Homeಮುಖಪುಟಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವಾರ ಬಂದನಕ್ಕೊಳಗಾಗಿದ್ದ ಪತ್ರಕರ್‍ತ ಸಜಾದ್ ಗುಲ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾಶ್ಮೀರ ಪ್ರೆಸ್ ಕ್ಲಬ್ ಸೋಮವಾರ ಆಗ್ರಹಿಸಿದೆ. ಗುಲ್ ಅವರ ವಿರುದ್ದದ ಎಲ್ಲಾ ಪ್ರಕರಣಗಳನ್ನು ಕೈಬಿಡುವಂತೆ ಅದಿಕಾರಿಗಳಲ್ಲಿ ಪ್ರೆಸ್‌ ಕ್ಲಬ್‌ ಒತ್ತಾಯಿಸಿದೆ.

ಶ್ರೀನಗರದಲ್ಲಿ ಗುಂಡಿನ ಚಕಮಕಿಯಲ್ಲಿ ತಮ್ಮ ಸಂಬಂದಿಕರು ಸಾವನ್ನಪ್ಪಿದ ನಂತರ ಕುಟುಂಬವೊಂದು ಬಾರತ ವಿರೋದಿ ಗೋಶಣೆಗಳನ್ನು ಕೂಗಿತ್ತು. ಅದರ ವೀಡಿಯೊವನ್ನು ‘ಕಾಶ್ಮೀರ ವಾಲ್ಲಾ’ದಲ್ಲಿ ಉದ್ಯೋಗದಲ್ಲಿರುವ ಪತ್ರಕರ್‍ತ ಗುಲ್ ಪೋಸ್ಟ್‌ ಮಾಡಿದ್ದರು. ನಂತರ ಅವರನ್ನು ಬಂದಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ (ಜನವರಿ 3) ಬದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ‌ಹತ್ಯೆಯಾದ ವ್ಯಕ್ತಿಯು ಶಂಕಿತ ಲಶ್ಕರ್-ಎ-ತೊಯ್ಬಾದ ಉಗ್ರನೆಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ಹತ್ಯೆಯ ವಿರುದ್ದ ನಡೆದ ಪ್ರತಿಬಟನೆಯ ವಿಡಿಯೊವನ್ನು ಗುಲ್‌ ಪೋಸ್ಟ್‌ ಮಾಡಿದ್ದರು.

ಗುಲ್ ವಿರುದ್ದ ಬಾರತೀಯ ದಂಡ ಸಂಹಿತೆಯ ಸೆಕ್ಶನ್ 120ಬಿ (ಅಪರಾದದ ಪಿತೂರಿ), 153ಬಿ (ಆರೋಪಗಳು, ರಾಶ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಉಂಟುಮಾಡುವುದು), 505ಬಿ (ಸಾರ್ವಜನಿಕರಿಗೆ ಬಯ ಅತವಾ ಎಚ್ಚರಿಕೆ) ಅಡಿಯಲ್ಲಿ ಪ್ರಕರಣ ದಾಕಲಿಸಲಾಗಿದೆ.

ಕಾಶ್ಮೀರ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ, “ಗುಲ್ ಬಂದನದಿಂದ ವಿಚಲಿತವಾಗುವಂತಾಗಿದೆ. ಕಾಶ್ಮೀರದಲ್ಲಿ ಪತ್ರಿಕೋದ್ಯಮವನ್ನು ಅಪರಾದೀಕರಿಸುವ ಗುರಿಯನ್ನು ಈ ಬಂದನವು ಹೊಂದಿದೆ” ಎಂದು ಅಬಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಪತ್ರಕರ್‍ತರ ಮೇಲೆ ಪೊಲೀಸರಿಂದಾಗುತ್ತಿರುವ ಕಿರುಕುಳ, ಕಾನೂನು ಕ್ರಮಗಳ ಕುರಿತು ಪತ್ರಕರ್‍ತರು ಆತಂಕ ವ್ಯಕ್ತಪಡಿಸಿದ್ದಾರೆ. ಮಾದ್ಯಮದ ಪ್ರತಿನಿದಿಗಳಿಗೆ ಬೆದರಿಕೆ, ಸಮನ್ಸ್ ನೀಡಲಾಗುತ್ತಿದೆ ಎಂಬ ಆಕ್ಶೇಪಗಳು ಬಂದಿವೆ.

2019ರಲ್ಲಿ ಸಂವಿದಾನದ 370ನೇ ವಿದಿಯನ್ನು ಕೇಂದ್ರ ಸರ್ಕಾರ ರದ್ದುಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಕರ್‍ತರು ಹೆಚ್ಚಿನ ಬೆದರಿಕೆ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಶದಿಂದ ಗುಲ್ ಅವರು ಅನೇಕ ಸಂದರ್ಬಗಳಲ್ಲಿ ಪೊಲೀಸರ ಕ್ರಮಗಳನ್ನು ಎದುರಿಸಿದ್ದಾರೆ ಎಂದು ವರದಿಗಳಾಗಿವೆ.

2021ರ ಪೆಬ್ರವರಿ 9ರಂದು ದಿ ಕಾಶ್ಮೀರ್ ವಾಲಾಗೆ ಬರೆದ ಲೇಖನದ ಕಾರಣಕ್ಕಾಗಿ “ಗಲಬೆ, ಅತಿಕ್ರಮಣ ಮತ್ತು ಹಲ್ಲೆ” ಆರೋಪವನ್ನು ಗುಲ್‌ ಮೇಲೆ ಹೊರಿಸಲಾಗಿದೆ ಎಂದು ವರದಿಯಾಗಿದೆ. ತಹಸೀಲ್ದಾರ್ ಹಾಜಿನ್ ಗುಲಾಮ್ ಮೊಹಮ್ಮದ್ ಬಟ್ ಅವರು ತೆರವು ಕಾರ್ಯಾಚರಣೆ ನಡೆಸಿ ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಬಂಡಿಪೋರಾದ ಗ್ರಾಮಸ್ಥರು ಆರೋಪಿಸಿದ್ದರು. ಈ ವರದಿಯನ್ನು ಗುಲ್‌ ಮಾಡಿದ್ದರು.

ವರದಿ ಹಾಗೂ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗೆ ಸಂಬಂದಿಸಿದಂತೆ ವಿಚಾರಣೆಗಾಗಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪೊಲೀಸ್ ಟಾಣೆಗೆ ಗುಲ್ ಅವರನ್ನು ಕರೆಸಲಾಗಿತ್ತು.

ಮೌಂಟೇನ್ ಇಂಕ್ ಮ್ಯಾಗಜೀನ್‌ನಲ್ಲಿ ಪ್ರಕಟವಾದ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ 25 ವರ್ಷದ ವ್ಯಕ್ತಿಯ ಕುರಿತ್ತಾಗಿತ್ತು. ಇಮ್ತಿಯಾಜ್ ಅಹ್ಮದ್ ಕಕ್ರೂ ನಿರಪರಾದಿಯಾಗಿದ್ದು, ‘ನಕಲಿ ಎನ್ಕೌಂಟರ್’ನಲ್ಲಿ ಅವರನ್ನು ಪೊಲೀಸರು ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದನ್ನು ಗುಲ್‌ ವರದಿ ಮಾಡಿದ್ದರು.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...