Homeಮುಖಪುಟಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ...

ಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ ಸ್ಥಳ ಸೀಲ್ ಮಾಡಿದ ಅಧಿಕಾರಿಗಳು!

- Advertisement -
- Advertisement -

ವಿವಾದಾತ್ಮಕ ವಕ್ಫ್ ಕಾಯ್ದೆಯ ಕುರಿತು ಸಭೆ ನಡೆಸಲು ಧಾರ್ಮಿಕ ಸಂಘಟನೆಗಳಿಗೆ ಜಮ್ಮು ಕಾಶ್ಮೀರ ಅಧಿಕಾರಿಗಳು ಅವಕಾಶ ನೀಡಲಿಲ್ಲ ಎಂದು ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷರಾದ ಮಿರ್ವೈಜ್ ಉಮರ್ ಫಾರೂಕ್ ಅವರ ಕಚೇರಿ ಬುಧವಾರ ತಿಳಿಸಿದೆ. ಹಲವಾರು ಧಾರ್ಮಿಕ ಸಂಘಟನೆಗಳ ಒಕ್ಕೂಟವಾದ ಮುತಾಹಿದಾ ಮಜ್ಲಿಸ್-ಎ-ಉಲೇಮಾ (ಎಂಎಂಯು) ಈ ಸಭೆ ನಡೆಸಿ ವಕ್ಫ್ ಕಾಯ್ದೆಯ ಬಗ್ಗೆ ಚರ್ಚಿಸಲು ತೀರ್ಮಾನಿಸಿದ್ದರು ಎಂದು ವರದಿ ಹೇಳಿದೆ.

ಮಿರ್ವೈಜ್ ಅವರು ಜಮ್ಮು ಕಾಶ್ಮೀರದ ಪ್ರಮುಖ ಧಾರ್ಮಿಕ ಮುಖಂಡ ಕೂಡಾ ಆಗಿದ್ದು, ಶ್ರೀನಗರದ ನೈಜೀನ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಎಂಎಂಯು ಸಭೆ ಸೇರಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮಿರ್ವೈಜ್ ಅವರ ಕಚೇರಿ, “ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮಿರ್ವೈಜ್ ಅವರ ನಿವಾಸದಲ್ಲಿ ಮುತಾಹಿದಾ ಮಜ್ಲಿಸ್-ಎ-ಉಲೇಮಾ (MMU) ನಡೆಸುವ ಮಹತ್ವದ ಸಭೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಅವರ ಕಚೇರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದೆ.

ಮಿರ್ವೈಜ್ ನಿವಾಸಕ್ಕೆ ಹೋಗುವ ಎಲ್ಲಾ ರಸ್ತೆಗಳು ಮತ್ತು ಒಳರಸ್ತೆಗಳನ್ನು “ಸೀಲ್ ಮಾಡಲಾಗಿದೆ” ಎಂದು ಅದು ಹೇಳಿದೆ. “ಇತ್ತೀಚೆಗೆ ಅಂಗೀಕರಿಸಲಾದ ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಗಂಭೀರ ಆತಂಕಗಳನ್ನು ಚರ್ಚಿಸುವ ಉದ್ದೇಶದಿಂದ ಲಡಾಖ್, ಕಾರ್ಗಿಲ್ ಮತ್ತು ಜಮ್ಮು ಪ್ರದೇಶ ಸೇರಿದಂತೆ ಜಮ್ಮು ಕಾಶ್ಮೀರದ ಎಲ್ಲಾ ಜಿಲ್ಲೆಗಳ ಧಾರ್ಮಿಕ ಪ್ರತಿನಿಧಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲು ತಲುಪಿದ್ದರು” ಎಂದು ಅದು ಹೇಳಿದೆ.

ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ, ಕಣಿವೆಯಲ್ಲಿರುವ ಮುಸ್ಲಿಂ ವಿದ್ವಾಂಸರಿಗೆ ಇಂತಹ ಗಂಭೀರ ವಿಷಯದ ಬಗ್ಗೆ ಚರ್ಚಿಸುವ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಮಿರ್ವೈಜ್ ಹೇಳಿದ್ದಾರೆ.

“ಈ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸ್ಲಿಂ ವಿದ್ವಾಂಸರು ಮತ್ತು ಧಾರ್ಮಿಕ ಸಂಸ್ಥೆಗಳು ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಲು ಮತ್ತು ಶಾಂತಿಯುತವಾಗಿ ಪ್ರತಿಕ್ರಿಯಿಸುವ ಚರ್ಚೆಯನ್ನು ಸಹ ನಿಷೇಧಿಸಲಾಗಿದೆ ಎಂಬುದು ವಿಚಿತ್ರವಾಗಿದೆ. ಪ್ರತಿಯೊಂದು ರಾಜಕೀಯ ಪಕ್ಷವು ಭಾರತೀಯ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿದೆ. ಇಂತಹದ್ದೆ ಹಕ್ಕನ್ನು ಜಮ್ಮು ಕಾಶ್ಮೀರದ ಮುಸ್ಲಿಂ ರಾಜಕೀಯ ಮತ್ತು ಧಾರ್ಮಿಕ ಪ್ರತಿನಿಧಿಗಳಿಗೂ ವಿಸ್ತರಿಸಬೇಕು” ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

“ಎಲ್ಲಾ ಸದಸ್ಯರೊಂದಿಗೆ ಸಮಾಲೋಚಿಸಿ ಸಿದ್ಧಪಡಿಸಲಾದ ಈ ವಿಷಯದ ಕುರಿತು ಜಂಟಿ ನಿರ್ಣಯವನ್ನು ಮಸೀದಿಗಳಲ್ಲಿ ಮತ್ತು ಎಲ್ಲಾ ಧಾರ್ಮಿಕ ಸಭೆಗಳಲ್ಲಿ ಬರುವ ಶುಕ್ರವಾರ ಓದಲಾಗುವುದು ಎಂದು MMU ನಿರ್ಧರಿಸಿದೆ. MMU ತನ್ನ ಸಂಪೂರ್ಣ ಬೆಂಬಲವನ್ನು ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ಗೆ ನೀಡುತ್ತದೆ. ಹೊಸ ಕಾನೂನಿನಿಂದ ಉದ್ಭವಿಸುವ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತವೆಂದು ಭಾವಿಸುವ ಯಾವುದೇ ಕ್ರಮಕೈಗೊಳ್ಳುವುದಿದ್ದರೆ ಎಂಎಂಯು ಅವರ ಪರವಾಗಿ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ (AIMPLB), ಇತರ ಮುಸ್ಲಿಂ ಸಂಘಟನೆಗಳು ಮತ್ತು ರಾಜಕಾರಣಿಗಳು ಈಗಾಗಲೆ ವಕ್ಫ್ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಏಪ್ರಿಲ್ 15 ರಂದು ಸುಪ್ರಿಂಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ. ಜಮ್ಮು ಕಾಶ್ಮೀರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...