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಈ ವೇಳೆ ಅವರಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.

ಡಿಸೆಂಬರ್ 2 ರಂದು ಫಜಲ್ ಹುಸೇನ್ ಎಂಬ ನಿವಾಸಿಯ ಮನೆಯಲ್ಲಿ ಮದುವೆಯ ಹಬ್ಬದ ಭಾಗವಾಗಿ ಸಮುದಾಯಿಕ ಭೋಜನವನ್ನು ಸಹ ನೀಡಲಾಗಿತ್ತು. ಫಜಲ್ ಮತ್ತು ಅವರ ಮೂವರು ಮಕ್ಕಳು ದಿನಗಳ ನಂತರ ನಿಧನರಾಗಿದ್ದರು. ಜಮ್ಮು ಕಾಶ್ಮೀರ

ಜನವರಿ 9 ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಜಲ್ ಅವರ ಮನೆಯಲ್ಲಿ ಮತ್ತೊಂದು ಸಮುದಾಯಿಕ ಭೋಜನವನ್ನು ನೀಡಲಾಗಿತ್ತು. ಈ ವೇಳೆ ಹಲವಾರು ಗ್ರಾಮಸ್ಥರು ಈ ಕೂಟಗಳಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.

ಜನವರಿ 15 ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂಓದಿ:  ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...