Homeಮುಖಪುಟಜಮ್ಮುಕಾಶ್ಮೀರ: 4ಜಿ ಇಂಟರ್ನೆಟ್ ಸೇವೆ ಆರಂಭಕ್ಕೆ ಸುಪ್ರೀಂ ಶಿಫಾರಸ್ಸು

ಜಮ್ಮುಕಾಶ್ಮೀರ: 4ಜಿ ಇಂಟರ್ನೆಟ್ ಸೇವೆ ಆರಂಭಕ್ಕೆ ಸುಪ್ರೀಂ ಶಿಫಾರಸ್ಸು

- Advertisement -
- Advertisement -

ಸುಪ್ರೀಂಕೋರ್ಟ್ ನೇತೃತ್ವದ ವಿಶೇಷ ಸಮಿತಿ ಜಮ್ಮು ಕಾಶ್ಮೀರದಲ್ಲಿ ಅಧಿಕ ವೇಗದ 4ಜಿ ಇಂಟರ್ ನೆಟ್ ಸೌಲಭ್ಯವನ್ನು ನಿಗದಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಒದಗಿಸುವಂತೆ ಶಿಫಾರಸು ಮಾಡಿದೆ.

ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಬಳಿಕ ಜಮ್ಮು ಮತ್ತು ಕಾಶ್ಮೀರದ ತಲಾ ಒಂದು ಜಿಲ್ಲೆಯಲ್ಲಿ ಅಧಿಕ ವೇಗದ 4ಜಿ ಇಂಟರ್‌ನೆಟ್ ಸೌಲಭ್ಯವನ್ನು ಕಲ್ಪಿಸುವಂತೆ ಸುಪ್ರೀಂ ಸೂಚಿಸಿದೆ.

ಕಣಿವೆ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯು ಚೆನ್ನಾಗಿದ್ದು, ಇಂಟರ್‌ನೆಟ್ ಮೇಲೆ ವಿಧಿಸಿರುವ ನಿಷೇಧವನ್ನು ತೆರವುಗೊಳಿಸುವಂತಹ ವಾತಾವರಣ ಸೃಷ್ಟಿಯಾಗಿರುವ ಸಂಕೇತಗಳ ಕಂಡುಬಂದಿವೆ ಎಂದು ಸಮಿತಿ ಹೇಳಿದೆ.

ಇದೇ ವೇಳೆ ವಿಶೇಷ ಸಮಿತಿಯು ಏಳು ಶಿಫಾರಸ್ಸುಗಳನ್ನು ಮಾಡಿದ್ದು ಅವುಗಳು ಈ ಕೆಳಗಿನಂತಿವೆ.

  • ಭದ್ರತಾ ಸನ್ನಿವೇಶದ ಮೇಲಿನ ಪರಿಣಾಮವನ್ನು ನಿರ್ಣಯಿಸಲು ನಿರ್ದಿಷ್ಟ ಸೀಮಿತ ಪ್ರದೇಶಗಳಿಗೆ ಮಾಪನಾಂಕ ನಿರ್ಣಯದ ರೀತಿಯಲ್ಲಿ ಹೆಚ್ಚಿನ ವೇಗದ ಅಂತರ್ಜಾಲಕ್ಕೆ ಪ್ರವೇಶ ಒದಗಿಸಬಹುದು.
  • ಪ್ರಾಯೋಗಿಕ ಆಧಾರದ ಮೇಲೆ ಯಾವುದೇ ತೆರೆಯುವಿಕೆಯು ಅಂತರರಾಷ್ಟ್ರೀಯ ಗಡಿ / ನಿಯಂತ್ರಣ ರೇಖೆ (ಎಲ್‌ಒಸಿ) ಗೆ ಹೊಂದಿಕೊಂಡ ಯಾವುದೇ ಪ್ರದೇಶಗಳಲ್ಲಿ ಇರಬಾರದು.
  • ಈ ಪ್ರದೇಶವು ಭಯೋತ್ಪಾದಕ ಚಟುವಟಿಕೆಗಳ ಕಡಿಮೆ ತೀವ್ರತೆಯನ್ನು ಹೊಂದಿರಬೇಕು ಮತ್ತು ನೆರೆಯ ಪ್ರದೇಶಗಳ ಮೇಲಿನ ಪರಿಣಾಮಗಳ ಮೇಲೆ ಕನಿಷ್ಠ ಸೋರಿಕೆ ಹೊಂದಿರಬೇಕು.
  • ವಿಚಾರಣೆಯ ಪರಿಣಾಮವನ್ನು ರಾಜ್ಯ ಮಟ್ಟದ ಸಮಿತಿಯು ನಿಯತಕಾಲಿಕವಾಗಿ ನಿರ್ಣಯಿಸಬೇಕು ಆದರೆ ಕೆಲಸದ ದಿನಗಳನ್ನು ಒಮ್ಮೆಯಾದರೂ ನಿರ್ಣಯಿಸಬೇಕು
  • ವಿಚಾರಣೆಯ ಫಲಿತಾಂಶವನ್ನು ಕೇಂದ್ರ ಸಮಿತಿಯು ಎರಡು ತಿಂಗಳ ಅವಧಿಯ ನಂತರ ಅಥವಾ ಅಗತ್ಯವಿರುವ ಮೊದಲು ಪರಿಶೀಲಿಸುತ್ತದೆ.
  • ಜಮ್ಮು ಕಾಶ್ಮೀರ ವಿಭಾಗಗಳಲ್ಲಿ 2 ಜಿ ಯಿಂದ 4 ಜಿ ವರೆಗೆ ವಿಸ್ತರಿಸುವುದುದು ಪ್ರಸ್ತುತ ತಲಾ ಒಂದು ಜಿಲ್ಲೆಗೆ ಸೀಮಿತವಾಗಿರಬೇಕು.
  • ಆದ್ದರಿಂದ ಕೇಂದ್ರಾಡಳಿತಕ್ಕೆ ಒಳಪಟ್ಟಿರುವ ಎರಡೂ ಪ್ರದೇಶಗಳು ವ್ಯಾಪ್ತಿಗೆ ಬರುತ್ತವೆ. ಉಲ್ಬಣಗೊಳ್ಳಬಹುದಾದ ಬೆದರಿಕೆ ಗ್ರಹಿಕೆಯನ್ನು ಗಮನದಲ್ಲಿಟ್ಟುಕೊಂಡು, 4ಜಿ ಸೇವೆಯನ್ನು ಆಗಸ್ಟ್ 15 ನಂತರ ಜಾರಿಗೆ ಬರಲಿದೆ.

ಆರು ತಿಂಗಳಿಗೂ ಹೆಚ್ಚು ಕಾಲ ಎಲ್ಲಾ ರೀತಿಯ ಸಂಪರ್ಕಗಳನ್ನು ಕಡಿದುಕೊಂಡಿದ್ದ ಜಮ್ಮು ಕಾಶ್ಮೀರದಲ್ಲಿ ನಂತರ 2ಜಿ ಸೇವೆಯನ್ನು ಮಾತ್ರ ನೀಡಲಾಗಿತ್ತು. ಇದೀಗ ಕೊರೊನಾ ನಿಯಂತ್ರಣ ಮತ್ತು ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ 4ಜಿ ಸೇವೆಯನ್ನು ನೀಡಲು ವಿಶೇಷ ಸಮಿತಿ ಶಿಫಾರಸು ಮಾಡಿದೆ.


ಓದಿ: ಕಾಶ್ಮೀರದ ಕತ್ತಲೆಗೆ ಒಂದು ವರ್ಷ: ಸಾಧಿಸಿದ್ದಾದರೂ ಏನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...