Homeಮುಖಪುಟಜಮ್ಮು-ಕಾಶ್ಮೀರ| ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ

ಜಮ್ಮು-ಕಾಶ್ಮೀರ| ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ

- Advertisement -
- Advertisement -

ಕದನ ವಿರಾಮ ಒಪ್ಪಂದವನ್ನು ಎತ್ತಿಹಿಡಿಯುವಂತೆ ಹಾಗೂ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಶಾಂತಿ ಖಚಿತಪಡಿಸಿಕೊಳ್ಳಲು ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ಪದೇಪದೆ ಎಚ್ಚರಿಕೆ ನೀಡಿದ್ದರೂ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ರಾಷ್ಟ್ರೋಯ ಮಾಧ್ಯಮಗಳು ವರದಿ ಮಾಡಿವೆ.

“ಪೂಂಚ್ ಜಿಲ್ಲೆಯ ದಿಗ್ವಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಇಂದು ಎಲ್‌ಒಸಿಯಲ್ಲಿ ದ್ವಿಪಕ್ಷೀಯ ಕದನ ವಿರಾಮವನ್ನು ಉಲ್ಲಂಘಿಸಿದೆ. ಭಾರತೀಯ ಸೇನೆಯು ಸೂಕ್ತವಾಗಿ ಪ್ರತಿದಾಳಿ ನಡೆಸಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ಸಮಯದಲ್ಲಿ ಈ ಉಲ್ಲಂಘನೆ ನಡೆದಿದೆ.

ಇತ್ತೀಚಿನ ಕದನ ವಿರಾಮ ಉಲ್ಲಂಘನೆಗಳು ಗಡಿ ಪ್ರದೇಶಗಳ ನಿವಾಸಿಗಳಲ್ಲಿ ಭಯವನ್ನುಂಟುಮಾಡಿವೆ. ಅವರಲ್ಲಿ ಹಲವರು ಇದೇ ರೀತಿಯ ಗಡಿಯಾಚೆಗಿನ ಗುಂಡಿನ ದಾಳಿ ಘಟನೆಗಳನ್ನು ಅನುಭವಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) 2003 ರಲ್ಲಿ ಸಹಿ ಹಾಕಿದ ಕದನ ವಿರಾಮ ಒಪ್ಪಂದವನ್ನು ನವೀಕರಿಸಲು ಒಪ್ಪಿಕೊಂಡರು.

2003 ರಲ್ಲಿ ಎರಡೂ ದೇಶಗಳು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ್ದರೂ, 2012 ರಿಂದ 2021 ರವರೆಗೆ ನೂರಾರು ಗಡಿ ನಿವಾಸಿಗಳು ಕದನ ವಿರಾಮ ಉಲ್ಲಂಘನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಇತ್ತೀಚಿನ ವಾರಗಳಲ್ಲಿ, ಪೂಂಚ್‌ನ ಎಲ್‌ಒಸಿಯ ಉದ್ದಕ್ಕೂ ಪಾಕಿಸ್ತಾನದ ಕಡೆಯಿಂದ ಹಲವಾರು ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿವೆ. ಬೇಸಿಗೆಯ ಆರಂಭದೊಂದಿಗೆ ಗಡಿಯುದ್ದಕ್ಕೂ ಒಳನುಸುಳುವಿಕೆ ಪ್ರಯತ್ನಗಳು ಹೆಚ್ಚುತ್ತಿರುವ ಸಮಯದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಅಂತಹ ಪ್ರಯತ್ನಗಳನ್ನು ಯಶಸ್ವಿಯಾಗಿ ತಡೆದಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ.

ಭಯೋತ್ಪಾದಕರು, ಮುಖ್ಯವಾಗಿ ವಿದೇಶಿಯರು, ಪೂಂಚ್, ರಾಜೌರಿ, ಕಥುವಾ ಮತ್ತು ಕಿಶ್ತ್ವಾರ್ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್ 23 ರಂದು, ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಭಾರತದ ಭಾಗಕ್ಕೆ ನುಸುಳಿದ್ದ ಐದು ಭಯೋತ್ಪಾದಕರ ಗುಂಪನ್ನು ಸ್ಥಳೀಯ ಪೊಲೀಸರ ತಂಡವು ಅಂತರರಾಷ್ಟ್ರೀಯ ಗಡಿಯ 4 ಕಿ.ಮೀ ಒಳಗೆ ಸನ್ಯಾಲ್ ಗ್ರಾಮದಲ್ಲಿ ಎನ್‌ಕೌಂಟರ್‌ ನಡೆಸಿತ್ತು.

ಆ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದರು. ಆದರೆ, ನಾಲ್ವರು ಪೊಲೀಸರು ಸಹ ಸಾವನ್ನಪ್ಪಿದರು.

‘ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ’: ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...