Homeರಾಷ್ಟ್ರೀಯ2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

- Advertisement -
- Advertisement -

ಜಮ್ಮು ಕಾಶ್ಮೀರ ಪೊಲೀಸರು ಇತ್ತೀಚೆಗೆ ರಚಿಸಿದ ರಾಜ್ಯ ತನಿಖಾ ಸಂಸ್ಥೆ(SIA)ಯು ಭಾನುವಾರದಂದು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯನ್ನು ಬಂಧಿಸಿದೆ. 11 ವರ್ಷಗಳ ಹಿಂದೆ ಆನ್‌ಲೈನ್ ಸುದ್ದಿ ನಿಯತಕಾಲಿಕದಲ್ಲಿ ಪ್ರಕಟವಾದ ಲೇಖನಕ್ಕಾಗಿ ವಿದ್ಯಾರ್ಥಿಯನ್ನು ಬಂಧನ ನಡೆದಿದೆ.

2011ರ ನವೆಂಬರ್ 6 ರಂದು ಆನ್‌ಲೈನ್ ಮ್ಯಾಗಜೀನ್ ‘ದಿ ಕಾಶ್ಮೀರ್ ವಾಲಾ’ದಲ್ಲಿ ಪ್ರಕಟವಾದ ಲೇಖನವು ‘ಅತ್ಯಂತ ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ’ ಎಂದು SIA ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿಯನ್ನು ಅಬ್ದುಲ್ ಆಲಾ ಫಾಜಿಲಿ ಎಂದು ಗುರುತಿಸಲಾಗಿದ್ದು, ಅವರು ಕಾಶ್ಮೀರ ವಿಶ್ವವಿದ್ಯಾನಿಲಯದ ಔಷಧೀಯ ವಿಜ್ಞಾನದಲ್ಲಿ ಡಾಕ್ಟರೇಟ್ ಅಧ್ಯಯನವನ್ನು ನಡೆಸುತ್ತಿದ್ದಾರೆ. ಅವರು ಇನ್ನು ಹದಿನೈದು ದಿನದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಅಲ್ಲದೆ ಅವರು ಮಾರ್ಚ್ 2021 ರವರೆಗೆ ಐದು ವರ್ಷಗಳ ಕಾಲ UGC ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಅನ್ನು ಪಡೆದಿದ್ದರು.

ಇದನ್ನೂ ಓದಿ: 180 ಪದಗಳಲ್ಲಿ; ಮೇಲೇಳದ ಟ್ರುಥ್ ಸೋಶಿಯಲ್; ಶರಣನಾದ ಕಾಶ್ಮೀರಿ ಅರಸ; ಗಾಂಧಿ ಮೇಲಿನ ದೇಶದ್ರೋಹಕ್ಕೆ 100

SIA ಅಧಿಕಾರಿಗಳು ಪಿಎಚ್‌ಡಿ ವಿದ್ಯಾರ್ಥಿ ಫಾಜಿಲಿ ಮತ್ತು ಈಗಾಗಲೇ ಜೈಲಿನಲ್ಲಿರುವ ‘ದಿ ಕಾಶ್ಮೀರ್ ವಾಲಾ’ ಸಂಪಾದಕ ಫಹಾದ್ ಶಾ ಅವರ ನಿವಾಸಗಳು ಮತ್ತು ಮ್ಯಾಗಜೀನ್‌ನ ಕಚೇರಿ ಆವರಣದ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ. ಆಪಾದಿತ ‘ದೇಶದ್ರೋಹಿ’ ಲೇಖನಕ್ಕಾಗಿ ಫಾಜಿಲಿ, ಫಹದ್‌‌ ಮತ್ತು ಇತರ ಸಹಚರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈ ಹುಡುಕಾಟಗಳು ನಡೆದಿವೆ ಎಂದು SIA ತಿಳಿಸಿದೆ.

ಫಹದ್‌ ಅವರನ್ನು ಮಾರ್ಚ್ 14 ರಂದು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿತ್ತು‌. ಅವರು ಇದಕ್ಕೂ ಮೊದಲು ನ್ಯಾಯಾಲಯಗಳಿಂದ ಎರಡು ಬಾರಿ ಜಾಮೀನು ಪಡೆದು ಹೊರಬಂದಿದ್ದರು. ಫೆಬ್ರವರಿ 4 ರಂದು ದಕ್ಷಿಣ ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯ ಕುರಿತು ಅವರ ವೆಬ್‌ಸೈಟ್‌ನಲ್ಲಿ ವರದಿ ಮಾಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು.

ಈ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ತಮ್ಮ ಮಗ ಉಗ್ರಗಾಮಿ ಅಲ್ಲ ಎಂದು ಕುಟುಂಬ ಸದಸ್ಯರು ಹೇಳಿರುವುದನ್ನು ಉಲ್ಲೇಖಿಸಿತ್ತು. ಪ್ರಕರಣದಲ್ಲಿ ಅವರು ನ್ಯಾಯಾಲಯದಿಂದ ಜಾಮೀನು ಹೊರ ಬಂದಾಗ, ಮ್ಯಾಗಜೀನ್‌ನಲ್ಲಿ ಮಾಡಿದ್ದ ಮತ್ತೊಂದು ವರದಿಗಾಗಿ ಶೋಪಿಯಾನ್‌ನಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿ, ಅವರನ್ನು ಮತ್ತೊಮ್ಮೆ ಬಂಧಿಸಲಾಯಿತು. ಎರಡನೇ ಬಾರಿಯು ಅವರು ಜಾಮೀನು ಪಡೆದಾಗ, ಪೊಲೀಸರು ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

‘ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ’ ಎಂಬ ಶೀರ್ಷಿಕೆಯ ಲೇಖನವು ಒಂದು ಕಡೆ ಹೆಚ್ಚು ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು, ಭಯೋತ್ಪಾದನೆಯನ್ನು ವೈಭವೀಕರಿಸುವ ಮೂಲಕ ಹಿಂಸಾಚಾರದ ಹಾದಿಯನ್ನು ಹಿಡಿಯಲು ಯುವಕರನ್ನು ಪ್ರೇರೇಪಿಸುವ ಉದ್ದೇಶದಿಂದ ಬರೆಯಲಾಗಿದೆ. ಮತ್ತೊಂದೆಡೆ, ಈ ಬರಹವು ಸುಳ್ಳು ನಿರೂಪಣೆಯನ್ನು ಪ್ರೇರೇಪಿಸಿ ಪ್ರಚಾರ ಮಾಡಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಮುರಿಯುವ ಉದ್ದೇಶದಿಂದ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಅಭಿಯಾನವನ್ನು ಪ್ರಚೋದಿಸಿದೆ ಎಂದು” ಎಂದು SIA ಹೇಳಿಕೆಯಲ್ಲಿ ತಿಳಿಸಿದೆ.

ನಾಗರಿಕ ಪ್ರತಿಭಟನಾಕಾರರ ಮೇಲೆ ನಡೆದ ಬಲಪ್ರಯೋಗವನ್ನು ಖಂಡಿಸಿ ಹಲವಾರು ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2016 ರ ಬೀದಿ ಪ್ರತಿಭಟನೆಯ ಸಮಯದಲ್ಲಿ ಫಾಜಿಲಿ ಬೆಳಕಿಗೆ ಬಂದರು. ಐದು ವರ್ಷಗಳ ಹಿಂದೆಯೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅವರನ್ನು ವಿಚಾರಣೆಗೆ ಕರೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...