Homeಮುಖಪುಟಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವಾರ ಬಂದನಕ್ಕೊಳಗಾಗಿದ್ದ ಪತ್ರಕರ್‍ತ ಸಜಾದ್ ಗುಲ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾಶ್ಮೀರ ಪ್ರೆಸ್ ಕ್ಲಬ್ ಸೋಮವಾರ ಆಗ್ರಹಿಸಿದೆ. ಗುಲ್ ಅವರ ವಿರುದ್ದದ ಎಲ್ಲಾ ಪ್ರಕರಣಗಳನ್ನು ಕೈಬಿಡುವಂತೆ ಅದಿಕಾರಿಗಳಲ್ಲಿ ಪ್ರೆಸ್‌ ಕ್ಲಬ್‌ ಒತ್ತಾಯಿಸಿದೆ.

ಶ್ರೀನಗರದಲ್ಲಿ ಗುಂಡಿನ ಚಕಮಕಿಯಲ್ಲಿ ತಮ್ಮ ಸಂಬಂದಿಕರು ಸಾವನ್ನಪ್ಪಿದ ನಂತರ ಕುಟುಂಬವೊಂದು ಬಾರತ ವಿರೋದಿ ಗೋಶಣೆಗಳನ್ನು ಕೂಗಿತ್ತು. ಅದರ ವೀಡಿಯೊವನ್ನು ‘ಕಾಶ್ಮೀರ ವಾಲ್ಲಾ’ದಲ್ಲಿ ಉದ್ಯೋಗದಲ್ಲಿರುವ ಪತ್ರಕರ್‍ತ ಗುಲ್ ಪೋಸ್ಟ್‌ ಮಾಡಿದ್ದರು. ನಂತರ ಅವರನ್ನು ಬಂದಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ (ಜನವರಿ 3) ಬದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ‌ಹತ್ಯೆಯಾದ ವ್ಯಕ್ತಿಯು ಶಂಕಿತ ಲಶ್ಕರ್-ಎ-ತೊಯ್ಬಾದ ಉಗ್ರನೆಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ಹತ್ಯೆಯ ವಿರುದ್ದ ನಡೆದ ಪ್ರತಿಬಟನೆಯ ವಿಡಿಯೊವನ್ನು ಗುಲ್‌ ಪೋಸ್ಟ್‌ ಮಾಡಿದ್ದರು.

ಗುಲ್ ವಿರುದ್ದ ಬಾರತೀಯ ದಂಡ ಸಂಹಿತೆಯ ಸೆಕ್ಶನ್ 120ಬಿ (ಅಪರಾದದ ಪಿತೂರಿ), 153ಬಿ (ಆರೋಪಗಳು, ರಾಶ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಉಂಟುಮಾಡುವುದು), 505ಬಿ (ಸಾರ್ವಜನಿಕರಿಗೆ ಬಯ ಅತವಾ ಎಚ್ಚರಿಕೆ) ಅಡಿಯಲ್ಲಿ ಪ್ರಕರಣ ದಾಕಲಿಸಲಾಗಿದೆ.

ಕಾಶ್ಮೀರ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ, “ಗುಲ್ ಬಂದನದಿಂದ ವಿಚಲಿತವಾಗುವಂತಾಗಿದೆ. ಕಾಶ್ಮೀರದಲ್ಲಿ ಪತ್ರಿಕೋದ್ಯಮವನ್ನು ಅಪರಾದೀಕರಿಸುವ ಗುರಿಯನ್ನು ಈ ಬಂದನವು ಹೊಂದಿದೆ” ಎಂದು ಅಬಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಪತ್ರಕರ್‍ತರ ಮೇಲೆ ಪೊಲೀಸರಿಂದಾಗುತ್ತಿರುವ ಕಿರುಕುಳ, ಕಾನೂನು ಕ್ರಮಗಳ ಕುರಿತು ಪತ್ರಕರ್‍ತರು ಆತಂಕ ವ್ಯಕ್ತಪಡಿಸಿದ್ದಾರೆ. ಮಾದ್ಯಮದ ಪ್ರತಿನಿದಿಗಳಿಗೆ ಬೆದರಿಕೆ, ಸಮನ್ಸ್ ನೀಡಲಾಗುತ್ತಿದೆ ಎಂಬ ಆಕ್ಶೇಪಗಳು ಬಂದಿವೆ.

2019ರಲ್ಲಿ ಸಂವಿದಾನದ 370ನೇ ವಿದಿಯನ್ನು ಕೇಂದ್ರ ಸರ್ಕಾರ ರದ್ದುಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಕರ್‍ತರು ಹೆಚ್ಚಿನ ಬೆದರಿಕೆ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಶದಿಂದ ಗುಲ್ ಅವರು ಅನೇಕ ಸಂದರ್ಬಗಳಲ್ಲಿ ಪೊಲೀಸರ ಕ್ರಮಗಳನ್ನು ಎದುರಿಸಿದ್ದಾರೆ ಎಂದು ವರದಿಗಳಾಗಿವೆ.

2021ರ ಪೆಬ್ರವರಿ 9ರಂದು ದಿ ಕಾಶ್ಮೀರ್ ವಾಲಾಗೆ ಬರೆದ ಲೇಖನದ ಕಾರಣಕ್ಕಾಗಿ “ಗಲಬೆ, ಅತಿಕ್ರಮಣ ಮತ್ತು ಹಲ್ಲೆ” ಆರೋಪವನ್ನು ಗುಲ್‌ ಮೇಲೆ ಹೊರಿಸಲಾಗಿದೆ ಎಂದು ವರದಿಯಾಗಿದೆ. ತಹಸೀಲ್ದಾರ್ ಹಾಜಿನ್ ಗುಲಾಮ್ ಮೊಹಮ್ಮದ್ ಬಟ್ ಅವರು ತೆರವು ಕಾರ್ಯಾಚರಣೆ ನಡೆಸಿ ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಬಂಡಿಪೋರಾದ ಗ್ರಾಮಸ್ಥರು ಆರೋಪಿಸಿದ್ದರು. ಈ ವರದಿಯನ್ನು ಗುಲ್‌ ಮಾಡಿದ್ದರು.

ವರದಿ ಹಾಗೂ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗೆ ಸಂಬಂದಿಸಿದಂತೆ ವಿಚಾರಣೆಗಾಗಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪೊಲೀಸ್ ಟಾಣೆಗೆ ಗುಲ್ ಅವರನ್ನು ಕರೆಸಲಾಗಿತ್ತು.

ಮೌಂಟೇನ್ ಇಂಕ್ ಮ್ಯಾಗಜೀನ್‌ನಲ್ಲಿ ಪ್ರಕಟವಾದ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ 25 ವರ್ಷದ ವ್ಯಕ್ತಿಯ ಕುರಿತ್ತಾಗಿತ್ತು. ಇಮ್ತಿಯಾಜ್ ಅಹ್ಮದ್ ಕಕ್ರೂ ನಿರಪರಾದಿಯಾಗಿದ್ದು, ‘ನಕಲಿ ಎನ್ಕೌಂಟರ್’ನಲ್ಲಿ ಅವರನ್ನು ಪೊಲೀಸರು ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದನ್ನು ಗುಲ್‌ ವರದಿ ಮಾಡಿದ್ದರು.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...