Homeರಾಷ್ಟ್ರೀಯ2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

- Advertisement -
- Advertisement -

ಜಮ್ಮು ಕಾಶ್ಮೀರ ಪೊಲೀಸರು ಇತ್ತೀಚೆಗೆ ರಚಿಸಿದ ರಾಜ್ಯ ತನಿಖಾ ಸಂಸ್ಥೆ(SIA)ಯು ಭಾನುವಾರದಂದು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯನ್ನು ಬಂಧಿಸಿದೆ. 11 ವರ್ಷಗಳ ಹಿಂದೆ ಆನ್‌ಲೈನ್ ಸುದ್ದಿ ನಿಯತಕಾಲಿಕದಲ್ಲಿ ಪ್ರಕಟವಾದ ಲೇಖನಕ್ಕಾಗಿ ವಿದ್ಯಾರ್ಥಿಯನ್ನು ಬಂಧನ ನಡೆದಿದೆ.

2011ರ ನವೆಂಬರ್ 6 ರಂದು ಆನ್‌ಲೈನ್ ಮ್ಯಾಗಜೀನ್ ‘ದಿ ಕಾಶ್ಮೀರ್ ವಾಲಾ’ದಲ್ಲಿ ಪ್ರಕಟವಾದ ಲೇಖನವು ‘ಅತ್ಯಂತ ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ’ ಎಂದು SIA ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿಯನ್ನು ಅಬ್ದುಲ್ ಆಲಾ ಫಾಜಿಲಿ ಎಂದು ಗುರುತಿಸಲಾಗಿದ್ದು, ಅವರು ಕಾಶ್ಮೀರ ವಿಶ್ವವಿದ್ಯಾನಿಲಯದ ಔಷಧೀಯ ವಿಜ್ಞಾನದಲ್ಲಿ ಡಾಕ್ಟರೇಟ್ ಅಧ್ಯಯನವನ್ನು ನಡೆಸುತ್ತಿದ್ದಾರೆ. ಅವರು ಇನ್ನು ಹದಿನೈದು ದಿನದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಅಲ್ಲದೆ ಅವರು ಮಾರ್ಚ್ 2021 ರವರೆಗೆ ಐದು ವರ್ಷಗಳ ಕಾಲ UGC ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಅನ್ನು ಪಡೆದಿದ್ದರು.

ಇದನ್ನೂ ಓದಿ: 180 ಪದಗಳಲ್ಲಿ; ಮೇಲೇಳದ ಟ್ರುಥ್ ಸೋಶಿಯಲ್; ಶರಣನಾದ ಕಾಶ್ಮೀರಿ ಅರಸ; ಗಾಂಧಿ ಮೇಲಿನ ದೇಶದ್ರೋಹಕ್ಕೆ 100

SIA ಅಧಿಕಾರಿಗಳು ಪಿಎಚ್‌ಡಿ ವಿದ್ಯಾರ್ಥಿ ಫಾಜಿಲಿ ಮತ್ತು ಈಗಾಗಲೇ ಜೈಲಿನಲ್ಲಿರುವ ‘ದಿ ಕಾಶ್ಮೀರ್ ವಾಲಾ’ ಸಂಪಾದಕ ಫಹಾದ್ ಶಾ ಅವರ ನಿವಾಸಗಳು ಮತ್ತು ಮ್ಯಾಗಜೀನ್‌ನ ಕಚೇರಿ ಆವರಣದ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ. ಆಪಾದಿತ ‘ದೇಶದ್ರೋಹಿ’ ಲೇಖನಕ್ಕಾಗಿ ಫಾಜಿಲಿ, ಫಹದ್‌‌ ಮತ್ತು ಇತರ ಸಹಚರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈ ಹುಡುಕಾಟಗಳು ನಡೆದಿವೆ ಎಂದು SIA ತಿಳಿಸಿದೆ.

ಫಹದ್‌ ಅವರನ್ನು ಮಾರ್ಚ್ 14 ರಂದು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿತ್ತು‌. ಅವರು ಇದಕ್ಕೂ ಮೊದಲು ನ್ಯಾಯಾಲಯಗಳಿಂದ ಎರಡು ಬಾರಿ ಜಾಮೀನು ಪಡೆದು ಹೊರಬಂದಿದ್ದರು. ಫೆಬ್ರವರಿ 4 ರಂದು ದಕ್ಷಿಣ ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯ ಕುರಿತು ಅವರ ವೆಬ್‌ಸೈಟ್‌ನಲ್ಲಿ ವರದಿ ಮಾಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು.

ಈ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ತಮ್ಮ ಮಗ ಉಗ್ರಗಾಮಿ ಅಲ್ಲ ಎಂದು ಕುಟುಂಬ ಸದಸ್ಯರು ಹೇಳಿರುವುದನ್ನು ಉಲ್ಲೇಖಿಸಿತ್ತು. ಪ್ರಕರಣದಲ್ಲಿ ಅವರು ನ್ಯಾಯಾಲಯದಿಂದ ಜಾಮೀನು ಹೊರ ಬಂದಾಗ, ಮ್ಯಾಗಜೀನ್‌ನಲ್ಲಿ ಮಾಡಿದ್ದ ಮತ್ತೊಂದು ವರದಿಗಾಗಿ ಶೋಪಿಯಾನ್‌ನಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿ, ಅವರನ್ನು ಮತ್ತೊಮ್ಮೆ ಬಂಧಿಸಲಾಯಿತು. ಎರಡನೇ ಬಾರಿಯು ಅವರು ಜಾಮೀನು ಪಡೆದಾಗ, ಪೊಲೀಸರು ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

‘ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ’ ಎಂಬ ಶೀರ್ಷಿಕೆಯ ಲೇಖನವು ಒಂದು ಕಡೆ ಹೆಚ್ಚು ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು, ಭಯೋತ್ಪಾದನೆಯನ್ನು ವೈಭವೀಕರಿಸುವ ಮೂಲಕ ಹಿಂಸಾಚಾರದ ಹಾದಿಯನ್ನು ಹಿಡಿಯಲು ಯುವಕರನ್ನು ಪ್ರೇರೇಪಿಸುವ ಉದ್ದೇಶದಿಂದ ಬರೆಯಲಾಗಿದೆ. ಮತ್ತೊಂದೆಡೆ, ಈ ಬರಹವು ಸುಳ್ಳು ನಿರೂಪಣೆಯನ್ನು ಪ್ರೇರೇಪಿಸಿ ಪ್ರಚಾರ ಮಾಡಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಮುರಿಯುವ ಉದ್ದೇಶದಿಂದ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಅಭಿಯಾನವನ್ನು ಪ್ರಚೋದಿಸಿದೆ ಎಂದು” ಎಂದು SIA ಹೇಳಿಕೆಯಲ್ಲಿ ತಿಳಿಸಿದೆ.

ನಾಗರಿಕ ಪ್ರತಿಭಟನಾಕಾರರ ಮೇಲೆ ನಡೆದ ಬಲಪ್ರಯೋಗವನ್ನು ಖಂಡಿಸಿ ಹಲವಾರು ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2016 ರ ಬೀದಿ ಪ್ರತಿಭಟನೆಯ ಸಮಯದಲ್ಲಿ ಫಾಜಿಲಿ ಬೆಳಕಿಗೆ ಬಂದರು. ಐದು ವರ್ಷಗಳ ಹಿಂದೆಯೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅವರನ್ನು ವಿಚಾರಣೆಗೆ ಕರೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...