Homeರಾಷ್ಟ್ರೀಯ2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

- Advertisement -
- Advertisement -

ಜಮ್ಮು ಕಾಶ್ಮೀರ ಪೊಲೀಸರು ಇತ್ತೀಚೆಗೆ ರಚಿಸಿದ ರಾಜ್ಯ ತನಿಖಾ ಸಂಸ್ಥೆ(SIA)ಯು ಭಾನುವಾರದಂದು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯನ್ನು ಬಂಧಿಸಿದೆ. 11 ವರ್ಷಗಳ ಹಿಂದೆ ಆನ್‌ಲೈನ್ ಸುದ್ದಿ ನಿಯತಕಾಲಿಕದಲ್ಲಿ ಪ್ರಕಟವಾದ ಲೇಖನಕ್ಕಾಗಿ ವಿದ್ಯಾರ್ಥಿಯನ್ನು ಬಂಧನ ನಡೆದಿದೆ.

2011ರ ನವೆಂಬರ್ 6 ರಂದು ಆನ್‌ಲೈನ್ ಮ್ಯಾಗಜೀನ್ ‘ದಿ ಕಾಶ್ಮೀರ್ ವಾಲಾ’ದಲ್ಲಿ ಪ್ರಕಟವಾದ ಲೇಖನವು ‘ಅತ್ಯಂತ ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ’ ಎಂದು SIA ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿಯನ್ನು ಅಬ್ದುಲ್ ಆಲಾ ಫಾಜಿಲಿ ಎಂದು ಗುರುತಿಸಲಾಗಿದ್ದು, ಅವರು ಕಾಶ್ಮೀರ ವಿಶ್ವವಿದ್ಯಾನಿಲಯದ ಔಷಧೀಯ ವಿಜ್ಞಾನದಲ್ಲಿ ಡಾಕ್ಟರೇಟ್ ಅಧ್ಯಯನವನ್ನು ನಡೆಸುತ್ತಿದ್ದಾರೆ. ಅವರು ಇನ್ನು ಹದಿನೈದು ದಿನದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಅಲ್ಲದೆ ಅವರು ಮಾರ್ಚ್ 2021 ರವರೆಗೆ ಐದು ವರ್ಷಗಳ ಕಾಲ UGC ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಅನ್ನು ಪಡೆದಿದ್ದರು.

ಇದನ್ನೂ ಓದಿ: 180 ಪದಗಳಲ್ಲಿ; ಮೇಲೇಳದ ಟ್ರುಥ್ ಸೋಶಿಯಲ್; ಶರಣನಾದ ಕಾಶ್ಮೀರಿ ಅರಸ; ಗಾಂಧಿ ಮೇಲಿನ ದೇಶದ್ರೋಹಕ್ಕೆ 100

SIA ಅಧಿಕಾರಿಗಳು ಪಿಎಚ್‌ಡಿ ವಿದ್ಯಾರ್ಥಿ ಫಾಜಿಲಿ ಮತ್ತು ಈಗಾಗಲೇ ಜೈಲಿನಲ್ಲಿರುವ ‘ದಿ ಕಾಶ್ಮೀರ್ ವಾಲಾ’ ಸಂಪಾದಕ ಫಹಾದ್ ಶಾ ಅವರ ನಿವಾಸಗಳು ಮತ್ತು ಮ್ಯಾಗಜೀನ್‌ನ ಕಚೇರಿ ಆವರಣದ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ. ಆಪಾದಿತ ‘ದೇಶದ್ರೋಹಿ’ ಲೇಖನಕ್ಕಾಗಿ ಫಾಜಿಲಿ, ಫಹದ್‌‌ ಮತ್ತು ಇತರ ಸಹಚರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈ ಹುಡುಕಾಟಗಳು ನಡೆದಿವೆ ಎಂದು SIA ತಿಳಿಸಿದೆ.

ಫಹದ್‌ ಅವರನ್ನು ಮಾರ್ಚ್ 14 ರಂದು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿತ್ತು‌. ಅವರು ಇದಕ್ಕೂ ಮೊದಲು ನ್ಯಾಯಾಲಯಗಳಿಂದ ಎರಡು ಬಾರಿ ಜಾಮೀನು ಪಡೆದು ಹೊರಬಂದಿದ್ದರು. ಫೆಬ್ರವರಿ 4 ರಂದು ದಕ್ಷಿಣ ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯ ಕುರಿತು ಅವರ ವೆಬ್‌ಸೈಟ್‌ನಲ್ಲಿ ವರದಿ ಮಾಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು.

ಈ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ತಮ್ಮ ಮಗ ಉಗ್ರಗಾಮಿ ಅಲ್ಲ ಎಂದು ಕುಟುಂಬ ಸದಸ್ಯರು ಹೇಳಿರುವುದನ್ನು ಉಲ್ಲೇಖಿಸಿತ್ತು. ಪ್ರಕರಣದಲ್ಲಿ ಅವರು ನ್ಯಾಯಾಲಯದಿಂದ ಜಾಮೀನು ಹೊರ ಬಂದಾಗ, ಮ್ಯಾಗಜೀನ್‌ನಲ್ಲಿ ಮಾಡಿದ್ದ ಮತ್ತೊಂದು ವರದಿಗಾಗಿ ಶೋಪಿಯಾನ್‌ನಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿ, ಅವರನ್ನು ಮತ್ತೊಮ್ಮೆ ಬಂಧಿಸಲಾಯಿತು. ಎರಡನೇ ಬಾರಿಯು ಅವರು ಜಾಮೀನು ಪಡೆದಾಗ, ಪೊಲೀಸರು ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

‘ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ’ ಎಂಬ ಶೀರ್ಷಿಕೆಯ ಲೇಖನವು ಒಂದು ಕಡೆ ಹೆಚ್ಚು ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು, ಭಯೋತ್ಪಾದನೆಯನ್ನು ವೈಭವೀಕರಿಸುವ ಮೂಲಕ ಹಿಂಸಾಚಾರದ ಹಾದಿಯನ್ನು ಹಿಡಿಯಲು ಯುವಕರನ್ನು ಪ್ರೇರೇಪಿಸುವ ಉದ್ದೇಶದಿಂದ ಬರೆಯಲಾಗಿದೆ. ಮತ್ತೊಂದೆಡೆ, ಈ ಬರಹವು ಸುಳ್ಳು ನಿರೂಪಣೆಯನ್ನು ಪ್ರೇರೇಪಿಸಿ ಪ್ರಚಾರ ಮಾಡಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಮುರಿಯುವ ಉದ್ದೇಶದಿಂದ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಅಭಿಯಾನವನ್ನು ಪ್ರಚೋದಿಸಿದೆ ಎಂದು” ಎಂದು SIA ಹೇಳಿಕೆಯಲ್ಲಿ ತಿಳಿಸಿದೆ.

ನಾಗರಿಕ ಪ್ರತಿಭಟನಾಕಾರರ ಮೇಲೆ ನಡೆದ ಬಲಪ್ರಯೋಗವನ್ನು ಖಂಡಿಸಿ ಹಲವಾರು ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2016 ರ ಬೀದಿ ಪ್ರತಿಭಟನೆಯ ಸಮಯದಲ್ಲಿ ಫಾಜಿಲಿ ಬೆಳಕಿಗೆ ಬಂದರು. ಐದು ವರ್ಷಗಳ ಹಿಂದೆಯೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅವರನ್ನು ವಿಚಾರಣೆಗೆ ಕರೆದಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...