Homeಮುಖಪುಟಜಮ್ಮುಕಾಶ್ಮೀರ - ನೌಕರರ ಮೇಲ್ವಿಚಾರಣೆಗೆ ಟಾಸ್ಕ್‌ಫೋರ್ಸ್; ಸಿಪಿಎಂ ನಾಯಕ‌ ತರಿಗಾಮಿ ವಿರೋಧ

ಜಮ್ಮುಕಾಶ್ಮೀರ – ನೌಕರರ ಮೇಲ್ವಿಚಾರಣೆಗೆ ಟಾಸ್ಕ್‌ಫೋರ್ಸ್; ಸಿಪಿಎಂ ನಾಯಕ‌ ತರಿಗಾಮಿ ವಿರೋಧ

ಇದು ಜಾರಿಯಾದರೆ ಯಾವುದೇ ವಿಚಾರಣೆ ನಡೆಸದೆ, ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸರ್ಕಾರಿ ನೌಕರರನ್ನು ವಜಾಗೊಳಿಸುವುದು ಅಥವಾ ಇತರ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದಾಗಿದೆ

- Advertisement -
- Advertisement -

ನೌಕರರ ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸ್ಥಾಪಿಸುವ ಜಮ್ಮು ಕಾಶ್ಮೀರ ಸರ್ಕಾರದ ನಿರ್ಧಾರವನ್ನು ಸಿಪಿಐ (ಎಂ) ಮುಖಂಡ ಮೊಹಮ್ಮದ್ ಯೂಸುಫ್ ತರಿಗಾಮಿ ಗುರುವಾರ ವಿರೋಧಿಸಿದ್ದಾರೆ. ತರಿಗಾಮಿ ಅವರು ಸರ್ಕಾರದ ಈ ಕ್ರಮವನ್ನು “ನಿರಂಕುಶ ಮತ್ತು ಕಠಿಣ” ಎಂದು ಕರೆದಿದ್ದಾರೆ.

ಅವರು ದಿ ಹಿಂದೂ ಪತ್ರಿಕೆಗೆ ನೀಡಿರುವ ಹೇಳಿಕೆಯಲ್ಲಿ, “ಯಾವುದೇ ವಿಚಾರಣೆ ನಡೆಸದೆ, ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸರ್ಕಾರಿ ನೌಕರರನ್ನು ವಜಾಗೊಳಿಸುವುದು ಅಥವಾ ಇತರ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವುದು ನಿರಂಕುಶ ಮತ್ತು ಕಠಿಣ ನಿರ್ಧಾರವಾಗಿದೆ. ಇದಕ್ಕಾಗಿ ಜಮ್ಮು ಕಾಶ್ಮೀರ ಆಡಳಿತವು ಎಸ್‌ಟಿಎಫ್ ಅನ್ನು ರಚಿಸುವುದು ಲಕ್ಷಾಂತರ ನೌಕರರ ಹಿತಾಸಕ್ತಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

ಇಂತಹ ಕ್ರಮಗಳು ನೌಕರರ ಶ್ರೇಣಿಯಲ್ಲಿ ಕೋಪ ಮತ್ತು ಅಸಮಾಧಾನವನ್ನು ಹೆಚ್ಚಿಸುತ್ತದೆ ಎಂದು ಅವರು ಎಚ್ಚರಿಸಿದ್ದು, “ಆಡಳಿತವು ಈ ಆದೇಶವನ್ನು ಪರಿಶೀಲಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಸೇವಾ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದರೆ ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಸಾಕಷ್ಟು ನಿಬಂಧನೆಗಳಿವೆ. ಹೊಸ ಆದೇಶಗಳನ್ನು ಹೊರಡಿಸುವ ಅಗತ್ಯವಿಲ್ಲ. ಈ ಆದೇಶವು ಸರ್ಕಾರ ಮತ್ತು ಅಧಿಕಾರಿಗಳಿಗೆ ತಮ್ಮ ಅಧೀನ ಅಧಿಕಾರಿಗಳನ್ನು ನಿಗ್ರಹಿಸಲು ಒಂದು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಅನಿಶ್ಚಿತತೆಯ ಖಡ್ಗವನ್ನು ನೌಕರರ ತಲೆಯ ಮೇಲೆ ಇರಿಸಲಾಗಿದೆ, ಅದನ್ನು ಅವರ ಮೇಲಧಿಕಾರಿಗಳು ಸಹ ಬಳಸಿಕೊಳ್ಳಬಹುದು ಎಂದು ಮಾಜಿ ಶಾಸಕರೂ ಆಗಿರುವ ಯೂಸುಫ್ ತರಿಗಾಮಿ ಹೇಳಿದ್ದಾರೆ.

ಯಾವುದೆ ನೌಕರರು ಮೊದಲು ಈ ದೇಶದ ನಾಗರಿಕ ಮತ್ತು ಅವರು ಎಲ್ಲಾ ಸಾಂವಿಧಾನಿಕ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದರೆ. ಅವರ ಈ ಹಕ್ಕುಗಳನ್ನು ಕಾಪಾಡುವುದು ಈ ಸಂದರ್ಭದ ಅವಶ್ಯಕತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?: ಅಘೋಷಿತ ಲಾಕ್‌ಡೌನ್‌‌ಗೆ ಸಿದ್ದರಾಮಯ್ಯ ಕಿಡಿ

ವಿಡಿಯೊ ನೋಡಿ: ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ನಾವೇನು ಮಾಡಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...