Homeರಾಷ್ಟ್ರೀಯ2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

2011ರ ಆನ್‌ಲೈನ್ ಬರಹಕ್ಕಾಗಿ UAPA ಅಡಿಯಲ್ಲಿ Ph.D ವಿದ್ಯಾರ್ಥಿಯನ್ನು ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರು!

- Advertisement -
- Advertisement -

ಜಮ್ಮು ಕಾಶ್ಮೀರ ಪೊಲೀಸರು ಇತ್ತೀಚೆಗೆ ರಚಿಸಿದ ರಾಜ್ಯ ತನಿಖಾ ಸಂಸ್ಥೆ(SIA)ಯು ಭಾನುವಾರದಂದು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯನ್ನು ಬಂಧಿಸಿದೆ. 11 ವರ್ಷಗಳ ಹಿಂದೆ ಆನ್‌ಲೈನ್ ಸುದ್ದಿ ನಿಯತಕಾಲಿಕದಲ್ಲಿ ಪ್ರಕಟವಾದ ಲೇಖನಕ್ಕಾಗಿ ವಿದ್ಯಾರ್ಥಿಯನ್ನು ಬಂಧನ ನಡೆದಿದೆ.

2011ರ ನವೆಂಬರ್ 6 ರಂದು ಆನ್‌ಲೈನ್ ಮ್ಯಾಗಜೀನ್ ‘ದಿ ಕಾಶ್ಮೀರ್ ವಾಲಾ’ದಲ್ಲಿ ಪ್ರಕಟವಾದ ಲೇಖನವು ‘ಅತ್ಯಂತ ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ’ ಎಂದು SIA ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿಯನ್ನು ಅಬ್ದುಲ್ ಆಲಾ ಫಾಜಿಲಿ ಎಂದು ಗುರುತಿಸಲಾಗಿದ್ದು, ಅವರು ಕಾಶ್ಮೀರ ವಿಶ್ವವಿದ್ಯಾನಿಲಯದ ಔಷಧೀಯ ವಿಜ್ಞಾನದಲ್ಲಿ ಡಾಕ್ಟರೇಟ್ ಅಧ್ಯಯನವನ್ನು ನಡೆಸುತ್ತಿದ್ದಾರೆ. ಅವರು ಇನ್ನು ಹದಿನೈದು ದಿನದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಅಲ್ಲದೆ ಅವರು ಮಾರ್ಚ್ 2021 ರವರೆಗೆ ಐದು ವರ್ಷಗಳ ಕಾಲ UGC ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಅನ್ನು ಪಡೆದಿದ್ದರು.

ಇದನ್ನೂ ಓದಿ: 180 ಪದಗಳಲ್ಲಿ; ಮೇಲೇಳದ ಟ್ರುಥ್ ಸೋಶಿಯಲ್; ಶರಣನಾದ ಕಾಶ್ಮೀರಿ ಅರಸ; ಗಾಂಧಿ ಮೇಲಿನ ದೇಶದ್ರೋಹಕ್ಕೆ 100

SIA ಅಧಿಕಾರಿಗಳು ಪಿಎಚ್‌ಡಿ ವಿದ್ಯಾರ್ಥಿ ಫಾಜಿಲಿ ಮತ್ತು ಈಗಾಗಲೇ ಜೈಲಿನಲ್ಲಿರುವ ‘ದಿ ಕಾಶ್ಮೀರ್ ವಾಲಾ’ ಸಂಪಾದಕ ಫಹಾದ್ ಶಾ ಅವರ ನಿವಾಸಗಳು ಮತ್ತು ಮ್ಯಾಗಜೀನ್‌ನ ಕಚೇರಿ ಆವರಣದ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ. ಆಪಾದಿತ ‘ದೇಶದ್ರೋಹಿ’ ಲೇಖನಕ್ಕಾಗಿ ಫಾಜಿಲಿ, ಫಹದ್‌‌ ಮತ್ತು ಇತರ ಸಹಚರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈ ಹುಡುಕಾಟಗಳು ನಡೆದಿವೆ ಎಂದು SIA ತಿಳಿಸಿದೆ.

ಫಹದ್‌ ಅವರನ್ನು ಮಾರ್ಚ್ 14 ರಂದು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿತ್ತು‌. ಅವರು ಇದಕ್ಕೂ ಮೊದಲು ನ್ಯಾಯಾಲಯಗಳಿಂದ ಎರಡು ಬಾರಿ ಜಾಮೀನು ಪಡೆದು ಹೊರಬಂದಿದ್ದರು. ಫೆಬ್ರವರಿ 4 ರಂದು ದಕ್ಷಿಣ ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯ ಕುರಿತು ಅವರ ವೆಬ್‌ಸೈಟ್‌ನಲ್ಲಿ ವರದಿ ಮಾಡಿದ್ದಕ್ಕಾಗಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಗಿತ್ತು.

ಈ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ತಮ್ಮ ಮಗ ಉಗ್ರಗಾಮಿ ಅಲ್ಲ ಎಂದು ಕುಟುಂಬ ಸದಸ್ಯರು ಹೇಳಿರುವುದನ್ನು ಉಲ್ಲೇಖಿಸಿತ್ತು. ಪ್ರಕರಣದಲ್ಲಿ ಅವರು ನ್ಯಾಯಾಲಯದಿಂದ ಜಾಮೀನು ಹೊರ ಬಂದಾಗ, ಮ್ಯಾಗಜೀನ್‌ನಲ್ಲಿ ಮಾಡಿದ್ದ ಮತ್ತೊಂದು ವರದಿಗಾಗಿ ಶೋಪಿಯಾನ್‌ನಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿ, ಅವರನ್ನು ಮತ್ತೊಮ್ಮೆ ಬಂಧಿಸಲಾಯಿತು. ಎರಡನೇ ಬಾರಿಯು ಅವರು ಜಾಮೀನು ಪಡೆದಾಗ, ಪೊಲೀಸರು ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

‘ಗುಲಾಮಗಿರಿಯ ಸಂಕೋಲೆಗಳು ಒಡೆಯುತ್ತವೆ’ ಎಂಬ ಶೀರ್ಷಿಕೆಯ ಲೇಖನವು ಒಂದು ಕಡೆ ಹೆಚ್ಚು ಪ್ರಚೋದನಕಾರಿ, ದೇಶದ್ರೋಹಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು, ಭಯೋತ್ಪಾದನೆಯನ್ನು ವೈಭವೀಕರಿಸುವ ಮೂಲಕ ಹಿಂಸಾಚಾರದ ಹಾದಿಯನ್ನು ಹಿಡಿಯಲು ಯುವಕರನ್ನು ಪ್ರೇರೇಪಿಸುವ ಉದ್ದೇಶದಿಂದ ಬರೆಯಲಾಗಿದೆ. ಮತ್ತೊಂದೆಡೆ, ಈ ಬರಹವು ಸುಳ್ಳು ನಿರೂಪಣೆಯನ್ನು ಪ್ರೇರೇಪಿಸಿ ಪ್ರಚಾರ ಮಾಡಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಮುರಿಯುವ ಉದ್ದೇಶದಿಂದ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಅಭಿಯಾನವನ್ನು ಪ್ರಚೋದಿಸಿದೆ ಎಂದು” ಎಂದು SIA ಹೇಳಿಕೆಯಲ್ಲಿ ತಿಳಿಸಿದೆ.

ನಾಗರಿಕ ಪ್ರತಿಭಟನಾಕಾರರ ಮೇಲೆ ನಡೆದ ಬಲಪ್ರಯೋಗವನ್ನು ಖಂಡಿಸಿ ಹಲವಾರು ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2016 ರ ಬೀದಿ ಪ್ರತಿಭಟನೆಯ ಸಮಯದಲ್ಲಿ ಫಾಜಿಲಿ ಬೆಳಕಿಗೆ ಬಂದರು. ಐದು ವರ್ಷಗಳ ಹಿಂದೆಯೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅವರನ್ನು ವಿಚಾರಣೆಗೆ ಕರೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...