Homeಮುಖಪುಟಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಭರವಸೆ ಅನುಷ್ಠಾನಗೊಂಡರೆ ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿ ಗಳಿಸಿದ ಮೊದಲ ನಿದರ್ಶನವಾಗಲಿದೆ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ಬೆಂಬಲಿಗರ ನೆಲೆಯನ್ನು ವಿಸ್ತರಿಸುವ ಉದ್ದೇಶದಿಂದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಚುನಾವಣಾ ಪೂರ್ವ ಭರವಸೆ ನೀಡಿದ್ದು, ರಾಜ್ಯದಲ್ಲಿ ಪಹಾರಿ ಸಮುದಾಯವು ಪರಿಶಿಷ್ಟ ಪಂಗಡವಾಗಿ (ಎಸ್‌ಟಿ) ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲಿದೆ ಎಂದು ಮಂಗಳವಾರ ರಾಜೌರಿಯಲ್ಲಿ ಘೋಷಿಸಿದ್ದಾರೆ.

ಗೃಹ ಸಚಿವರ ಈ ಭರವಸೆ ಅನುಷ್ಠಾನಗೊಂಡರೆ, ಈ ಕೋಟಾವು ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿಯನ್ನು ಗಳಿಸಿದ ಮೊದಲ ನಿದರ್ಶನವಾಗಲಿದೆ. ಇದನ್ನು ಅನುಷ್ಠಾನಗಳಿಸಬೇಕೆಂದರೆ ಒಕ್ಕೂಟ ಸರ್ಕಾರವು ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದಿಂದ ರಚಿಸಲಾಗಿರುವ ಜಿ.ಡಿ. ಶರ್ಮಾ ಆಯೋಗವು ವರದಿಯನ್ನು ಕಳುಹಿಸಿದೆ. ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ಅಮಿತ್‌ ಶಾ ಮುಂದಿನ ಚುನಾವಣೆಗೆ ಬಿಜೆಪಿಯ ಪ್ರಚಾರದ ಪ್ರಾರಂಭವೆಂದೆ ಹೇಳಲಾಗಿರುವ ರಾಜೌರಿಯಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಮೀಸಲಾತಿ 6% ದಿಂದ 10%ಕ್ಕೆ ಹೆಚ್ಚಿಸಿದ ತೆಲಂಗಾಣ ಸರ್ಕಾರ

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೇ ಅಂತಹ ಮೀಸಲಾತಿ ಸಾಧ್ಯವಾಗಿದ್ದು, ಈಗ ಇಲ್ಲಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಪಹಾರಿಗಳು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಹೇಳಿದ್ದಾರೆ. ಹೊಸದಾಗಿ ನೀಡಲಾಗುತ್ತಿರುವ ಮೀಸಲಾತಿಯಿಂದ ಅಸ್ತಿತ್ವದಲ್ಲಿರುವ ಎಸ್ಟಿಗಳು ಏನನ್ನೂ ಕಳೆದುಕೊಳ್ಳುವುದಿಲ್ಲ ಎಂದು ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಿದ ಸಾಂವಿಧಾನಿಕ ನಿಬಂಧನೆಗಳಾದ 35 ಎ ಮತ್ತು 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ರದ್ದು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕೆಂದು ಅವರು ಜನರನ್ನು ಕೇಳಿಕೊಂಡಿದ್ದಾರೆ.

ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಜಮ್ಮು ಕಾಶ್ಮೀರವು ಚುನಾಯಿತ ವಿಧಾನಸಭೆಯನ್ನು ಹೊಂದಬಹುದು. ಕ್ಷೇತ್ರಗಳನ್ನು ಗುರುತಿಸುವ ಮತ್ತು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿರುವುದರಿಂದ ಜಮ್ಮು ಕಾಶ್ಮೀರದಲ್ಲಿ ಮೊದಲ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಮೀಸಲಾತಿ ನೀಡಿ ಪಹಾರಿಗಳು ಮತ್ತು ಗುಜ್ಜರ್‌ಗಳಿಗೆ ಅಧಿಕಾರ ನೀಡಿದ ನರೇಂದ್ರ ಮೋದಿಯನ್ನು ಬಲಪಡಿಸುವಂತೆ ಅಮಿತ್‌ ಶಾ ಜನರನ್ನು ಕೇಳಿಕೊಂಡಿದ್ದಾರೆ.

ಯಾರು ಈ ಪಹಾರಿ ಸಮುದಾಯ?

ಪಹಾರಿ ಜನರು ಅಥವಾ ಪಹಾರಿ ಮಾತನಾಡುವ ಜನರು ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಾಕಿಸ್ತಾನದ ಆಡಳಿತದಲ್ಲಿರುವ ಆಜಾದ್ ಕಾಶ್ಮೀರದ ಕೆಲವು ಭಾಗಗಳಲ್ಲಿ ವಾಸಿಸುವ ಸಮುದಾಯವಾಗಿದೆ. ಪಹಾರಿ ಭಾಷೆಯು ಜಮ್ಮು ಕಾಶ್ಮೀರದ ಸಂವಿಧಾನದ ಆರನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಪ್ರಾದೇಶಿಕ ಭಾಷೆಗಳಲ್ಲಿ ಒಂದಾಗಿದೆ.

1991 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಪರಿಶಿಷ್ಟ ಪಂಗಡಗಳೆಂದು ಪಟ್ಟಿ ಮಾಡಿರುವ ಗುಜ್ಜರ್‌ಗಳು ಮತ್ತು ಇತರ ಬುಡಕಟ್ಟು ಸಮುದಾಯಗಳು ಪಹಾರಿ ಮಾತನಾಡುವ ಜನರಿಗೆ ಎಸ್‌ಟಿ ಸ್ಥಾನಮಾನ ಮತ್ತು ಇತರ ರೀತಿಯ ಪ್ರಯೋಜನಗಳನ್ನು ನೀಡುವುದನ್ನು ವಿರೋಧಿಸುತ್ತಿದ್ದಾರೆ. ಇಂತಹ ಕ್ರಮವು ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ಸಂಪೂರ್ಣ ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ. ಪಹಾರಿ ಭಾಷೆ ಮಾತನಾಡುವ ಭಾಷಾ ಗುರುತಿನ ಏಕೈಕ ಆಧಾರದ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿದರೆ ಬುಡಕಟ್ಟುಗಳ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಗುಜ್ಜರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪಹಾರಿ ಮಾತನಾಡುವ ಜನರಲ್ಲಿ ಹೆಚ್ಚಿನವರು ಮೇಲ್ವರ್ಗದ ಮುಸ್ಲಿಮರಾಗಿದ್ದಾರೆ ಎಂದು ಗುಜ್ಜರ್‌ಗಳು ವಾದಿಸುತ್ತಾರೆ. ಅದರಲ್ಲಿ, ಸೈಯದ್, ಖಾಜಿ, ಪರ್, ಬೇಗ್, ರಾಜಾ, ಮಲಿಕ್, ಮಿರ್ಜಾ, ಖಾನ್, ಮೊಘಲರು, ರಜಪೂತರು, ಕಾಶ್ಮೀರಿಗಳು ಮತ್ತು ಮೇಲ್ವರ್ಗದ ಸಿಖ್ಖರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಬ್ರಾಹ್ಮಣರು, ರಜಪೂತರು, ಮಹಾಜನರು ಸೇರಿದ್ದಾರೆ. ಈ ಯಾವುದೆ ಸಮುದಾಯಗಳು ಗುಜ್ಜಾರ್‌ಗಳು, ಬಕರ್‌ವಾಲ್‌ಗಳು, ಗಡ್ಡಿಗಳು ಮತ್ತು ಜಮ್ಮು ಕಾಶ್ಮೀರದ ಇತರ ಬುಡಕಟ್ಟುಗಳಂತಹ ಯಾವುದೇ ಸಾಮಾಜಿಕ ಕಳಂಕ ಅಥವಾ ಜಾತಿ ಅಸಮಾನತೆಯನ್ನು ಅವರು ಎದುರಿಸುವುದಿಲ್ಲ ಎಂದು ಅವರ ವಾದವಾಗಿದೆ.

ಈಗಾಗಲೆ ಈ ಎಲ್ಲಾ ಸುಮುದಾಯಗಳು, ‘ವಾಸ್ತವಿಕ ನಿಯಂತ್ರಣ ರೇಖೆಯ ಆವಾಸಸ್ಥಾನದ ಅಡಿ’ಯಲ್ಲಿ     4%, ಮೀಸಲು ಹಿಂದುಳಿದ ಪ್ರದೇಶದಲ್ಲಿ 10%, ಇತರ ಸಾಮಾಜಿಕ ಜಾತಿಗಳ ಅಡಿಯಲ್ಲಿ 4%, ಆರ್ಥಿಕವಾಗಿ ದುರ್ಬಲ ವರ್ಗದ ಅಡಿಯಲ್ಲಿ 10%, ಪಹಾರಿ ಮಾತನಾಡುವವರ ಅಡಿಯಲ್ಲಿ 4% ಮೀಸಲಾತಿಯನ್ನು ಮತ್ತು ಸಾಮಾನ್ಯ ವರ್ಗದ 48% ಮೀಸಲಾತಿ ಪಡೆಯುತ್ತಿದ್ದಾರೆ.

ಇಷ್ಟೆ ಅಲ್ಲದೆ ಈಗ ST ಅಡಿಯಲ್ಲಿ 10% ನಮ್ಮ ಪಾಲನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುವುದು ಗುಜ್ಜರ್‌ಗಳ ಆತಂಕವಾಗಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಅಲ್ಲದೆ, ಏಪ್ರಿಲ್‌ 2020 ರಲ್ಲಿ, ಜಮ್ಮು ಕಾಶ್ಮೀರ ಸರ್ಕಾರವು ‘ಪಹಾರಿ-ಮಾತನಾಡುವ ಜನರಿಗೆ’ ನೇರ ನೇಮಕಾತಿ ಮತ್ತು ವೃತ್ತಿಪರ ಸಂಸ್ಥೆಗಳಲ್ಲಿ ಸೀಟುಗಳ ಪ್ರವೇಶ ಮತ್ತು ಹಂಚಿಕೆಗಾಗಿ 4% ಮೀಸಲಾತಿಯನ್ನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...