Homeಮುಖಪುಟಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವಾರ ಬಂದನಕ್ಕೊಳಗಾಗಿದ್ದ ಪತ್ರಕರ್‍ತ ಸಜಾದ್ ಗುಲ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾಶ್ಮೀರ ಪ್ರೆಸ್ ಕ್ಲಬ್ ಸೋಮವಾರ ಆಗ್ರಹಿಸಿದೆ. ಗುಲ್ ಅವರ ವಿರುದ್ದದ ಎಲ್ಲಾ ಪ್ರಕರಣಗಳನ್ನು ಕೈಬಿಡುವಂತೆ ಅದಿಕಾರಿಗಳಲ್ಲಿ ಪ್ರೆಸ್‌ ಕ್ಲಬ್‌ ಒತ್ತಾಯಿಸಿದೆ.

ಶ್ರೀನಗರದಲ್ಲಿ ಗುಂಡಿನ ಚಕಮಕಿಯಲ್ಲಿ ತಮ್ಮ ಸಂಬಂದಿಕರು ಸಾವನ್ನಪ್ಪಿದ ನಂತರ ಕುಟುಂಬವೊಂದು ಬಾರತ ವಿರೋದಿ ಗೋಶಣೆಗಳನ್ನು ಕೂಗಿತ್ತು. ಅದರ ವೀಡಿಯೊವನ್ನು ‘ಕಾಶ್ಮೀರ ವಾಲ್ಲಾ’ದಲ್ಲಿ ಉದ್ಯೋಗದಲ್ಲಿರುವ ಪತ್ರಕರ್‍ತ ಗುಲ್ ಪೋಸ್ಟ್‌ ಮಾಡಿದ್ದರು. ನಂತರ ಅವರನ್ನು ಬಂದಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ (ಜನವರಿ 3) ಬದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ‌ಹತ್ಯೆಯಾದ ವ್ಯಕ್ತಿಯು ಶಂಕಿತ ಲಶ್ಕರ್-ಎ-ತೊಯ್ಬಾದ ಉಗ್ರನೆಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ಹತ್ಯೆಯ ವಿರುದ್ದ ನಡೆದ ಪ್ರತಿಬಟನೆಯ ವಿಡಿಯೊವನ್ನು ಗುಲ್‌ ಪೋಸ್ಟ್‌ ಮಾಡಿದ್ದರು.

ಗುಲ್ ವಿರುದ್ದ ಬಾರತೀಯ ದಂಡ ಸಂಹಿತೆಯ ಸೆಕ್ಶನ್ 120ಬಿ (ಅಪರಾದದ ಪಿತೂರಿ), 153ಬಿ (ಆರೋಪಗಳು, ರಾಶ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಉಂಟುಮಾಡುವುದು), 505ಬಿ (ಸಾರ್ವಜನಿಕರಿಗೆ ಬಯ ಅತವಾ ಎಚ್ಚರಿಕೆ) ಅಡಿಯಲ್ಲಿ ಪ್ರಕರಣ ದಾಕಲಿಸಲಾಗಿದೆ.

ಕಾಶ್ಮೀರ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ, “ಗುಲ್ ಬಂದನದಿಂದ ವಿಚಲಿತವಾಗುವಂತಾಗಿದೆ. ಕಾಶ್ಮೀರದಲ್ಲಿ ಪತ್ರಿಕೋದ್ಯಮವನ್ನು ಅಪರಾದೀಕರಿಸುವ ಗುರಿಯನ್ನು ಈ ಬಂದನವು ಹೊಂದಿದೆ” ಎಂದು ಅಬಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಪತ್ರಕರ್‍ತರ ಮೇಲೆ ಪೊಲೀಸರಿಂದಾಗುತ್ತಿರುವ ಕಿರುಕುಳ, ಕಾನೂನು ಕ್ರಮಗಳ ಕುರಿತು ಪತ್ರಕರ್‍ತರು ಆತಂಕ ವ್ಯಕ್ತಪಡಿಸಿದ್ದಾರೆ. ಮಾದ್ಯಮದ ಪ್ರತಿನಿದಿಗಳಿಗೆ ಬೆದರಿಕೆ, ಸಮನ್ಸ್ ನೀಡಲಾಗುತ್ತಿದೆ ಎಂಬ ಆಕ್ಶೇಪಗಳು ಬಂದಿವೆ.

2019ರಲ್ಲಿ ಸಂವಿದಾನದ 370ನೇ ವಿದಿಯನ್ನು ಕೇಂದ್ರ ಸರ್ಕಾರ ರದ್ದುಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಕರ್‍ತರು ಹೆಚ್ಚಿನ ಬೆದರಿಕೆ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಶದಿಂದ ಗುಲ್ ಅವರು ಅನೇಕ ಸಂದರ್ಬಗಳಲ್ಲಿ ಪೊಲೀಸರ ಕ್ರಮಗಳನ್ನು ಎದುರಿಸಿದ್ದಾರೆ ಎಂದು ವರದಿಗಳಾಗಿವೆ.

2021ರ ಪೆಬ್ರವರಿ 9ರಂದು ದಿ ಕಾಶ್ಮೀರ್ ವಾಲಾಗೆ ಬರೆದ ಲೇಖನದ ಕಾರಣಕ್ಕಾಗಿ “ಗಲಬೆ, ಅತಿಕ್ರಮಣ ಮತ್ತು ಹಲ್ಲೆ” ಆರೋಪವನ್ನು ಗುಲ್‌ ಮೇಲೆ ಹೊರಿಸಲಾಗಿದೆ ಎಂದು ವರದಿಯಾಗಿದೆ. ತಹಸೀಲ್ದಾರ್ ಹಾಜಿನ್ ಗುಲಾಮ್ ಮೊಹಮ್ಮದ್ ಬಟ್ ಅವರು ತೆರವು ಕಾರ್ಯಾಚರಣೆ ನಡೆಸಿ ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಬಂಡಿಪೋರಾದ ಗ್ರಾಮಸ್ಥರು ಆರೋಪಿಸಿದ್ದರು. ಈ ವರದಿಯನ್ನು ಗುಲ್‌ ಮಾಡಿದ್ದರು.

ವರದಿ ಹಾಗೂ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗೆ ಸಂಬಂದಿಸಿದಂತೆ ವಿಚಾರಣೆಗಾಗಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪೊಲೀಸ್ ಟಾಣೆಗೆ ಗುಲ್ ಅವರನ್ನು ಕರೆಸಲಾಗಿತ್ತು.

ಮೌಂಟೇನ್ ಇಂಕ್ ಮ್ಯಾಗಜೀನ್‌ನಲ್ಲಿ ಪ್ರಕಟವಾದ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ 25 ವರ್ಷದ ವ್ಯಕ್ತಿಯ ಕುರಿತ್ತಾಗಿತ್ತು. ಇಮ್ತಿಯಾಜ್ ಅಹ್ಮದ್ ಕಕ್ರೂ ನಿರಪರಾದಿಯಾಗಿದ್ದು, ‘ನಕಲಿ ಎನ್ಕೌಂಟರ್’ನಲ್ಲಿ ಅವರನ್ನು ಪೊಲೀಸರು ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದನ್ನು ಗುಲ್‌ ವರದಿ ಮಾಡಿದ್ದರು.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...