HomeUncategorizedಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳ ಬಿಡುಗಡೆಗೆ ವಿಪಕ್ಷಗಳ ಒತ್ತಾಯ...

ಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳ ಬಿಡುಗಡೆಗೆ ವಿಪಕ್ಷಗಳ ಒತ್ತಾಯ…

- Advertisement -
- Advertisement -

ಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ರಾಜಕೀಯ ಬಂಧಿತರನ್ನು ಬಿಡುಗಡೆ ಮಾಡುವಂತೆ ಎಂಟು ಪ್ರತಿಪಕ್ಷಗಳು ಒತ್ತಾಯಿಸಿವೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರವನ್ನು ರವಾನಿಸಿವೆ.

ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ, “ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೂಲ ಆದರ್ಶಗಳಿಗೆ ಬೆದರಿಕೆ ಹಾಕಿರುವ ಬಲವಂತದ ಆಡಳಿತಾತ್ಮಕ ಕ್ರಮದಿಂದ ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯವನ್ನು ಗೊಂದಲಗೊಳಿಸಲಾಗುತ್ತಿದೆ ಎಂದು ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

2019 ರ ಆಗಸ್ಟ್‌ ನಲ್ಲಿ ಕೇಂದ್ರವು 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದಾಗಿನಿಂದಲೂ ಹಲವು ರಾಜಕೀಯ ನಾಯಕರು ಬಂಧನದಲ್ಲಿದ್ದಾರೆ.

ಮುಖ್ಯವಾಗಿ ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್‌ ಅಬ್ದುಲ್ಲಾ, ಓಮರ್‌ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಇವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿವೆ.

“ಪ್ರಜಾಪ್ರಭುತ್ವದ ನೀತಿಗಳು, ಮೂಲಭೂತ ಹಕ್ಕುಗಳು ಮತ್ತು ನಾಗರಿಕರ ಸ್ವಾತಂತ್ರ್ಯಗಳ ಮೇಲೆ ಆಕ್ರಮಣಗಳು ಹೆಚ್ಚುತ್ತಿವೆ” ಎಂದು ಪ್ರತಿಪಕ್ಷ ನಾಯಕರ ಜಂಟಿ ಹೇಳಿಕೆ ತಿಳಿಸಿದೆ. ಇದರ ಪರಿಣಾಮವಾಗಿ, ಭಿನ್ನಾಭಿಪ್ರಾಯವನ್ನು ನಿಗ್ರಹಿಸುವುದು ಮಾತ್ರವಲ್ಲ, ವಿಮರ್ಶಾತ್ಮಕ ಧ್ವನಿಗಳ ಮಾರ್ಗಗಳನ್ನು ಸಹ ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.

“ಈ ಮೂವರು ನಾಯಕರು ತಮ್ಮ ಚಟುವಟಿಕೆಗಳಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅಪಾಯವನ್ನುಂಟು ಮಾಡಿದ್ದಾರೆ ಎಂಬ ಮೋದಿ ಸರ್ಕಾರದ ಹೇಳಿಕೆಗಳಿಗೆ ಸಾಕ್ಷಿ ನೀಡಲು ಏನೂ ಉಳಿದಿಲ್ಲ” ಪ್ರತಿಪಕ್ಷಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿವೆ.

ಮೂವರು ಮಾಜಿ ಮುಖ್ಯಮಂತ್ರಿಗಳು ಮತ್ತು ಇತರ ಕಾರ್ಯಕರ್ತರನ್ನು ಅನಿರ್ದಿಷ್ಟವಾಗಿ ಬಂಧಿಸುವುದು “ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ನಿರ್ಣಯವು ತಿಳಿಸಿದೆ. ಇದು “ಕಾಶ್ಮೀರದಲ್ಲಿ ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರ ಸಾಂವಿಧಾನಿಕವಾಗಿ ಭರವಸೆ ಪಡೆದ ಹಕ್ಕುಗಳು ಮತ್ತು ಘನತೆಯ ಮೇಲಿನ ದಾಳಿ” ಯನ್ನು ಪ್ರತಿಬಿಂಬಿಸುತ್ತದೆ ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂಬ ಸರ್ಕಾರದ “ಸುಳ್ಳನ್ನು” ಬಹಿರಂಗಪಡಿಸಲಿದೆ ಎಂದು ನಿರ್ಣಯವು ತಿಳಿಸಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ತೃಣಮೂಲ ಕಾಂಗ್ರೆಸ್, ಜನತಾದಳ ಸೆಕ್ಯುಲರ್, ಸಿಪಿಎಂ, ಸಿಪಿಐ, ಲಾಲು ಯಾದವ್ ಅವರ ರಾಷ್ಟ್ರೀಯ ಜನತಾದಳ ಮತ್ತು ಬಿಜೆಪಿ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ ಮತ್ತು ಅರುಣ್ ಶೌರಿ ಅವರ ಹೆಸರನ್ನು ಹೊಂದಿರುವ ಈ ನಿರ್ಣಯಕ್ಕೆ ಕಾಂಗ್ರೆಸ್ ಪಕ್ಷ ಮಾತ್ರ ಸಹಿ ಹಾಕಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...