Homeಮುಖಪುಟಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಭರವಸೆ ಅನುಷ್ಠಾನಗೊಂಡರೆ ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿ ಗಳಿಸಿದ ಮೊದಲ ನಿದರ್ಶನವಾಗಲಿದೆ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ಬೆಂಬಲಿಗರ ನೆಲೆಯನ್ನು ವಿಸ್ತರಿಸುವ ಉದ್ದೇಶದಿಂದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಚುನಾವಣಾ ಪೂರ್ವ ಭರವಸೆ ನೀಡಿದ್ದು, ರಾಜ್ಯದಲ್ಲಿ ಪಹಾರಿ ಸಮುದಾಯವು ಪರಿಶಿಷ್ಟ ಪಂಗಡವಾಗಿ (ಎಸ್‌ಟಿ) ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲಿದೆ ಎಂದು ಮಂಗಳವಾರ ರಾಜೌರಿಯಲ್ಲಿ ಘೋಷಿಸಿದ್ದಾರೆ.

ಗೃಹ ಸಚಿವರ ಈ ಭರವಸೆ ಅನುಷ್ಠಾನಗೊಂಡರೆ, ಈ ಕೋಟಾವು ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿಯನ್ನು ಗಳಿಸಿದ ಮೊದಲ ನಿದರ್ಶನವಾಗಲಿದೆ. ಇದನ್ನು ಅನುಷ್ಠಾನಗಳಿಸಬೇಕೆಂದರೆ ಒಕ್ಕೂಟ ಸರ್ಕಾರವು ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದಿಂದ ರಚಿಸಲಾಗಿರುವ ಜಿ.ಡಿ. ಶರ್ಮಾ ಆಯೋಗವು ವರದಿಯನ್ನು ಕಳುಹಿಸಿದೆ. ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ಅಮಿತ್‌ ಶಾ ಮುಂದಿನ ಚುನಾವಣೆಗೆ ಬಿಜೆಪಿಯ ಪ್ರಚಾರದ ಪ್ರಾರಂಭವೆಂದೆ ಹೇಳಲಾಗಿರುವ ರಾಜೌರಿಯಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಮೀಸಲಾತಿ 6% ದಿಂದ 10%ಕ್ಕೆ ಹೆಚ್ಚಿಸಿದ ತೆಲಂಗಾಣ ಸರ್ಕಾರ

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೇ ಅಂತಹ ಮೀಸಲಾತಿ ಸಾಧ್ಯವಾಗಿದ್ದು, ಈಗ ಇಲ್ಲಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಪಹಾರಿಗಳು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಹೇಳಿದ್ದಾರೆ. ಹೊಸದಾಗಿ ನೀಡಲಾಗುತ್ತಿರುವ ಮೀಸಲಾತಿಯಿಂದ ಅಸ್ತಿತ್ವದಲ್ಲಿರುವ ಎಸ್ಟಿಗಳು ಏನನ್ನೂ ಕಳೆದುಕೊಳ್ಳುವುದಿಲ್ಲ ಎಂದು ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಿದ ಸಾಂವಿಧಾನಿಕ ನಿಬಂಧನೆಗಳಾದ 35 ಎ ಮತ್ತು 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ರದ್ದು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕೆಂದು ಅವರು ಜನರನ್ನು ಕೇಳಿಕೊಂಡಿದ್ದಾರೆ.

ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಜಮ್ಮು ಕಾಶ್ಮೀರವು ಚುನಾಯಿತ ವಿಧಾನಸಭೆಯನ್ನು ಹೊಂದಬಹುದು. ಕ್ಷೇತ್ರಗಳನ್ನು ಗುರುತಿಸುವ ಮತ್ತು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿರುವುದರಿಂದ ಜಮ್ಮು ಕಾಶ್ಮೀರದಲ್ಲಿ ಮೊದಲ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಮೀಸಲಾತಿ ನೀಡಿ ಪಹಾರಿಗಳು ಮತ್ತು ಗುಜ್ಜರ್‌ಗಳಿಗೆ ಅಧಿಕಾರ ನೀಡಿದ ನರೇಂದ್ರ ಮೋದಿಯನ್ನು ಬಲಪಡಿಸುವಂತೆ ಅಮಿತ್‌ ಶಾ ಜನರನ್ನು ಕೇಳಿಕೊಂಡಿದ್ದಾರೆ.

ಯಾರು ಈ ಪಹಾರಿ ಸಮುದಾಯ?

ಪಹಾರಿ ಜನರು ಅಥವಾ ಪಹಾರಿ ಮಾತನಾಡುವ ಜನರು ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಾಕಿಸ್ತಾನದ ಆಡಳಿತದಲ್ಲಿರುವ ಆಜಾದ್ ಕಾಶ್ಮೀರದ ಕೆಲವು ಭಾಗಗಳಲ್ಲಿ ವಾಸಿಸುವ ಸಮುದಾಯವಾಗಿದೆ. ಪಹಾರಿ ಭಾಷೆಯು ಜಮ್ಮು ಕಾಶ್ಮೀರದ ಸಂವಿಧಾನದ ಆರನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಪ್ರಾದೇಶಿಕ ಭಾಷೆಗಳಲ್ಲಿ ಒಂದಾಗಿದೆ.

1991 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಪರಿಶಿಷ್ಟ ಪಂಗಡಗಳೆಂದು ಪಟ್ಟಿ ಮಾಡಿರುವ ಗುಜ್ಜರ್‌ಗಳು ಮತ್ತು ಇತರ ಬುಡಕಟ್ಟು ಸಮುದಾಯಗಳು ಪಹಾರಿ ಮಾತನಾಡುವ ಜನರಿಗೆ ಎಸ್‌ಟಿ ಸ್ಥಾನಮಾನ ಮತ್ತು ಇತರ ರೀತಿಯ ಪ್ರಯೋಜನಗಳನ್ನು ನೀಡುವುದನ್ನು ವಿರೋಧಿಸುತ್ತಿದ್ದಾರೆ. ಇಂತಹ ಕ್ರಮವು ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ಸಂಪೂರ್ಣ ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ. ಪಹಾರಿ ಭಾಷೆ ಮಾತನಾಡುವ ಭಾಷಾ ಗುರುತಿನ ಏಕೈಕ ಆಧಾರದ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿದರೆ ಬುಡಕಟ್ಟುಗಳ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಗುಜ್ಜರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪಹಾರಿ ಮಾತನಾಡುವ ಜನರಲ್ಲಿ ಹೆಚ್ಚಿನವರು ಮೇಲ್ವರ್ಗದ ಮುಸ್ಲಿಮರಾಗಿದ್ದಾರೆ ಎಂದು ಗುಜ್ಜರ್‌ಗಳು ವಾದಿಸುತ್ತಾರೆ. ಅದರಲ್ಲಿ, ಸೈಯದ್, ಖಾಜಿ, ಪರ್, ಬೇಗ್, ರಾಜಾ, ಮಲಿಕ್, ಮಿರ್ಜಾ, ಖಾನ್, ಮೊಘಲರು, ರಜಪೂತರು, ಕಾಶ್ಮೀರಿಗಳು ಮತ್ತು ಮೇಲ್ವರ್ಗದ ಸಿಖ್ಖರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಬ್ರಾಹ್ಮಣರು, ರಜಪೂತರು, ಮಹಾಜನರು ಸೇರಿದ್ದಾರೆ. ಈ ಯಾವುದೆ ಸಮುದಾಯಗಳು ಗುಜ್ಜಾರ್‌ಗಳು, ಬಕರ್‌ವಾಲ್‌ಗಳು, ಗಡ್ಡಿಗಳು ಮತ್ತು ಜಮ್ಮು ಕಾಶ್ಮೀರದ ಇತರ ಬುಡಕಟ್ಟುಗಳಂತಹ ಯಾವುದೇ ಸಾಮಾಜಿಕ ಕಳಂಕ ಅಥವಾ ಜಾತಿ ಅಸಮಾನತೆಯನ್ನು ಅವರು ಎದುರಿಸುವುದಿಲ್ಲ ಎಂದು ಅವರ ವಾದವಾಗಿದೆ.

ಈಗಾಗಲೆ ಈ ಎಲ್ಲಾ ಸುಮುದಾಯಗಳು, ‘ವಾಸ್ತವಿಕ ನಿಯಂತ್ರಣ ರೇಖೆಯ ಆವಾಸಸ್ಥಾನದ ಅಡಿ’ಯಲ್ಲಿ     4%, ಮೀಸಲು ಹಿಂದುಳಿದ ಪ್ರದೇಶದಲ್ಲಿ 10%, ಇತರ ಸಾಮಾಜಿಕ ಜಾತಿಗಳ ಅಡಿಯಲ್ಲಿ 4%, ಆರ್ಥಿಕವಾಗಿ ದುರ್ಬಲ ವರ್ಗದ ಅಡಿಯಲ್ಲಿ 10%, ಪಹಾರಿ ಮಾತನಾಡುವವರ ಅಡಿಯಲ್ಲಿ 4% ಮೀಸಲಾತಿಯನ್ನು ಮತ್ತು ಸಾಮಾನ್ಯ ವರ್ಗದ 48% ಮೀಸಲಾತಿ ಪಡೆಯುತ್ತಿದ್ದಾರೆ.

ಇಷ್ಟೆ ಅಲ್ಲದೆ ಈಗ ST ಅಡಿಯಲ್ಲಿ 10% ನಮ್ಮ ಪಾಲನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುವುದು ಗುಜ್ಜರ್‌ಗಳ ಆತಂಕವಾಗಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಅಲ್ಲದೆ, ಏಪ್ರಿಲ್‌ 2020 ರಲ್ಲಿ, ಜಮ್ಮು ಕಾಶ್ಮೀರ ಸರ್ಕಾರವು ‘ಪಹಾರಿ-ಮಾತನಾಡುವ ಜನರಿಗೆ’ ನೇರ ನೇಮಕಾತಿ ಮತ್ತು ವೃತ್ತಿಪರ ಸಂಸ್ಥೆಗಳಲ್ಲಿ ಸೀಟುಗಳ ಪ್ರವೇಶ ಮತ್ತು ಹಂಚಿಕೆಗಾಗಿ 4% ಮೀಸಲಾತಿಯನ್ನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...