Homeಮುಖಪುಟಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಭರವಸೆ ಅನುಷ್ಠಾನಗೊಂಡರೆ ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿ ಗಳಿಸಿದ ಮೊದಲ ನಿದರ್ಶನವಾಗಲಿದೆ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ಬೆಂಬಲಿಗರ ನೆಲೆಯನ್ನು ವಿಸ್ತರಿಸುವ ಉದ್ದೇಶದಿಂದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಚುನಾವಣಾ ಪೂರ್ವ ಭರವಸೆ ನೀಡಿದ್ದು, ರಾಜ್ಯದಲ್ಲಿ ಪಹಾರಿ ಸಮುದಾಯವು ಪರಿಶಿಷ್ಟ ಪಂಗಡವಾಗಿ (ಎಸ್‌ಟಿ) ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲಿದೆ ಎಂದು ಮಂಗಳವಾರ ರಾಜೌರಿಯಲ್ಲಿ ಘೋಷಿಸಿದ್ದಾರೆ.

ಗೃಹ ಸಚಿವರ ಈ ಭರವಸೆ ಅನುಷ್ಠಾನಗೊಂಡರೆ, ಈ ಕೋಟಾವು ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿಯನ್ನು ಗಳಿಸಿದ ಮೊದಲ ನಿದರ್ಶನವಾಗಲಿದೆ. ಇದನ್ನು ಅನುಷ್ಠಾನಗಳಿಸಬೇಕೆಂದರೆ ಒಕ್ಕೂಟ ಸರ್ಕಾರವು ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದಿಂದ ರಚಿಸಲಾಗಿರುವ ಜಿ.ಡಿ. ಶರ್ಮಾ ಆಯೋಗವು ವರದಿಯನ್ನು ಕಳುಹಿಸಿದೆ. ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ಅಮಿತ್‌ ಶಾ ಮುಂದಿನ ಚುನಾವಣೆಗೆ ಬಿಜೆಪಿಯ ಪ್ರಚಾರದ ಪ್ರಾರಂಭವೆಂದೆ ಹೇಳಲಾಗಿರುವ ರಾಜೌರಿಯಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಮೀಸಲಾತಿ 6% ದಿಂದ 10%ಕ್ಕೆ ಹೆಚ್ಚಿಸಿದ ತೆಲಂಗಾಣ ಸರ್ಕಾರ

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೇ ಅಂತಹ ಮೀಸಲಾತಿ ಸಾಧ್ಯವಾಗಿದ್ದು, ಈಗ ಇಲ್ಲಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಪಹಾರಿಗಳು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಹೇಳಿದ್ದಾರೆ. ಹೊಸದಾಗಿ ನೀಡಲಾಗುತ್ತಿರುವ ಮೀಸಲಾತಿಯಿಂದ ಅಸ್ತಿತ್ವದಲ್ಲಿರುವ ಎಸ್ಟಿಗಳು ಏನನ್ನೂ ಕಳೆದುಕೊಳ್ಳುವುದಿಲ್ಲ ಎಂದು ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಿದ ಸಾಂವಿಧಾನಿಕ ನಿಬಂಧನೆಗಳಾದ 35 ಎ ಮತ್ತು 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ರದ್ದು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕೆಂದು ಅವರು ಜನರನ್ನು ಕೇಳಿಕೊಂಡಿದ್ದಾರೆ.

ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಜಮ್ಮು ಕಾಶ್ಮೀರವು ಚುನಾಯಿತ ವಿಧಾನಸಭೆಯನ್ನು ಹೊಂದಬಹುದು. ಕ್ಷೇತ್ರಗಳನ್ನು ಗುರುತಿಸುವ ಮತ್ತು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿರುವುದರಿಂದ ಜಮ್ಮು ಕಾಶ್ಮೀರದಲ್ಲಿ ಮೊದಲ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಮೀಸಲಾತಿ ನೀಡಿ ಪಹಾರಿಗಳು ಮತ್ತು ಗುಜ್ಜರ್‌ಗಳಿಗೆ ಅಧಿಕಾರ ನೀಡಿದ ನರೇಂದ್ರ ಮೋದಿಯನ್ನು ಬಲಪಡಿಸುವಂತೆ ಅಮಿತ್‌ ಶಾ ಜನರನ್ನು ಕೇಳಿಕೊಂಡಿದ್ದಾರೆ.

ಯಾರು ಈ ಪಹಾರಿ ಸಮುದಾಯ?

ಪಹಾರಿ ಜನರು ಅಥವಾ ಪಹಾರಿ ಮಾತನಾಡುವ ಜನರು ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಾಕಿಸ್ತಾನದ ಆಡಳಿತದಲ್ಲಿರುವ ಆಜಾದ್ ಕಾಶ್ಮೀರದ ಕೆಲವು ಭಾಗಗಳಲ್ಲಿ ವಾಸಿಸುವ ಸಮುದಾಯವಾಗಿದೆ. ಪಹಾರಿ ಭಾಷೆಯು ಜಮ್ಮು ಕಾಶ್ಮೀರದ ಸಂವಿಧಾನದ ಆರನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಪ್ರಾದೇಶಿಕ ಭಾಷೆಗಳಲ್ಲಿ ಒಂದಾಗಿದೆ.

1991 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಪರಿಶಿಷ್ಟ ಪಂಗಡಗಳೆಂದು ಪಟ್ಟಿ ಮಾಡಿರುವ ಗುಜ್ಜರ್‌ಗಳು ಮತ್ತು ಇತರ ಬುಡಕಟ್ಟು ಸಮುದಾಯಗಳು ಪಹಾರಿ ಮಾತನಾಡುವ ಜನರಿಗೆ ಎಸ್‌ಟಿ ಸ್ಥಾನಮಾನ ಮತ್ತು ಇತರ ರೀತಿಯ ಪ್ರಯೋಜನಗಳನ್ನು ನೀಡುವುದನ್ನು ವಿರೋಧಿಸುತ್ತಿದ್ದಾರೆ. ಇಂತಹ ಕ್ರಮವು ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ಸಂಪೂರ್ಣ ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ. ಪಹಾರಿ ಭಾಷೆ ಮಾತನಾಡುವ ಭಾಷಾ ಗುರುತಿನ ಏಕೈಕ ಆಧಾರದ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿದರೆ ಬುಡಕಟ್ಟುಗಳ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಗುಜ್ಜರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪಹಾರಿ ಮಾತನಾಡುವ ಜನರಲ್ಲಿ ಹೆಚ್ಚಿನವರು ಮೇಲ್ವರ್ಗದ ಮುಸ್ಲಿಮರಾಗಿದ್ದಾರೆ ಎಂದು ಗುಜ್ಜರ್‌ಗಳು ವಾದಿಸುತ್ತಾರೆ. ಅದರಲ್ಲಿ, ಸೈಯದ್, ಖಾಜಿ, ಪರ್, ಬೇಗ್, ರಾಜಾ, ಮಲಿಕ್, ಮಿರ್ಜಾ, ಖಾನ್, ಮೊಘಲರು, ರಜಪೂತರು, ಕಾಶ್ಮೀರಿಗಳು ಮತ್ತು ಮೇಲ್ವರ್ಗದ ಸಿಖ್ಖರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಬ್ರಾಹ್ಮಣರು, ರಜಪೂತರು, ಮಹಾಜನರು ಸೇರಿದ್ದಾರೆ. ಈ ಯಾವುದೆ ಸಮುದಾಯಗಳು ಗುಜ್ಜಾರ್‌ಗಳು, ಬಕರ್‌ವಾಲ್‌ಗಳು, ಗಡ್ಡಿಗಳು ಮತ್ತು ಜಮ್ಮು ಕಾಶ್ಮೀರದ ಇತರ ಬುಡಕಟ್ಟುಗಳಂತಹ ಯಾವುದೇ ಸಾಮಾಜಿಕ ಕಳಂಕ ಅಥವಾ ಜಾತಿ ಅಸಮಾನತೆಯನ್ನು ಅವರು ಎದುರಿಸುವುದಿಲ್ಲ ಎಂದು ಅವರ ವಾದವಾಗಿದೆ.

ಈಗಾಗಲೆ ಈ ಎಲ್ಲಾ ಸುಮುದಾಯಗಳು, ‘ವಾಸ್ತವಿಕ ನಿಯಂತ್ರಣ ರೇಖೆಯ ಆವಾಸಸ್ಥಾನದ ಅಡಿ’ಯಲ್ಲಿ     4%, ಮೀಸಲು ಹಿಂದುಳಿದ ಪ್ರದೇಶದಲ್ಲಿ 10%, ಇತರ ಸಾಮಾಜಿಕ ಜಾತಿಗಳ ಅಡಿಯಲ್ಲಿ 4%, ಆರ್ಥಿಕವಾಗಿ ದುರ್ಬಲ ವರ್ಗದ ಅಡಿಯಲ್ಲಿ 10%, ಪಹಾರಿ ಮಾತನಾಡುವವರ ಅಡಿಯಲ್ಲಿ 4% ಮೀಸಲಾತಿಯನ್ನು ಮತ್ತು ಸಾಮಾನ್ಯ ವರ್ಗದ 48% ಮೀಸಲಾತಿ ಪಡೆಯುತ್ತಿದ್ದಾರೆ.

ಇಷ್ಟೆ ಅಲ್ಲದೆ ಈಗ ST ಅಡಿಯಲ್ಲಿ 10% ನಮ್ಮ ಪಾಲನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುವುದು ಗುಜ್ಜರ್‌ಗಳ ಆತಂಕವಾಗಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಅಲ್ಲದೆ, ಏಪ್ರಿಲ್‌ 2020 ರಲ್ಲಿ, ಜಮ್ಮು ಕಾಶ್ಮೀರ ಸರ್ಕಾರವು ‘ಪಹಾರಿ-ಮಾತನಾಡುವ ಜನರಿಗೆ’ ನೇರ ನೇಮಕಾತಿ ಮತ್ತು ವೃತ್ತಿಪರ ಸಂಸ್ಥೆಗಳಲ್ಲಿ ಸೀಟುಗಳ ಪ್ರವೇಶ ಮತ್ತು ಹಂಚಿಕೆಗಾಗಿ 4% ಮೀಸಲಾತಿಯನ್ನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...