Homeಮುಖಪುಟಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು 2019 ರಿಂದ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ)ಯ ಅಡಿಯಲ್ಲಿ 2,300 ಕ್ಕೂ ಹೆಚ್ಚು ಜನರ ಮೇಲೆ 1,200 ಪ್ರಕರಣಗಳನ್ನು ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ 3 ವರ್ಷಗಳಲ್ಲಿ ಯುಎಪಿಎ ಅಡಿಯಲ್ಲಿ ಸುಮಾರು 2,364 ಜನರನ್ನು ಬಂಧಿಸಲಾಗಿದೆ. 2019 ರಲ್ಲಿ 918 ಜನರ ಮೇಲೆ 437 ಪ್ರಕರಣಗಳು ದಾಖಲಾಗಿತ್ತು. 2020 ರಲ್ಲಿ 957 ಜನರ ಮೇಲೆ 557 ಪ್ರಕರಣಗಳು ಮತ್ತು 2021 ರಲ್ಲಿ 495 ಜನರ ಮೇಲೆ 275 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಪೈಕಿ 1,100 ಜನರು ಇನ್ನೂ ಬಂಧನದಲ್ಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಕಲಿ ಭಯೋತ್ಪಾದಕ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

945 ಜನರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ (ಪಿಎಸ್‌ಎ) ಪ್ರಕರಣ ದಾಖಲಿಸಲಾಗಿದೆ, ಅವರಲ್ಲಿ ಸುಮಾರು 30% ಜನರು ಇನ್ನೂ ಬಂಧನದಲ್ಲಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 30 ದಿನಗಳಲ್ಲಿ ದಾಖಲಾದ ಮೊದಲ 290 ಜನರ ಪೈಕಿ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರು ಸೇರಿದ್ದಾರೆ.

ಪಿಎಸ್ಎ ಅಡಿಯಲ್ಲಿ 2019 ರಲ್ಲಿ ಸುಮಾರು 700, 2020 ರಲ್ಲಿ 160 ಮತ್ತು ಈ ವರ್ಷದ 7 ತಿಂಗಳಲ್ಲಿ 95 ಜನರನ್ನು ಬಂಧಿಸಲಾಗಿದೆ.

“ರಾಜ್ಯದ ಭದ್ರತಾ ಸನ್ನಿವೇಶದಲ್ಲಿ ಯಾವುದೆ ಬದಲಾವಣೆ ಇಲ್ಲದಿರುವಿಕೆಯ ಕಠೋರ ಜ್ಞಾಪನೆ ಇದು” ಎಂದು ಸಜಾದ್ ಲೋನ್ ನೇತೃತ್ವದ ಪೀಪಲ್ಸ್ ಕಾನ್ಫರೆನ್ಸ್‌‌ ಹೇಳಿದೆ. ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಎಂದು ಒಕ್ಕೂಟ ಸರ್ಕಾರದ ಪ್ರತಿಪಾದನೆಗೆ ಈ ಅಂಕಿ ಅಂಶವು ವಿರುದ್ದವಾಗಿದೆ ಎಂದು ಪಕ್ಷ ಹೇಳಿದೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನ್ಯಾಷನಲ್ ಕಾನ್ಫರೆನ್ಸ್ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಮಾತನಾಡಿ, ಕೈದಿಗಳನ್ನು ರಾಜ್ಯದ ಹೊರಗೆ ಸ್ಥಳಾಂತರಿಸಲು ಆಡಳಿತವು ಕನಿಷ್ಟಪಕ್ಷ ಪರಿಗಣಿಸಬೇಕು, ಇದರಿಂದ ಅವರು ತಮ್ಮ ಕುಟುಂಬಗಳನ್ನು ಭೇಟಿ ಮಾಡಬಹುದು ಎಂದು ಹೇಳಿದ್ದಾರೆ.

2020 ರಲ್ಲಿ ಪಿಎಎಸ್‌ಎ ಪ್ರಕರಣಗಳ ಸಂಖ್ಯೆ 2020 ರಲ್ಲಿ ಕಡಿಮೆಯಾಗಿದ್ದು, ಯುಎಪಿಎ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕಾನೂನು ತಜ್ಞರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಪಿಎಎಸ್‌ಎಗಿಂತಲೂ ಹೆಚ್ಚು ಕಠಿಣವಾಗಿರುವ ಯುಎಪಿಎ ಅಡಿಯಲ್ಲಿ ಹೆಚ್ಚಿನ ಜನರ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಪ್ರಯತ್ನಿಸುವುದರಿಂದ ಈ ಬದಲಾವಣೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯುಎಪಿಎ ಕಾಯ್ದೆಯು ಜನರನ್ನು ಹೆಚ್ಚು ಕಾಲ ಕಸ್ಟಡಿಯಲ್ಲಿಡಲು ಪೊಲೀಸರಿಗೆ ಅನುವು ಮಾಡಿಕೊಡುತ್ತದೆ.

ಜೂನ್‌‌ 24 ರಂದು ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಯುಎಪಿಎ ಮತ್ತು ಪಿಎಸ್ಎ ಅಡಿಯಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕೋರಿದ್ದರು.

ಇದನ್ನೂ ಓದಿ: ಜಮ್ಮುಕಾಶ್ಮೀರ – ನೌಕರರ ಮೇಲ್ವಿಚಾರಣೆಗೆ ಟಾಸ್ಕ್‌ಫೋರ್ಸ್; ಸಿಪಿಎಂ ನಾಯಕ‌ ತರಿಗಾಮಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...