Homeಮುಖಪುಟಜಮ್ಮು ಕಾಶ್ಮೀರ: ಕಥುವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ವ್ಯಕ್ತಿ ಭಾರತ್ ಜೋಡೋ ಯಾತ್ರೆಯಲ್ಲಿ!

ಜಮ್ಮು ಕಾಶ್ಮೀರ: ಕಥುವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ವ್ಯಕ್ತಿ ಭಾರತ್ ಜೋಡೋ ಯಾತ್ರೆಯಲ್ಲಿ!

ಇದನ್ನು ವಿರೋಧಿಸಿ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯು ಇಂದು ಜಮ್ಮುವನ್ನು ಪ್ರವೇಶಿಸುತ್ತಿದೆ. ಆದರೆ 2018ರ ಕಥವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಪಕ್ಷದೊಳಗೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

2014ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ಚೌಧರಿ ಲಾಲ್ ಸಿಂಗ್ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಜಮ್ಮು-ಕಾಶ್ಮೀರದ ಅರಣ್ಯ ಸಚಿವರಾಗಿದ್ದರು. 2018ರಲ್ಲಿ ದೇಶವನ್ನೆ ಬೆಚ್ಚಿ ಬೀಳಿಸಿದ ಕಥುವಾ ದೇವಾಸ್ಥಾನದೊಳಗೆ 8 ವರ್ಷದ ಮಗುವಿನ ಅತ್ಯಾಚಾರ – ಕೊಲೆಯ ಪ್ರಕರಣದಲ್ಲಿ ಈಗ ಅತ್ಯಾಚಾರ ಆರೋಪಿಗಳ ಪರ ಮೆರವಣಿಗೆ ನಡೆಸಿದ್ದ. ಅಲ್ಲದೆ ಸಂತ್ರಸ್ತರ ಪರ ವಕೀಲರಿಗೆ ಬೆದರಿಕೆ ಹಾಕಿದ್ದ ಆರೋಪವು ಅವರ ಮೇಲಿದೆ. ಆ ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ತೊರೆದು ಡೋಗ್ರಾ ಸ್ವಾಭಿಮಾನ್ ಸಂಘಟನೆ ಕಟ್ಟಿದ್ದಾರೆ. ಅವರೀಗ ಬಿಜೆಪಿಯ ಕಟು ಟೀಕಾಕಾರರಾಗಿದ್ದು, ತಮ್ಮ ಬೆಂಬಲಿಗರಿಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ.

ಈ ಕುರಿತು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕಥುವಾ ಪ್ರಕರಣದ ಕುರಿತು ಪ್ರಶ್ನೆಗಳು ಕೇಳಿಬಂದಾಗ, “2018 ರಲ್ಲಿ ತಾನು ಆರೋಪಿಗಳ ಪರವಾಗಿ ನಡೆಸಿದ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಗುವಿಗೆ ನ್ಯಾಯ ಸಿಗಬೇಕು, ಹಾಗಾಗಿ ಸಿಬಿಐ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಚೌಧರಿ ಲಾಲ್ ಸಿಂಗ್ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದು ದೃಢಪಡುತ್ತಲೇ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಅತ್ಯಾಚಾರಿಗಳನ್ನು ನಿರ್ಲಜ್ಜವಾಗಿ ಸಮರ್ಥಿಸುವ ಮೂಲಕ 2018 ರಲ್ಲಿ ಕಥುವಾ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಲಾಲ್ ಸಿಂಗ್ ಕಾರಣರಾಗಿದ್ದರು. ಹಾಗಾಗಿ ಬೇರೆ ದಾರಿಯಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದಾರೆ.

ಅತ್ಯಾಚಾರಿಗಳನ್ನು ರಕ್ಷಿಸಲು ಲಾಲ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಪ್ರದೇಶವನ್ನು ವಿಭಜಿಸಿದರು. ಆತನ ವಿಚಾರಗಳು ಭಾರತ್ ಜೋಡೋ ಯಾತ್ರೆಗೆ ಸೈದ್ಧಾಂತಿಕವಾಗಿ ವಿರುದ್ಧವಾಗಿವೆ. ಸೈದ್ಧಾಂತಿಕ ಆಧಾರದ ಮೇಲೆ, ಅಂತಹ ವ್ಯಕ್ತಿಯೊಂದಿಗೆ ನಾನು ಪಕ್ಷದ ವೇದಿಕೆಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸಹ ಭಾರತ್ ಜೋಡೋ ಯಾತ್ರೆಗೆ ಚೌಧರಿ ಲಾಲ್ ಸಿಂಗ್‌ಗೆ ಆಹ್ವಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮರು ಚಿಂತಿಸುವಂತೆ ಕಾಂಗ್ರೆಸ್‌ಗೆ ಸಲಹೆ ನೀಡಿರುವ ಅವರು, “ಭಾರತ್ ಜೋಡೋ ಯಾತ್ರೆಯ ಹೆಸರು ಹೇಳಿಕೊಂಡು ಅದನ್ನು ಹಾಳು ಮಾಡಲು ಯಾವುದೇ ನಾಯಕರಿಗೆ ಕಾಂಗ್ರೆಸ್ ಅವಕಾಶ ನೀಡಬಾರದು. ಕಥುವಾ ಪ್ರಕರಣದಲ್ಲಿ ಆತನ ಪಾತ್ರದ ಬಗ್ಗೆ ಎಲ್ಲಿರಿಗೂ ಗೊತ್ತಿದೆ” ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.

ಕಥವಾ ಪ್ರಕರಣ

2018ರ ಜನವರಿ 17ರಂದು ಪ್ರಮುಖ ಆರೋಪಿ ಸಂಜಿ ರಾಮ್ ಅವರ ನಿವಾಸದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ವಿರೂಪಗೊಂಡ ಶವ ಪತ್ತೆಯಾಗಿತ್ತು. ಕ್ರೂರ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ರಾಷ್ಟ್ರಾವ್ಯಾಪಿ ಪ್ರತಿಭಟನೆಗಳು ಜರುಗಿದವು. ಅಂದಿನ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರವು ಸಂತ್ರಸ್ತೆಯ ಕುಟುಂಬದ ಕೋರಿಕೆಯ ಮೇರೆಗೆ ಪ್ರಕರಣವನ್ನು ಜಮ್ಮುವಿನ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿತು.

ಘಟನಾ ಸ್ಥಳದಲ್ಲಿ ಸುಳ್ಳು ಪುರಾವೆಗಳನ್ನು ಸೃಷ್ಟಿಸುವ ಪ್ರಯತ್ನದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮೊದಲು ಪೊಲೀಸರು ಅಪ್ರಾಪ್ತ ಸಂತ್ರಸ್ತೆಯ ಬಟ್ಟೆಗಳನ್ನು ತೊಳೆದಿದ್ದಾರೆ ಎಂದು ಕ್ರೈಂ ಬ್ರಾಂಚ್ ತನ್ನ ತನಿಖೆಯಲ್ಲಿ ತಿಳಿಸಿದೆ.

“ಸ್ಥಳೀಯ ಅಂಗಡಿಯಿಂದ ಖರೀದಿಸಿದ ನಿದ್ರಾಜನಕಗಳ ಮೂಲಕ ಪ್ರಜ್ಞೆ ತಪ್ಪಿಸಿ ಬಾಲಕಿಯನ್ನು ರಸಾನಾದಲ್ಲಿನ ದೇವಸ್ಥಾನದಲ್ಲಿ ಕೆಲವು ದಿನಗಳ ಕಾಲ ಬಚ್ಚಿಟ್ಟು ಕ್ರೂರ ರೀತಿಯಲ್ಲಿ ಕತ್ತು ಹಿಸುಕಿ ಸಾಯಿಸಲಾಯಿತು” ಎಂದು ಅಪರಾಧ ವಿಭಾಗದ ಚಾರ್ಜ್‌ಶೀಟ್ ಬಹಿರಂಗಪಡಿಸಿದೆ. “ಆರೋಪಿಗಳು ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ, ಆದರೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಾಕ್ಷ್ಯವನ್ನು ನಾಶಪಡಿಸಿದ್ದಾರೆ” ಎಂದು 15 ಪುಟಗಳ ಆರೋಪಪಟ್ಟಿ ಹೇಳಿದೆ.

ಬಾಲಾಪರಾಧಿ ಸೇರಿದಂತೆ ಎಂಟು ಜನರ ವಿರುದ್ಧ ಚಾರ್ಜ್ ಶೀಟ್ಅನ್ನು ಕ್ರೈಂ ಬ್ರಾಂಚ್ ಸಲ್ಲಿಸಿದೆ. ಬಾಲಾಪರಾಧಿಗಳ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ. ಯಾಕೆಂದರೆ ಅವರ ವಯಸ್ಸನ್ನು ನಿರ್ಧರಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇನ್ನೂ ವಿಚಾರಣೆ ನಡೆಸಬೇಕಿದೆ.

ದೇವಾಲಯದೊಳಗೆ ಅಪ್ರಾಪ್ತ ಬಾಲಕಿಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ನಂತರ, 2018 ರಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಜಮ್ಮು ಮತ್ತು ಕಾಶ್ಮೀರದಿಂದ ಹೊರಗೆ ವರ್ಗಾಯಿಸಲು ಸೂಚಿಸಿತು. ಪಠಾಣ್‌ಕೋಟ್‌ನ ಸೆಷನ್ಸ್ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಪ್ರತಿದಿನ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

“ಐದು ವರ್ಷಗಳ ಶಿಕ್ಷೆಯನ್ನು ಪೂರೈಸುವ ಮೊದಲು ಅವರನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ನಾವು ಯಾವಾಗಲೂ ಒತ್ತಾಯಿಸುತ್ತೇವೆ” ಎಂದು ಸಂತ್ರಸ್ತ ಕುಟುಂಬ ಆಗ್ರಹಿಸಿದೆ.

ಈ ಜನರು (ಅಪರಾಧಿ ಪೊಲೀಸರು) ಈಗ ಹೊರಗಿದ್ದಾರೆ ಮತ್ತು ಅವರು ನಮಗೆ ಏನು ಬೇಕಾದರೂ ಮಾಡಬಹುದಾದ್ದರಿಂದ ನಾವು ಮತ್ತೆ ಬೆದರಿಕೆಯನ್ನು ಅನುಭವಿಸುತ್ತೇವೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಇದನ್ನೂ ಓದಿ ; ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...