Homeಮುಖಪುಟಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವಾರ ಬಂದನಕ್ಕೊಳಗಾಗಿದ್ದ ಪತ್ರಕರ್‍ತ ಸಜಾದ್ ಗುಲ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾಶ್ಮೀರ ಪ್ರೆಸ್ ಕ್ಲಬ್ ಸೋಮವಾರ ಆಗ್ರಹಿಸಿದೆ. ಗುಲ್ ಅವರ ವಿರುದ್ದದ ಎಲ್ಲಾ ಪ್ರಕರಣಗಳನ್ನು ಕೈಬಿಡುವಂತೆ ಅದಿಕಾರಿಗಳಲ್ಲಿ ಪ್ರೆಸ್‌ ಕ್ಲಬ್‌ ಒತ್ತಾಯಿಸಿದೆ.

ಶ್ರೀನಗರದಲ್ಲಿ ಗುಂಡಿನ ಚಕಮಕಿಯಲ್ಲಿ ತಮ್ಮ ಸಂಬಂದಿಕರು ಸಾವನ್ನಪ್ಪಿದ ನಂತರ ಕುಟುಂಬವೊಂದು ಬಾರತ ವಿರೋದಿ ಗೋಶಣೆಗಳನ್ನು ಕೂಗಿತ್ತು. ಅದರ ವೀಡಿಯೊವನ್ನು ‘ಕಾಶ್ಮೀರ ವಾಲ್ಲಾ’ದಲ್ಲಿ ಉದ್ಯೋಗದಲ್ಲಿರುವ ಪತ್ರಕರ್‍ತ ಗುಲ್ ಪೋಸ್ಟ್‌ ಮಾಡಿದ್ದರು. ನಂತರ ಅವರನ್ನು ಬಂದಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ (ಜನವರಿ 3) ಬದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ‌ಹತ್ಯೆಯಾದ ವ್ಯಕ್ತಿಯು ಶಂಕಿತ ಲಶ್ಕರ್-ಎ-ತೊಯ್ಬಾದ ಉಗ್ರನೆಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ಹತ್ಯೆಯ ವಿರುದ್ದ ನಡೆದ ಪ್ರತಿಬಟನೆಯ ವಿಡಿಯೊವನ್ನು ಗುಲ್‌ ಪೋಸ್ಟ್‌ ಮಾಡಿದ್ದರು.

ಗುಲ್ ವಿರುದ್ದ ಬಾರತೀಯ ದಂಡ ಸಂಹಿತೆಯ ಸೆಕ್ಶನ್ 120ಬಿ (ಅಪರಾದದ ಪಿತೂರಿ), 153ಬಿ (ಆರೋಪಗಳು, ರಾಶ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಉಂಟುಮಾಡುವುದು), 505ಬಿ (ಸಾರ್ವಜನಿಕರಿಗೆ ಬಯ ಅತವಾ ಎಚ್ಚರಿಕೆ) ಅಡಿಯಲ್ಲಿ ಪ್ರಕರಣ ದಾಕಲಿಸಲಾಗಿದೆ.

ಕಾಶ್ಮೀರ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ, “ಗುಲ್ ಬಂದನದಿಂದ ವಿಚಲಿತವಾಗುವಂತಾಗಿದೆ. ಕಾಶ್ಮೀರದಲ್ಲಿ ಪತ್ರಿಕೋದ್ಯಮವನ್ನು ಅಪರಾದೀಕರಿಸುವ ಗುರಿಯನ್ನು ಈ ಬಂದನವು ಹೊಂದಿದೆ” ಎಂದು ಅಬಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಪತ್ರಕರ್‍ತರ ಮೇಲೆ ಪೊಲೀಸರಿಂದಾಗುತ್ತಿರುವ ಕಿರುಕುಳ, ಕಾನೂನು ಕ್ರಮಗಳ ಕುರಿತು ಪತ್ರಕರ್‍ತರು ಆತಂಕ ವ್ಯಕ್ತಪಡಿಸಿದ್ದಾರೆ. ಮಾದ್ಯಮದ ಪ್ರತಿನಿದಿಗಳಿಗೆ ಬೆದರಿಕೆ, ಸಮನ್ಸ್ ನೀಡಲಾಗುತ್ತಿದೆ ಎಂಬ ಆಕ್ಶೇಪಗಳು ಬಂದಿವೆ.

2019ರಲ್ಲಿ ಸಂವಿದಾನದ 370ನೇ ವಿದಿಯನ್ನು ಕೇಂದ್ರ ಸರ್ಕಾರ ರದ್ದುಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಕರ್‍ತರು ಹೆಚ್ಚಿನ ಬೆದರಿಕೆ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಶದಿಂದ ಗುಲ್ ಅವರು ಅನೇಕ ಸಂದರ್ಬಗಳಲ್ಲಿ ಪೊಲೀಸರ ಕ್ರಮಗಳನ್ನು ಎದುರಿಸಿದ್ದಾರೆ ಎಂದು ವರದಿಗಳಾಗಿವೆ.

2021ರ ಪೆಬ್ರವರಿ 9ರಂದು ದಿ ಕಾಶ್ಮೀರ್ ವಾಲಾಗೆ ಬರೆದ ಲೇಖನದ ಕಾರಣಕ್ಕಾಗಿ “ಗಲಬೆ, ಅತಿಕ್ರಮಣ ಮತ್ತು ಹಲ್ಲೆ” ಆರೋಪವನ್ನು ಗುಲ್‌ ಮೇಲೆ ಹೊರಿಸಲಾಗಿದೆ ಎಂದು ವರದಿಯಾಗಿದೆ. ತಹಸೀಲ್ದಾರ್ ಹಾಜಿನ್ ಗುಲಾಮ್ ಮೊಹಮ್ಮದ್ ಬಟ್ ಅವರು ತೆರವು ಕಾರ್ಯಾಚರಣೆ ನಡೆಸಿ ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಬಂಡಿಪೋರಾದ ಗ್ರಾಮಸ್ಥರು ಆರೋಪಿಸಿದ್ದರು. ಈ ವರದಿಯನ್ನು ಗುಲ್‌ ಮಾಡಿದ್ದರು.

ವರದಿ ಹಾಗೂ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗೆ ಸಂಬಂದಿಸಿದಂತೆ ವಿಚಾರಣೆಗಾಗಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪೊಲೀಸ್ ಟಾಣೆಗೆ ಗುಲ್ ಅವರನ್ನು ಕರೆಸಲಾಗಿತ್ತು.

ಮೌಂಟೇನ್ ಇಂಕ್ ಮ್ಯಾಗಜೀನ್‌ನಲ್ಲಿ ಪ್ರಕಟವಾದ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ 25 ವರ್ಷದ ವ್ಯಕ್ತಿಯ ಕುರಿತ್ತಾಗಿತ್ತು. ಇಮ್ತಿಯಾಜ್ ಅಹ್ಮದ್ ಕಕ್ರೂ ನಿರಪರಾದಿಯಾಗಿದ್ದು, ‘ನಕಲಿ ಎನ್ಕೌಂಟರ್’ನಲ್ಲಿ ಅವರನ್ನು ಪೊಲೀಸರು ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದನ್ನು ಗುಲ್‌ ವರದಿ ಮಾಡಿದ್ದರು.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...