Homeಮುಖಪುಟಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವಾರ ಬಂದನಕ್ಕೊಳಗಾಗಿದ್ದ ಪತ್ರಕರ್‍ತ ಸಜಾದ್ ಗುಲ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾಶ್ಮೀರ ಪ್ರೆಸ್ ಕ್ಲಬ್ ಸೋಮವಾರ ಆಗ್ರಹಿಸಿದೆ. ಗುಲ್ ಅವರ ವಿರುದ್ದದ ಎಲ್ಲಾ ಪ್ರಕರಣಗಳನ್ನು ಕೈಬಿಡುವಂತೆ ಅದಿಕಾರಿಗಳಲ್ಲಿ ಪ್ರೆಸ್‌ ಕ್ಲಬ್‌ ಒತ್ತಾಯಿಸಿದೆ.

ಶ್ರೀನಗರದಲ್ಲಿ ಗುಂಡಿನ ಚಕಮಕಿಯಲ್ಲಿ ತಮ್ಮ ಸಂಬಂದಿಕರು ಸಾವನ್ನಪ್ಪಿದ ನಂತರ ಕುಟುಂಬವೊಂದು ಬಾರತ ವಿರೋದಿ ಗೋಶಣೆಗಳನ್ನು ಕೂಗಿತ್ತು. ಅದರ ವೀಡಿಯೊವನ್ನು ‘ಕಾಶ್ಮೀರ ವಾಲ್ಲಾ’ದಲ್ಲಿ ಉದ್ಯೋಗದಲ್ಲಿರುವ ಪತ್ರಕರ್‍ತ ಗುಲ್ ಪೋಸ್ಟ್‌ ಮಾಡಿದ್ದರು. ನಂತರ ಅವರನ್ನು ಬಂದಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ (ಜನವರಿ 3) ಬದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ‌ಹತ್ಯೆಯಾದ ವ್ಯಕ್ತಿಯು ಶಂಕಿತ ಲಶ್ಕರ್-ಎ-ತೊಯ್ಬಾದ ಉಗ್ರನೆಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ಹತ್ಯೆಯ ವಿರುದ್ದ ನಡೆದ ಪ್ರತಿಬಟನೆಯ ವಿಡಿಯೊವನ್ನು ಗುಲ್‌ ಪೋಸ್ಟ್‌ ಮಾಡಿದ್ದರು.

ಗುಲ್ ವಿರುದ್ದ ಬಾರತೀಯ ದಂಡ ಸಂಹಿತೆಯ ಸೆಕ್ಶನ್ 120ಬಿ (ಅಪರಾದದ ಪಿತೂರಿ), 153ಬಿ (ಆರೋಪಗಳು, ರಾಶ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಉಂಟುಮಾಡುವುದು), 505ಬಿ (ಸಾರ್ವಜನಿಕರಿಗೆ ಬಯ ಅತವಾ ಎಚ್ಚರಿಕೆ) ಅಡಿಯಲ್ಲಿ ಪ್ರಕರಣ ದಾಕಲಿಸಲಾಗಿದೆ.

ಕಾಶ್ಮೀರ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ, “ಗುಲ್ ಬಂದನದಿಂದ ವಿಚಲಿತವಾಗುವಂತಾಗಿದೆ. ಕಾಶ್ಮೀರದಲ್ಲಿ ಪತ್ರಿಕೋದ್ಯಮವನ್ನು ಅಪರಾದೀಕರಿಸುವ ಗುರಿಯನ್ನು ಈ ಬಂದನವು ಹೊಂದಿದೆ” ಎಂದು ಅಬಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಪತ್ರಕರ್‍ತರ ಮೇಲೆ ಪೊಲೀಸರಿಂದಾಗುತ್ತಿರುವ ಕಿರುಕುಳ, ಕಾನೂನು ಕ್ರಮಗಳ ಕುರಿತು ಪತ್ರಕರ್‍ತರು ಆತಂಕ ವ್ಯಕ್ತಪಡಿಸಿದ್ದಾರೆ. ಮಾದ್ಯಮದ ಪ್ರತಿನಿದಿಗಳಿಗೆ ಬೆದರಿಕೆ, ಸಮನ್ಸ್ ನೀಡಲಾಗುತ್ತಿದೆ ಎಂಬ ಆಕ್ಶೇಪಗಳು ಬಂದಿವೆ.

2019ರಲ್ಲಿ ಸಂವಿದಾನದ 370ನೇ ವಿದಿಯನ್ನು ಕೇಂದ್ರ ಸರ್ಕಾರ ರದ್ದುಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಕರ್‍ತರು ಹೆಚ್ಚಿನ ಬೆದರಿಕೆ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಶದಿಂದ ಗುಲ್ ಅವರು ಅನೇಕ ಸಂದರ್ಬಗಳಲ್ಲಿ ಪೊಲೀಸರ ಕ್ರಮಗಳನ್ನು ಎದುರಿಸಿದ್ದಾರೆ ಎಂದು ವರದಿಗಳಾಗಿವೆ.

2021ರ ಪೆಬ್ರವರಿ 9ರಂದು ದಿ ಕಾಶ್ಮೀರ್ ವಾಲಾಗೆ ಬರೆದ ಲೇಖನದ ಕಾರಣಕ್ಕಾಗಿ “ಗಲಬೆ, ಅತಿಕ್ರಮಣ ಮತ್ತು ಹಲ್ಲೆ” ಆರೋಪವನ್ನು ಗುಲ್‌ ಮೇಲೆ ಹೊರಿಸಲಾಗಿದೆ ಎಂದು ವರದಿಯಾಗಿದೆ. ತಹಸೀಲ್ದಾರ್ ಹಾಜಿನ್ ಗುಲಾಮ್ ಮೊಹಮ್ಮದ್ ಬಟ್ ಅವರು ತೆರವು ಕಾರ್ಯಾಚರಣೆ ನಡೆಸಿ ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಬಂಡಿಪೋರಾದ ಗ್ರಾಮಸ್ಥರು ಆರೋಪಿಸಿದ್ದರು. ಈ ವರದಿಯನ್ನು ಗುಲ್‌ ಮಾಡಿದ್ದರು.

ವರದಿ ಹಾಗೂ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗೆ ಸಂಬಂದಿಸಿದಂತೆ ವಿಚಾರಣೆಗಾಗಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪೊಲೀಸ್ ಟಾಣೆಗೆ ಗುಲ್ ಅವರನ್ನು ಕರೆಸಲಾಗಿತ್ತು.

ಮೌಂಟೇನ್ ಇಂಕ್ ಮ್ಯಾಗಜೀನ್‌ನಲ್ಲಿ ಪ್ರಕಟವಾದ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ 25 ವರ್ಷದ ವ್ಯಕ್ತಿಯ ಕುರಿತ್ತಾಗಿತ್ತು. ಇಮ್ತಿಯಾಜ್ ಅಹ್ಮದ್ ಕಕ್ರೂ ನಿರಪರಾದಿಯಾಗಿದ್ದು, ‘ನಕಲಿ ಎನ್ಕೌಂಟರ್’ನಲ್ಲಿ ಅವರನ್ನು ಪೊಲೀಸರು ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದನ್ನು ಗುಲ್‌ ವರದಿ ಮಾಡಿದ್ದರು.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...