Homeಮುಖಪುಟಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಭರವಸೆ ಅನುಷ್ಠಾನಗೊಂಡರೆ ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿ ಗಳಿಸಿದ ಮೊದಲ ನಿದರ್ಶನವಾಗಲಿದೆ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ಬೆಂಬಲಿಗರ ನೆಲೆಯನ್ನು ವಿಸ್ತರಿಸುವ ಉದ್ದೇಶದಿಂದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಚುನಾವಣಾ ಪೂರ್ವ ಭರವಸೆ ನೀಡಿದ್ದು, ರಾಜ್ಯದಲ್ಲಿ ಪಹಾರಿ ಸಮುದಾಯವು ಪರಿಶಿಷ್ಟ ಪಂಗಡವಾಗಿ (ಎಸ್‌ಟಿ) ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲಿದೆ ಎಂದು ಮಂಗಳವಾರ ರಾಜೌರಿಯಲ್ಲಿ ಘೋಷಿಸಿದ್ದಾರೆ.

ಗೃಹ ಸಚಿವರ ಈ ಭರವಸೆ ಅನುಷ್ಠಾನಗೊಂಡರೆ, ಈ ಕೋಟಾವು ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿಯನ್ನು ಗಳಿಸಿದ ಮೊದಲ ನಿದರ್ಶನವಾಗಲಿದೆ. ಇದನ್ನು ಅನುಷ್ಠಾನಗಳಿಸಬೇಕೆಂದರೆ ಒಕ್ಕೂಟ ಸರ್ಕಾರವು ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದಿಂದ ರಚಿಸಲಾಗಿರುವ ಜಿ.ಡಿ. ಶರ್ಮಾ ಆಯೋಗವು ವರದಿಯನ್ನು ಕಳುಹಿಸಿದೆ. ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ಅಮಿತ್‌ ಶಾ ಮುಂದಿನ ಚುನಾವಣೆಗೆ ಬಿಜೆಪಿಯ ಪ್ರಚಾರದ ಪ್ರಾರಂಭವೆಂದೆ ಹೇಳಲಾಗಿರುವ ರಾಜೌರಿಯಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಮೀಸಲಾತಿ 6% ದಿಂದ 10%ಕ್ಕೆ ಹೆಚ್ಚಿಸಿದ ತೆಲಂಗಾಣ ಸರ್ಕಾರ

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೇ ಅಂತಹ ಮೀಸಲಾತಿ ಸಾಧ್ಯವಾಗಿದ್ದು, ಈಗ ಇಲ್ಲಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಪಹಾರಿಗಳು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಹೇಳಿದ್ದಾರೆ. ಹೊಸದಾಗಿ ನೀಡಲಾಗುತ್ತಿರುವ ಮೀಸಲಾತಿಯಿಂದ ಅಸ್ತಿತ್ವದಲ್ಲಿರುವ ಎಸ್ಟಿಗಳು ಏನನ್ನೂ ಕಳೆದುಕೊಳ್ಳುವುದಿಲ್ಲ ಎಂದು ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಿದ ಸಾಂವಿಧಾನಿಕ ನಿಬಂಧನೆಗಳಾದ 35 ಎ ಮತ್ತು 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ರದ್ದು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕೆಂದು ಅವರು ಜನರನ್ನು ಕೇಳಿಕೊಂಡಿದ್ದಾರೆ.

ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಜಮ್ಮು ಕಾಶ್ಮೀರವು ಚುನಾಯಿತ ವಿಧಾನಸಭೆಯನ್ನು ಹೊಂದಬಹುದು. ಕ್ಷೇತ್ರಗಳನ್ನು ಗುರುತಿಸುವ ಮತ್ತು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿರುವುದರಿಂದ ಜಮ್ಮು ಕಾಶ್ಮೀರದಲ್ಲಿ ಮೊದಲ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಮೀಸಲಾತಿ ನೀಡಿ ಪಹಾರಿಗಳು ಮತ್ತು ಗುಜ್ಜರ್‌ಗಳಿಗೆ ಅಧಿಕಾರ ನೀಡಿದ ನರೇಂದ್ರ ಮೋದಿಯನ್ನು ಬಲಪಡಿಸುವಂತೆ ಅಮಿತ್‌ ಶಾ ಜನರನ್ನು ಕೇಳಿಕೊಂಡಿದ್ದಾರೆ.

ಯಾರು ಈ ಪಹಾರಿ ಸಮುದಾಯ?

ಪಹಾರಿ ಜನರು ಅಥವಾ ಪಹಾರಿ ಮಾತನಾಡುವ ಜನರು ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಾಕಿಸ್ತಾನದ ಆಡಳಿತದಲ್ಲಿರುವ ಆಜಾದ್ ಕಾಶ್ಮೀರದ ಕೆಲವು ಭಾಗಗಳಲ್ಲಿ ವಾಸಿಸುವ ಸಮುದಾಯವಾಗಿದೆ. ಪಹಾರಿ ಭಾಷೆಯು ಜಮ್ಮು ಕಾಶ್ಮೀರದ ಸಂವಿಧಾನದ ಆರನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಪ್ರಾದೇಶಿಕ ಭಾಷೆಗಳಲ್ಲಿ ಒಂದಾಗಿದೆ.

1991 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಪರಿಶಿಷ್ಟ ಪಂಗಡಗಳೆಂದು ಪಟ್ಟಿ ಮಾಡಿರುವ ಗುಜ್ಜರ್‌ಗಳು ಮತ್ತು ಇತರ ಬುಡಕಟ್ಟು ಸಮುದಾಯಗಳು ಪಹಾರಿ ಮಾತನಾಡುವ ಜನರಿಗೆ ಎಸ್‌ಟಿ ಸ್ಥಾನಮಾನ ಮತ್ತು ಇತರ ರೀತಿಯ ಪ್ರಯೋಜನಗಳನ್ನು ನೀಡುವುದನ್ನು ವಿರೋಧಿಸುತ್ತಿದ್ದಾರೆ. ಇಂತಹ ಕ್ರಮವು ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ಸಂಪೂರ್ಣ ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ. ಪಹಾರಿ ಭಾಷೆ ಮಾತನಾಡುವ ಭಾಷಾ ಗುರುತಿನ ಏಕೈಕ ಆಧಾರದ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿದರೆ ಬುಡಕಟ್ಟುಗಳ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಗುಜ್ಜರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪಹಾರಿ ಮಾತನಾಡುವ ಜನರಲ್ಲಿ ಹೆಚ್ಚಿನವರು ಮೇಲ್ವರ್ಗದ ಮುಸ್ಲಿಮರಾಗಿದ್ದಾರೆ ಎಂದು ಗುಜ್ಜರ್‌ಗಳು ವಾದಿಸುತ್ತಾರೆ. ಅದರಲ್ಲಿ, ಸೈಯದ್, ಖಾಜಿ, ಪರ್, ಬೇಗ್, ರಾಜಾ, ಮಲಿಕ್, ಮಿರ್ಜಾ, ಖಾನ್, ಮೊಘಲರು, ರಜಪೂತರು, ಕಾಶ್ಮೀರಿಗಳು ಮತ್ತು ಮೇಲ್ವರ್ಗದ ಸಿಖ್ಖರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಬ್ರಾಹ್ಮಣರು, ರಜಪೂತರು, ಮಹಾಜನರು ಸೇರಿದ್ದಾರೆ. ಈ ಯಾವುದೆ ಸಮುದಾಯಗಳು ಗುಜ್ಜಾರ್‌ಗಳು, ಬಕರ್‌ವಾಲ್‌ಗಳು, ಗಡ್ಡಿಗಳು ಮತ್ತು ಜಮ್ಮು ಕಾಶ್ಮೀರದ ಇತರ ಬುಡಕಟ್ಟುಗಳಂತಹ ಯಾವುದೇ ಸಾಮಾಜಿಕ ಕಳಂಕ ಅಥವಾ ಜಾತಿ ಅಸಮಾನತೆಯನ್ನು ಅವರು ಎದುರಿಸುವುದಿಲ್ಲ ಎಂದು ಅವರ ವಾದವಾಗಿದೆ.

ಈಗಾಗಲೆ ಈ ಎಲ್ಲಾ ಸುಮುದಾಯಗಳು, ‘ವಾಸ್ತವಿಕ ನಿಯಂತ್ರಣ ರೇಖೆಯ ಆವಾಸಸ್ಥಾನದ ಅಡಿ’ಯಲ್ಲಿ     4%, ಮೀಸಲು ಹಿಂದುಳಿದ ಪ್ರದೇಶದಲ್ಲಿ 10%, ಇತರ ಸಾಮಾಜಿಕ ಜಾತಿಗಳ ಅಡಿಯಲ್ಲಿ 4%, ಆರ್ಥಿಕವಾಗಿ ದುರ್ಬಲ ವರ್ಗದ ಅಡಿಯಲ್ಲಿ 10%, ಪಹಾರಿ ಮಾತನಾಡುವವರ ಅಡಿಯಲ್ಲಿ 4% ಮೀಸಲಾತಿಯನ್ನು ಮತ್ತು ಸಾಮಾನ್ಯ ವರ್ಗದ 48% ಮೀಸಲಾತಿ ಪಡೆಯುತ್ತಿದ್ದಾರೆ.

ಇಷ್ಟೆ ಅಲ್ಲದೆ ಈಗ ST ಅಡಿಯಲ್ಲಿ 10% ನಮ್ಮ ಪಾಲನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುವುದು ಗುಜ್ಜರ್‌ಗಳ ಆತಂಕವಾಗಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಅಲ್ಲದೆ, ಏಪ್ರಿಲ್‌ 2020 ರಲ್ಲಿ, ಜಮ್ಮು ಕಾಶ್ಮೀರ ಸರ್ಕಾರವು ‘ಪಹಾರಿ-ಮಾತನಾಡುವ ಜನರಿಗೆ’ ನೇರ ನೇಮಕಾತಿ ಮತ್ತು ವೃತ್ತಿಪರ ಸಂಸ್ಥೆಗಳಲ್ಲಿ ಸೀಟುಗಳ ಪ್ರವೇಶ ಮತ್ತು ಹಂಚಿಕೆಗಾಗಿ 4% ಮೀಸಲಾತಿಯನ್ನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...