Homeಮುಖಪುಟಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು 2019 ರಿಂದ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ)ಯ ಅಡಿಯಲ್ಲಿ 2,300 ಕ್ಕೂ ಹೆಚ್ಚು ಜನರ ಮೇಲೆ 1,200 ಪ್ರಕರಣಗಳನ್ನು ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ 3 ವರ್ಷಗಳಲ್ಲಿ ಯುಎಪಿಎ ಅಡಿಯಲ್ಲಿ ಸುಮಾರು 2,364 ಜನರನ್ನು ಬಂಧಿಸಲಾಗಿದೆ. 2019 ರಲ್ಲಿ 918 ಜನರ ಮೇಲೆ 437 ಪ್ರಕರಣಗಳು ದಾಖಲಾಗಿತ್ತು. 2020 ರಲ್ಲಿ 957 ಜನರ ಮೇಲೆ 557 ಪ್ರಕರಣಗಳು ಮತ್ತು 2021 ರಲ್ಲಿ 495 ಜನರ ಮೇಲೆ 275 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಪೈಕಿ 1,100 ಜನರು ಇನ್ನೂ ಬಂಧನದಲ್ಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಕಲಿ ಭಯೋತ್ಪಾದಕ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

945 ಜನರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ (ಪಿಎಸ್‌ಎ) ಪ್ರಕರಣ ದಾಖಲಿಸಲಾಗಿದೆ, ಅವರಲ್ಲಿ ಸುಮಾರು 30% ಜನರು ಇನ್ನೂ ಬಂಧನದಲ್ಲಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 30 ದಿನಗಳಲ್ಲಿ ದಾಖಲಾದ ಮೊದಲ 290 ಜನರ ಪೈಕಿ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರು ಸೇರಿದ್ದಾರೆ.

ಪಿಎಸ್ಎ ಅಡಿಯಲ್ಲಿ 2019 ರಲ್ಲಿ ಸುಮಾರು 700, 2020 ರಲ್ಲಿ 160 ಮತ್ತು ಈ ವರ್ಷದ 7 ತಿಂಗಳಲ್ಲಿ 95 ಜನರನ್ನು ಬಂಧಿಸಲಾಗಿದೆ.

“ರಾಜ್ಯದ ಭದ್ರತಾ ಸನ್ನಿವೇಶದಲ್ಲಿ ಯಾವುದೆ ಬದಲಾವಣೆ ಇಲ್ಲದಿರುವಿಕೆಯ ಕಠೋರ ಜ್ಞಾಪನೆ ಇದು” ಎಂದು ಸಜಾದ್ ಲೋನ್ ನೇತೃತ್ವದ ಪೀಪಲ್ಸ್ ಕಾನ್ಫರೆನ್ಸ್‌‌ ಹೇಳಿದೆ. ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಎಂದು ಒಕ್ಕೂಟ ಸರ್ಕಾರದ ಪ್ರತಿಪಾದನೆಗೆ ಈ ಅಂಕಿ ಅಂಶವು ವಿರುದ್ದವಾಗಿದೆ ಎಂದು ಪಕ್ಷ ಹೇಳಿದೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನ್ಯಾಷನಲ್ ಕಾನ್ಫರೆನ್ಸ್ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಮಾತನಾಡಿ, ಕೈದಿಗಳನ್ನು ರಾಜ್ಯದ ಹೊರಗೆ ಸ್ಥಳಾಂತರಿಸಲು ಆಡಳಿತವು ಕನಿಷ್ಟಪಕ್ಷ ಪರಿಗಣಿಸಬೇಕು, ಇದರಿಂದ ಅವರು ತಮ್ಮ ಕುಟುಂಬಗಳನ್ನು ಭೇಟಿ ಮಾಡಬಹುದು ಎಂದು ಹೇಳಿದ್ದಾರೆ.

2020 ರಲ್ಲಿ ಪಿಎಎಸ್‌ಎ ಪ್ರಕರಣಗಳ ಸಂಖ್ಯೆ 2020 ರಲ್ಲಿ ಕಡಿಮೆಯಾಗಿದ್ದು, ಯುಎಪಿಎ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕಾನೂನು ತಜ್ಞರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಪಿಎಎಸ್‌ಎಗಿಂತಲೂ ಹೆಚ್ಚು ಕಠಿಣವಾಗಿರುವ ಯುಎಪಿಎ ಅಡಿಯಲ್ಲಿ ಹೆಚ್ಚಿನ ಜನರ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಪ್ರಯತ್ನಿಸುವುದರಿಂದ ಈ ಬದಲಾವಣೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯುಎಪಿಎ ಕಾಯ್ದೆಯು ಜನರನ್ನು ಹೆಚ್ಚು ಕಾಲ ಕಸ್ಟಡಿಯಲ್ಲಿಡಲು ಪೊಲೀಸರಿಗೆ ಅನುವು ಮಾಡಿಕೊಡುತ್ತದೆ.

ಜೂನ್‌‌ 24 ರಂದು ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಯುಎಪಿಎ ಮತ್ತು ಪಿಎಸ್ಎ ಅಡಿಯಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕೋರಿದ್ದರು.

ಇದನ್ನೂ ಓದಿ: ಜಮ್ಮುಕಾಶ್ಮೀರ – ನೌಕರರ ಮೇಲ್ವಿಚಾರಣೆಗೆ ಟಾಸ್ಕ್‌ಫೋರ್ಸ್; ಸಿಪಿಎಂ ನಾಯಕ‌ ತರಿಗಾಮಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...