Homeಮುಖಪುಟಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು 2019 ರಿಂದ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ)ಯ ಅಡಿಯಲ್ಲಿ 2,300 ಕ್ಕೂ ಹೆಚ್ಚು ಜನರ ಮೇಲೆ 1,200 ಪ್ರಕರಣಗಳನ್ನು ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ 3 ವರ್ಷಗಳಲ್ಲಿ ಯುಎಪಿಎ ಅಡಿಯಲ್ಲಿ ಸುಮಾರು 2,364 ಜನರನ್ನು ಬಂಧಿಸಲಾಗಿದೆ. 2019 ರಲ್ಲಿ 918 ಜನರ ಮೇಲೆ 437 ಪ್ರಕರಣಗಳು ದಾಖಲಾಗಿತ್ತು. 2020 ರಲ್ಲಿ 957 ಜನರ ಮೇಲೆ 557 ಪ್ರಕರಣಗಳು ಮತ್ತು 2021 ರಲ್ಲಿ 495 ಜನರ ಮೇಲೆ 275 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಪೈಕಿ 1,100 ಜನರು ಇನ್ನೂ ಬಂಧನದಲ್ಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಕಲಿ ಭಯೋತ್ಪಾದಕ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

945 ಜನರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ (ಪಿಎಸ್‌ಎ) ಪ್ರಕರಣ ದಾಖಲಿಸಲಾಗಿದೆ, ಅವರಲ್ಲಿ ಸುಮಾರು 30% ಜನರು ಇನ್ನೂ ಬಂಧನದಲ್ಲಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 30 ದಿನಗಳಲ್ಲಿ ದಾಖಲಾದ ಮೊದಲ 290 ಜನರ ಪೈಕಿ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರು ಸೇರಿದ್ದಾರೆ.

ಪಿಎಸ್ಎ ಅಡಿಯಲ್ಲಿ 2019 ರಲ್ಲಿ ಸುಮಾರು 700, 2020 ರಲ್ಲಿ 160 ಮತ್ತು ಈ ವರ್ಷದ 7 ತಿಂಗಳಲ್ಲಿ 95 ಜನರನ್ನು ಬಂಧಿಸಲಾಗಿದೆ.

“ರಾಜ್ಯದ ಭದ್ರತಾ ಸನ್ನಿವೇಶದಲ್ಲಿ ಯಾವುದೆ ಬದಲಾವಣೆ ಇಲ್ಲದಿರುವಿಕೆಯ ಕಠೋರ ಜ್ಞಾಪನೆ ಇದು” ಎಂದು ಸಜಾದ್ ಲೋನ್ ನೇತೃತ್ವದ ಪೀಪಲ್ಸ್ ಕಾನ್ಫರೆನ್ಸ್‌‌ ಹೇಳಿದೆ. ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಎಂದು ಒಕ್ಕೂಟ ಸರ್ಕಾರದ ಪ್ರತಿಪಾದನೆಗೆ ಈ ಅಂಕಿ ಅಂಶವು ವಿರುದ್ದವಾಗಿದೆ ಎಂದು ಪಕ್ಷ ಹೇಳಿದೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನ್ಯಾಷನಲ್ ಕಾನ್ಫರೆನ್ಸ್ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಮಾತನಾಡಿ, ಕೈದಿಗಳನ್ನು ರಾಜ್ಯದ ಹೊರಗೆ ಸ್ಥಳಾಂತರಿಸಲು ಆಡಳಿತವು ಕನಿಷ್ಟಪಕ್ಷ ಪರಿಗಣಿಸಬೇಕು, ಇದರಿಂದ ಅವರು ತಮ್ಮ ಕುಟುಂಬಗಳನ್ನು ಭೇಟಿ ಮಾಡಬಹುದು ಎಂದು ಹೇಳಿದ್ದಾರೆ.

2020 ರಲ್ಲಿ ಪಿಎಎಸ್‌ಎ ಪ್ರಕರಣಗಳ ಸಂಖ್ಯೆ 2020 ರಲ್ಲಿ ಕಡಿಮೆಯಾಗಿದ್ದು, ಯುಎಪಿಎ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕಾನೂನು ತಜ್ಞರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಪಿಎಎಸ್‌ಎಗಿಂತಲೂ ಹೆಚ್ಚು ಕಠಿಣವಾಗಿರುವ ಯುಎಪಿಎ ಅಡಿಯಲ್ಲಿ ಹೆಚ್ಚಿನ ಜನರ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಪ್ರಯತ್ನಿಸುವುದರಿಂದ ಈ ಬದಲಾವಣೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯುಎಪಿಎ ಕಾಯ್ದೆಯು ಜನರನ್ನು ಹೆಚ್ಚು ಕಾಲ ಕಸ್ಟಡಿಯಲ್ಲಿಡಲು ಪೊಲೀಸರಿಗೆ ಅನುವು ಮಾಡಿಕೊಡುತ್ತದೆ.

ಜೂನ್‌‌ 24 ರಂದು ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಯುಎಪಿಎ ಮತ್ತು ಪಿಎಸ್ಎ ಅಡಿಯಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕೋರಿದ್ದರು.

ಇದನ್ನೂ ಓದಿ: ಜಮ್ಮುಕಾಶ್ಮೀರ – ನೌಕರರ ಮೇಲ್ವಿಚಾರಣೆಗೆ ಟಾಸ್ಕ್‌ಫೋರ್ಸ್; ಸಿಪಿಎಂ ನಾಯಕ‌ ತರಿಗಾಮಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...