Homeಮುಖಪುಟಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ ಎಂದ ಅಮಿತ್ ಶಾ; ಇಲ್ಲ ಎಂದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ ಎಂದ ಅಮಿತ್ ಶಾ; ಇಲ್ಲ ಎಂದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿಯನ್ನು ಸಂಪೂರ್ಣವಾಗಿ ಪುನಃಸ್ಥಾಪನೆಯಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶುಕ್ರವಾರದಂದು ಹೇಳಿದ್ದಾರೆ. ಸಂವಿಧಾನದ 370 ನೇ ವಿಧಿಯು ಭಯೋತ್ಪಾದನೆಯ ಬೀಜಗಳನ್ನು ಬಿತ್ತಿತ್ತು, ಆದರೆ ನರೇಂದ್ರ ಮೋದಿ ಸರ್ಕಾರವು ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕೊನೆಗೊಳಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ ಒಂದು ದಿನದ ನಂತರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ

“ಗೃಹ ಸಚಿವರ ಹೇಳಿಕೆಯ ಬಗ್ಗೆ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಇನ್ನೂ ಸಹಜತೆಯನ್ನು ಸಂಪೂರ್ಣವಾಗಿ ಪುನಃಸ್ಥಾಪನೆಯಾಗಿಲ್ಲ. ಇದು ಒಂದು ಪ್ರಕ್ರಿಯೆಯಾಗಿದ್ದು, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಮ್ಮು ಕಾಶ್ಮೀರದ ಹೆಸರನ್ನು “ಕಶ್ಯಪ್” ಎಂದು ಬದಲಾಯಿಸಲಾಗುತ್ತಿದೆ ಎಂಬ ವದಂತಿಗಳನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅಂತಹದ್ದೇನೂ ಇಲ್ಲ. ಕೆಲವು ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡಿತ್ತಾದರೂ, ನಂತರ ಅವರು ಅದನ್ನು ಸರಿಪಡಿಸಿದ್ದಾರೆ. ಅಂತಹ ಯಾವುದೇ ಪ್ರಸ್ತಾವನೆ ಅಸ್ತಿತ್ವದಲ್ಲಿಲ್ಲ ಮತ್ತು ಜಮ್ಮು ಕಾಶ್ಮೀರ ಸರ್ಕಾರದ ಒಪ್ಪಿಗೆಯಿಲ್ಲದೆ ಇದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

2024 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗಿನ ವಿವಿಧ ಎನ್‌ಕೌಂಟರ್‌ಗಳಲ್ಲಿ 45 ಪಾಕಿಸ್ತಾನಿಗಳು ಸೇರಿದಂತೆ ಕನಿಷ್ಠ 75 ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ವರದಿ ಯಾಗಿದೆ. ಕೊಲ್ಲಲ್ಪಟ್ಟ 75 ಜನರಲ್ಲಿ 45 ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅಲ್ಲಿನ ವಿವಿಧ ಸಂಘಟನೆಗಳಿಗೆ ಸೇರಿದವರು ಮತ್ತು ಉಳಿದವರು ಸ್ಥಳೀಯ ಬಂಡುಕೋರರು ಎಂದು ವರದಿ ಉಲ್ಲೇಖಿಸಿವೆ.

ಬಾರಾಮುಲ್ಲಾ, ಬಂಡಿಪೋರಾ ಮತ್ತು ಕುಪ್ವಾರದ ಮೂರು ಜಿಲ್ಲೆಗಳನ್ನು ಒಳಗೊಂಡಿರುವ ಉತ್ತರ ಕಾಶ್ಮೀರವು 2024 ರಲ್ಲಿ 17 ಎನ್‌ಕೌಂಟರ್‌ಗಳಿಗೆ ಸಾಕ್ಷಿಯಾಗಿದೆ. ಈ ಎನ್‌ಕೌಂಟರ್‌ಗಳಲ್ಲಿ, 28 ಬಂಡುಕೋರರು, ಐವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ

ಕಳೆದ ಕೆಲವು ವರ್ಷಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದು, ಜಮ್ಮು ಪ್ರದೇಶದಲ್ಲಿ 2024 ರಲ್ಲಿ ಭದ್ರತಾ ಪಡೆಗಳೊಂದಿಗೆ ವಿವಿಧ ಎನ್‌ಕೌಂಟರ್‌ಗಳಲ್ಲಿ 14 ಶಂಕಿತ ಉಗ್ರರು ಹತರಾಗಿದ್ದರು. ಜಮ್ಮು ಪ್ರದೇಶದ 10 ಜಿಲ್ಲೆಗಳಲ್ಲಿ 7 ರಲ್ಲಿ ಉಗ್ರಗಾಮಿ ದಾಳಿಗಳು ಮತ್ತು ಎನ್‌ಕೌಂಟರ್‌ಗಳು ನಡೆದಿವೆ.

2024 ರಲ್ಲಿ ನಡೆದ ಉಗ್ರಗಾಮಿ ಹಿಂಸಾಚಾರದಲ್ಲಿ ಒಟ್ಟು 28 ಭದ್ರತಾ ಸಿಬ್ಬಂದಿ ಹತರಾಗಿದ್ದರು ಮತ್ತು ಅವರಲ್ಲಿ 13 ಮಂದಿ ಜಮ್ಮು ಪ್ರದೇಶದಲ್ಲಿ ಎನ್‌ಕೌಂಟರ್ ಮತ್ತು ಉಗ್ರಗಾಮಿ ದಾಳಿಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂಓದಿ:  ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...