Homeಮುಖಪುಟಜಮ್ಮು ಕಾಶ್ಮೀರ: ಕಥುವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ವ್ಯಕ್ತಿ ಭಾರತ್ ಜೋಡೋ ಯಾತ್ರೆಯಲ್ಲಿ!

ಜಮ್ಮು ಕಾಶ್ಮೀರ: ಕಥುವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ವ್ಯಕ್ತಿ ಭಾರತ್ ಜೋಡೋ ಯಾತ್ರೆಯಲ್ಲಿ!

ಇದನ್ನು ವಿರೋಧಿಸಿ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯು ಇಂದು ಜಮ್ಮುವನ್ನು ಪ್ರವೇಶಿಸುತ್ತಿದೆ. ಆದರೆ 2018ರ ಕಥವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಪಕ್ಷದೊಳಗೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

2014ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ಚೌಧರಿ ಲಾಲ್ ಸಿಂಗ್ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಜಮ್ಮು-ಕಾಶ್ಮೀರದ ಅರಣ್ಯ ಸಚಿವರಾಗಿದ್ದರು. 2018ರಲ್ಲಿ ದೇಶವನ್ನೆ ಬೆಚ್ಚಿ ಬೀಳಿಸಿದ ಕಥುವಾ ದೇವಾಸ್ಥಾನದೊಳಗೆ 8 ವರ್ಷದ ಮಗುವಿನ ಅತ್ಯಾಚಾರ – ಕೊಲೆಯ ಪ್ರಕರಣದಲ್ಲಿ ಈಗ ಅತ್ಯಾಚಾರ ಆರೋಪಿಗಳ ಪರ ಮೆರವಣಿಗೆ ನಡೆಸಿದ್ದ. ಅಲ್ಲದೆ ಸಂತ್ರಸ್ತರ ಪರ ವಕೀಲರಿಗೆ ಬೆದರಿಕೆ ಹಾಕಿದ್ದ ಆರೋಪವು ಅವರ ಮೇಲಿದೆ. ಆ ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ತೊರೆದು ಡೋಗ್ರಾ ಸ್ವಾಭಿಮಾನ್ ಸಂಘಟನೆ ಕಟ್ಟಿದ್ದಾರೆ. ಅವರೀಗ ಬಿಜೆಪಿಯ ಕಟು ಟೀಕಾಕಾರರಾಗಿದ್ದು, ತಮ್ಮ ಬೆಂಬಲಿಗರಿಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ.

ಈ ಕುರಿತು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕಥುವಾ ಪ್ರಕರಣದ ಕುರಿತು ಪ್ರಶ್ನೆಗಳು ಕೇಳಿಬಂದಾಗ, “2018 ರಲ್ಲಿ ತಾನು ಆರೋಪಿಗಳ ಪರವಾಗಿ ನಡೆಸಿದ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಗುವಿಗೆ ನ್ಯಾಯ ಸಿಗಬೇಕು, ಹಾಗಾಗಿ ಸಿಬಿಐ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಚೌಧರಿ ಲಾಲ್ ಸಿಂಗ್ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದು ದೃಢಪಡುತ್ತಲೇ ಕಥುವಾ ಸಂತ್ರಸ್ತರ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆಯೂ ಆಗಿರುವ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಅತ್ಯಾಚಾರಿಗಳನ್ನು ನಿರ್ಲಜ್ಜವಾಗಿ ಸಮರ್ಥಿಸುವ ಮೂಲಕ 2018 ರಲ್ಲಿ ಕಥುವಾ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಲಾಲ್ ಸಿಂಗ್ ಕಾರಣರಾಗಿದ್ದರು. ಹಾಗಾಗಿ ಬೇರೆ ದಾರಿಯಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದಾರೆ.

ಅತ್ಯಾಚಾರಿಗಳನ್ನು ರಕ್ಷಿಸಲು ಲಾಲ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಪ್ರದೇಶವನ್ನು ವಿಭಜಿಸಿದರು. ಆತನ ವಿಚಾರಗಳು ಭಾರತ್ ಜೋಡೋ ಯಾತ್ರೆಗೆ ಸೈದ್ಧಾಂತಿಕವಾಗಿ ವಿರುದ್ಧವಾಗಿವೆ. ಸೈದ್ಧಾಂತಿಕ ಆಧಾರದ ಮೇಲೆ, ಅಂತಹ ವ್ಯಕ್ತಿಯೊಂದಿಗೆ ನಾನು ಪಕ್ಷದ ವೇದಿಕೆಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸಹ ಭಾರತ್ ಜೋಡೋ ಯಾತ್ರೆಗೆ ಚೌಧರಿ ಲಾಲ್ ಸಿಂಗ್‌ಗೆ ಆಹ್ವಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮರು ಚಿಂತಿಸುವಂತೆ ಕಾಂಗ್ರೆಸ್‌ಗೆ ಸಲಹೆ ನೀಡಿರುವ ಅವರು, “ಭಾರತ್ ಜೋಡೋ ಯಾತ್ರೆಯ ಹೆಸರು ಹೇಳಿಕೊಂಡು ಅದನ್ನು ಹಾಳು ಮಾಡಲು ಯಾವುದೇ ನಾಯಕರಿಗೆ ಕಾಂಗ್ರೆಸ್ ಅವಕಾಶ ನೀಡಬಾರದು. ಕಥುವಾ ಪ್ರಕರಣದಲ್ಲಿ ಆತನ ಪಾತ್ರದ ಬಗ್ಗೆ ಎಲ್ಲಿರಿಗೂ ಗೊತ್ತಿದೆ” ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.

ಕಥವಾ ಪ್ರಕರಣ

2018ರ ಜನವರಿ 17ರಂದು ಪ್ರಮುಖ ಆರೋಪಿ ಸಂಜಿ ರಾಮ್ ಅವರ ನಿವಾಸದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ವಿರೂಪಗೊಂಡ ಶವ ಪತ್ತೆಯಾಗಿತ್ತು. ಕ್ರೂರ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ರಾಷ್ಟ್ರಾವ್ಯಾಪಿ ಪ್ರತಿಭಟನೆಗಳು ಜರುಗಿದವು. ಅಂದಿನ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರವು ಸಂತ್ರಸ್ತೆಯ ಕುಟುಂಬದ ಕೋರಿಕೆಯ ಮೇರೆಗೆ ಪ್ರಕರಣವನ್ನು ಜಮ್ಮುವಿನ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿತು.

ಘಟನಾ ಸ್ಥಳದಲ್ಲಿ ಸುಳ್ಳು ಪುರಾವೆಗಳನ್ನು ಸೃಷ್ಟಿಸುವ ಪ್ರಯತ್ನದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮೊದಲು ಪೊಲೀಸರು ಅಪ್ರಾಪ್ತ ಸಂತ್ರಸ್ತೆಯ ಬಟ್ಟೆಗಳನ್ನು ತೊಳೆದಿದ್ದಾರೆ ಎಂದು ಕ್ರೈಂ ಬ್ರಾಂಚ್ ತನ್ನ ತನಿಖೆಯಲ್ಲಿ ತಿಳಿಸಿದೆ.

“ಸ್ಥಳೀಯ ಅಂಗಡಿಯಿಂದ ಖರೀದಿಸಿದ ನಿದ್ರಾಜನಕಗಳ ಮೂಲಕ ಪ್ರಜ್ಞೆ ತಪ್ಪಿಸಿ ಬಾಲಕಿಯನ್ನು ರಸಾನಾದಲ್ಲಿನ ದೇವಸ್ಥಾನದಲ್ಲಿ ಕೆಲವು ದಿನಗಳ ಕಾಲ ಬಚ್ಚಿಟ್ಟು ಕ್ರೂರ ರೀತಿಯಲ್ಲಿ ಕತ್ತು ಹಿಸುಕಿ ಸಾಯಿಸಲಾಯಿತು” ಎಂದು ಅಪರಾಧ ವಿಭಾಗದ ಚಾರ್ಜ್‌ಶೀಟ್ ಬಹಿರಂಗಪಡಿಸಿದೆ. “ಆರೋಪಿಗಳು ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ, ಆದರೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಾಕ್ಷ್ಯವನ್ನು ನಾಶಪಡಿಸಿದ್ದಾರೆ” ಎಂದು 15 ಪುಟಗಳ ಆರೋಪಪಟ್ಟಿ ಹೇಳಿದೆ.

ಬಾಲಾಪರಾಧಿ ಸೇರಿದಂತೆ ಎಂಟು ಜನರ ವಿರುದ್ಧ ಚಾರ್ಜ್ ಶೀಟ್ಅನ್ನು ಕ್ರೈಂ ಬ್ರಾಂಚ್ ಸಲ್ಲಿಸಿದೆ. ಬಾಲಾಪರಾಧಿಗಳ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ. ಯಾಕೆಂದರೆ ಅವರ ವಯಸ್ಸನ್ನು ನಿರ್ಧರಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇನ್ನೂ ವಿಚಾರಣೆ ನಡೆಸಬೇಕಿದೆ.

ದೇವಾಲಯದೊಳಗೆ ಅಪ್ರಾಪ್ತ ಬಾಲಕಿಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ನಂತರ, 2018 ರಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಜಮ್ಮು ಮತ್ತು ಕಾಶ್ಮೀರದಿಂದ ಹೊರಗೆ ವರ್ಗಾಯಿಸಲು ಸೂಚಿಸಿತು. ಪಠಾಣ್‌ಕೋಟ್‌ನ ಸೆಷನ್ಸ್ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಪ್ರತಿದಿನ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

“ಐದು ವರ್ಷಗಳ ಶಿಕ್ಷೆಯನ್ನು ಪೂರೈಸುವ ಮೊದಲು ಅವರನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ನಾವು ಯಾವಾಗಲೂ ಒತ್ತಾಯಿಸುತ್ತೇವೆ” ಎಂದು ಸಂತ್ರಸ್ತ ಕುಟುಂಬ ಆಗ್ರಹಿಸಿದೆ.

ಈ ಜನರು (ಅಪರಾಧಿ ಪೊಲೀಸರು) ಈಗ ಹೊರಗಿದ್ದಾರೆ ಮತ್ತು ಅವರು ನಮಗೆ ಏನು ಬೇಕಾದರೂ ಮಾಡಬಹುದಾದ್ದರಿಂದ ನಾವು ಮತ್ತೆ ಬೆದರಿಕೆಯನ್ನು ಅನುಭವಿಸುತ್ತೇವೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಇದನ್ನೂ ಓದಿ ; ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...