Homeಮುಖಪುಟಜಮ್ಮು ಕಾಶ್ಮೀರ: ಕಥುವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ವ್ಯಕ್ತಿ ಭಾರತ್ ಜೋಡೋ ಯಾತ್ರೆಯಲ್ಲಿ!

ಜಮ್ಮು ಕಾಶ್ಮೀರ: ಕಥುವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ವ್ಯಕ್ತಿ ಭಾರತ್ ಜೋಡೋ ಯಾತ್ರೆಯಲ್ಲಿ!

ಇದನ್ನು ವಿರೋಧಿಸಿ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯು ಇಂದು ಜಮ್ಮುವನ್ನು ಪ್ರವೇಶಿಸುತ್ತಿದೆ. ಆದರೆ 2018ರ ಕಥವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಪಕ್ಷದೊಳಗೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

2014ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ಚೌಧರಿ ಲಾಲ್ ಸಿಂಗ್ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಜಮ್ಮು-ಕಾಶ್ಮೀರದ ಅರಣ್ಯ ಸಚಿವರಾಗಿದ್ದರು. 2018ರಲ್ಲಿ ದೇಶವನ್ನೆ ಬೆಚ್ಚಿ ಬೀಳಿಸಿದ ಕಥುವಾ ದೇವಾಸ್ಥಾನದೊಳಗೆ 8 ವರ್ಷದ ಮಗುವಿನ ಅತ್ಯಾಚಾರ – ಕೊಲೆಯ ಪ್ರಕರಣದಲ್ಲಿ ಈಗ ಅತ್ಯಾಚಾರ ಆರೋಪಿಗಳ ಪರ ಮೆರವಣಿಗೆ ನಡೆಸಿದ್ದ. ಅಲ್ಲದೆ ಸಂತ್ರಸ್ತರ ಪರ ವಕೀಲರಿಗೆ ಬೆದರಿಕೆ ಹಾಕಿದ್ದ ಆರೋಪವು ಅವರ ಮೇಲಿದೆ. ಆ ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ತೊರೆದು ಡೋಗ್ರಾ ಸ್ವಾಭಿಮಾನ್ ಸಂಘಟನೆ ಕಟ್ಟಿದ್ದಾರೆ. ಅವರೀಗ ಬಿಜೆಪಿಯ ಕಟು ಟೀಕಾಕಾರರಾಗಿದ್ದು, ತಮ್ಮ ಬೆಂಬಲಿಗರಿಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ.

ಈ ಕುರಿತು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕಥುವಾ ಪ್ರಕರಣದ ಕುರಿತು ಪ್ರಶ್ನೆಗಳು ಕೇಳಿಬಂದಾಗ, “2018 ರಲ್ಲಿ ತಾನು ಆರೋಪಿಗಳ ಪರವಾಗಿ ನಡೆಸಿದ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಗುವಿಗೆ ನ್ಯಾಯ ಸಿಗಬೇಕು, ಹಾಗಾಗಿ ಸಿಬಿಐ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಚೌಧರಿ ಲಾಲ್ ಸಿಂಗ್ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದು ದೃಢಪಡುತ್ತಲೇ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಅತ್ಯಾಚಾರಿಗಳನ್ನು ನಿರ್ಲಜ್ಜವಾಗಿ ಸಮರ್ಥಿಸುವ ಮೂಲಕ 2018 ರಲ್ಲಿ ಕಥುವಾ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಲಾಲ್ ಸಿಂಗ್ ಕಾರಣರಾಗಿದ್ದರು. ಹಾಗಾಗಿ ಬೇರೆ ದಾರಿಯಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದಾರೆ.

ಅತ್ಯಾಚಾರಿಗಳನ್ನು ರಕ್ಷಿಸಲು ಲಾಲ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಪ್ರದೇಶವನ್ನು ವಿಭಜಿಸಿದರು. ಆತನ ವಿಚಾರಗಳು ಭಾರತ್ ಜೋಡೋ ಯಾತ್ರೆಗೆ ಸೈದ್ಧಾಂತಿಕವಾಗಿ ವಿರುದ್ಧವಾಗಿವೆ. ಸೈದ್ಧಾಂತಿಕ ಆಧಾರದ ಮೇಲೆ, ಅಂತಹ ವ್ಯಕ್ತಿಯೊಂದಿಗೆ ನಾನು ಪಕ್ಷದ ವೇದಿಕೆಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸಹ ಭಾರತ್ ಜೋಡೋ ಯಾತ್ರೆಗೆ ಚೌಧರಿ ಲಾಲ್ ಸಿಂಗ್‌ಗೆ ಆಹ್ವಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮರು ಚಿಂತಿಸುವಂತೆ ಕಾಂಗ್ರೆಸ್‌ಗೆ ಸಲಹೆ ನೀಡಿರುವ ಅವರು, “ಭಾರತ್ ಜೋಡೋ ಯಾತ್ರೆಯ ಹೆಸರು ಹೇಳಿಕೊಂಡು ಅದನ್ನು ಹಾಳು ಮಾಡಲು ಯಾವುದೇ ನಾಯಕರಿಗೆ ಕಾಂಗ್ರೆಸ್ ಅವಕಾಶ ನೀಡಬಾರದು. ಕಥುವಾ ಪ್ರಕರಣದಲ್ಲಿ ಆತನ ಪಾತ್ರದ ಬಗ್ಗೆ ಎಲ್ಲಿರಿಗೂ ಗೊತ್ತಿದೆ” ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.

ಕಥವಾ ಪ್ರಕರಣ

2018ರ ಜನವರಿ 17ರಂದು ಪ್ರಮುಖ ಆರೋಪಿ ಸಂಜಿ ರಾಮ್ ಅವರ ನಿವಾಸದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ವಿರೂಪಗೊಂಡ ಶವ ಪತ್ತೆಯಾಗಿತ್ತು. ಕ್ರೂರ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ರಾಷ್ಟ್ರಾವ್ಯಾಪಿ ಪ್ರತಿಭಟನೆಗಳು ಜರುಗಿದವು. ಅಂದಿನ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರವು ಸಂತ್ರಸ್ತೆಯ ಕುಟುಂಬದ ಕೋರಿಕೆಯ ಮೇರೆಗೆ ಪ್ರಕರಣವನ್ನು ಜಮ್ಮುವಿನ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿತು.

ಘಟನಾ ಸ್ಥಳದಲ್ಲಿ ಸುಳ್ಳು ಪುರಾವೆಗಳನ್ನು ಸೃಷ್ಟಿಸುವ ಪ್ರಯತ್ನದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮೊದಲು ಪೊಲೀಸರು ಅಪ್ರಾಪ್ತ ಸಂತ್ರಸ್ತೆಯ ಬಟ್ಟೆಗಳನ್ನು ತೊಳೆದಿದ್ದಾರೆ ಎಂದು ಕ್ರೈಂ ಬ್ರಾಂಚ್ ತನ್ನ ತನಿಖೆಯಲ್ಲಿ ತಿಳಿಸಿದೆ.

“ಸ್ಥಳೀಯ ಅಂಗಡಿಯಿಂದ ಖರೀದಿಸಿದ ನಿದ್ರಾಜನಕಗಳ ಮೂಲಕ ಪ್ರಜ್ಞೆ ತಪ್ಪಿಸಿ ಬಾಲಕಿಯನ್ನು ರಸಾನಾದಲ್ಲಿನ ದೇವಸ್ಥಾನದಲ್ಲಿ ಕೆಲವು ದಿನಗಳ ಕಾಲ ಬಚ್ಚಿಟ್ಟು ಕ್ರೂರ ರೀತಿಯಲ್ಲಿ ಕತ್ತು ಹಿಸುಕಿ ಸಾಯಿಸಲಾಯಿತು” ಎಂದು ಅಪರಾಧ ವಿಭಾಗದ ಚಾರ್ಜ್‌ಶೀಟ್ ಬಹಿರಂಗಪಡಿಸಿದೆ. “ಆರೋಪಿಗಳು ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ, ಆದರೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಾಕ್ಷ್ಯವನ್ನು ನಾಶಪಡಿಸಿದ್ದಾರೆ” ಎಂದು 15 ಪುಟಗಳ ಆರೋಪಪಟ್ಟಿ ಹೇಳಿದೆ.

ಬಾಲಾಪರಾಧಿ ಸೇರಿದಂತೆ ಎಂಟು ಜನರ ವಿರುದ್ಧ ಚಾರ್ಜ್ ಶೀಟ್ಅನ್ನು ಕ್ರೈಂ ಬ್ರಾಂಚ್ ಸಲ್ಲಿಸಿದೆ. ಬಾಲಾಪರಾಧಿಗಳ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ. ಯಾಕೆಂದರೆ ಅವರ ವಯಸ್ಸನ್ನು ನಿರ್ಧರಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇನ್ನೂ ವಿಚಾರಣೆ ನಡೆಸಬೇಕಿದೆ.

ದೇವಾಲಯದೊಳಗೆ ಅಪ್ರಾಪ್ತ ಬಾಲಕಿಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ನಂತರ, 2018 ರಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಜಮ್ಮು ಮತ್ತು ಕಾಶ್ಮೀರದಿಂದ ಹೊರಗೆ ವರ್ಗಾಯಿಸಲು ಸೂಚಿಸಿತು. ಪಠಾಣ್‌ಕೋಟ್‌ನ ಸೆಷನ್ಸ್ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಪ್ರತಿದಿನ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

“ಐದು ವರ್ಷಗಳ ಶಿಕ್ಷೆಯನ್ನು ಪೂರೈಸುವ ಮೊದಲು ಅವರನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ನಾವು ಯಾವಾಗಲೂ ಒತ್ತಾಯಿಸುತ್ತೇವೆ” ಎಂದು ಸಂತ್ರಸ್ತ ಕುಟುಂಬ ಆಗ್ರಹಿಸಿದೆ.

ಈ ಜನರು (ಅಪರಾಧಿ ಪೊಲೀಸರು) ಈಗ ಹೊರಗಿದ್ದಾರೆ ಮತ್ತು ಅವರು ನಮಗೆ ಏನು ಬೇಕಾದರೂ ಮಾಡಬಹುದಾದ್ದರಿಂದ ನಾವು ಮತ್ತೆ ಬೆದರಿಕೆಯನ್ನು ಅನುಭವಿಸುತ್ತೇವೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಇದನ್ನೂ ಓದಿ ; ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...