Homeಮುಖಪುಟಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು 2019 ರಿಂದ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ)ಯ ಅಡಿಯಲ್ಲಿ 2,300 ಕ್ಕೂ ಹೆಚ್ಚು ಜನರ ಮೇಲೆ 1,200 ಪ್ರಕರಣಗಳನ್ನು ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ 3 ವರ್ಷಗಳಲ್ಲಿ ಯುಎಪಿಎ ಅಡಿಯಲ್ಲಿ ಸುಮಾರು 2,364 ಜನರನ್ನು ಬಂಧಿಸಲಾಗಿದೆ. 2019 ರಲ್ಲಿ 918 ಜನರ ಮೇಲೆ 437 ಪ್ರಕರಣಗಳು ದಾಖಲಾಗಿತ್ತು. 2020 ರಲ್ಲಿ 957 ಜನರ ಮೇಲೆ 557 ಪ್ರಕರಣಗಳು ಮತ್ತು 2021 ರಲ್ಲಿ 495 ಜನರ ಮೇಲೆ 275 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಪೈಕಿ 1,100 ಜನರು ಇನ್ನೂ ಬಂಧನದಲ್ಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಕಲಿ ಭಯೋತ್ಪಾದಕ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

945 ಜನರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ (ಪಿಎಸ್‌ಎ) ಪ್ರಕರಣ ದಾಖಲಿಸಲಾಗಿದೆ, ಅವರಲ್ಲಿ ಸುಮಾರು 30% ಜನರು ಇನ್ನೂ ಬಂಧನದಲ್ಲಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 30 ದಿನಗಳಲ್ಲಿ ದಾಖಲಾದ ಮೊದಲ 290 ಜನರ ಪೈಕಿ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರು ಸೇರಿದ್ದಾರೆ.

ಪಿಎಸ್ಎ ಅಡಿಯಲ್ಲಿ 2019 ರಲ್ಲಿ ಸುಮಾರು 700, 2020 ರಲ್ಲಿ 160 ಮತ್ತು ಈ ವರ್ಷದ 7 ತಿಂಗಳಲ್ಲಿ 95 ಜನರನ್ನು ಬಂಧಿಸಲಾಗಿದೆ.

“ರಾಜ್ಯದ ಭದ್ರತಾ ಸನ್ನಿವೇಶದಲ್ಲಿ ಯಾವುದೆ ಬದಲಾವಣೆ ಇಲ್ಲದಿರುವಿಕೆಯ ಕಠೋರ ಜ್ಞಾಪನೆ ಇದು” ಎಂದು ಸಜಾದ್ ಲೋನ್ ನೇತೃತ್ವದ ಪೀಪಲ್ಸ್ ಕಾನ್ಫರೆನ್ಸ್‌‌ ಹೇಳಿದೆ. ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಎಂದು ಒಕ್ಕೂಟ ಸರ್ಕಾರದ ಪ್ರತಿಪಾದನೆಗೆ ಈ ಅಂಕಿ ಅಂಶವು ವಿರುದ್ದವಾಗಿದೆ ಎಂದು ಪಕ್ಷ ಹೇಳಿದೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನ್ಯಾಷನಲ್ ಕಾನ್ಫರೆನ್ಸ್ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಮಾತನಾಡಿ, ಕೈದಿಗಳನ್ನು ರಾಜ್ಯದ ಹೊರಗೆ ಸ್ಥಳಾಂತರಿಸಲು ಆಡಳಿತವು ಕನಿಷ್ಟಪಕ್ಷ ಪರಿಗಣಿಸಬೇಕು, ಇದರಿಂದ ಅವರು ತಮ್ಮ ಕುಟುಂಬಗಳನ್ನು ಭೇಟಿ ಮಾಡಬಹುದು ಎಂದು ಹೇಳಿದ್ದಾರೆ.

2020 ರಲ್ಲಿ ಪಿಎಎಸ್‌ಎ ಪ್ರಕರಣಗಳ ಸಂಖ್ಯೆ 2020 ರಲ್ಲಿ ಕಡಿಮೆಯಾಗಿದ್ದು, ಯುಎಪಿಎ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕಾನೂನು ತಜ್ಞರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಪಿಎಎಸ್‌ಎಗಿಂತಲೂ ಹೆಚ್ಚು ಕಠಿಣವಾಗಿರುವ ಯುಎಪಿಎ ಅಡಿಯಲ್ಲಿ ಹೆಚ್ಚಿನ ಜನರ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಪ್ರಯತ್ನಿಸುವುದರಿಂದ ಈ ಬದಲಾವಣೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯುಎಪಿಎ ಕಾಯ್ದೆಯು ಜನರನ್ನು ಹೆಚ್ಚು ಕಾಲ ಕಸ್ಟಡಿಯಲ್ಲಿಡಲು ಪೊಲೀಸರಿಗೆ ಅನುವು ಮಾಡಿಕೊಡುತ್ತದೆ.

ಜೂನ್‌‌ 24 ರಂದು ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಯುಎಪಿಎ ಮತ್ತು ಪಿಎಸ್ಎ ಅಡಿಯಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕೋರಿದ್ದರು.

ಇದನ್ನೂ ಓದಿ: ಜಮ್ಮುಕಾಶ್ಮೀರ – ನೌಕರರ ಮೇಲ್ವಿಚಾರಣೆಗೆ ಟಾಸ್ಕ್‌ಫೋರ್ಸ್; ಸಿಪಿಎಂ ನಾಯಕ‌ ತರಿಗಾಮಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...