Homeಮುಖಪುಟಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಜಮ್ಮು ಕಾಶ್ಮೀರ: ಪಹಾರಿ ಭಾಷಾ ಸಮುದಾಯಕ್ಕೆ ಮೀಸಲಾತಿ ಭರವಸೆ ನೀಡಿದ ಅಮಿತ್ ಶಾ

ಭರವಸೆ ಅನುಷ್ಠಾನಗೊಂಡರೆ ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿ ಗಳಿಸಿದ ಮೊದಲ ನಿದರ್ಶನವಾಗಲಿದೆ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ಬೆಂಬಲಿಗರ ನೆಲೆಯನ್ನು ವಿಸ್ತರಿಸುವ ಉದ್ದೇಶದಿಂದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಚುನಾವಣಾ ಪೂರ್ವ ಭರವಸೆ ನೀಡಿದ್ದು, ರಾಜ್ಯದಲ್ಲಿ ಪಹಾರಿ ಸಮುದಾಯವು ಪರಿಶಿಷ್ಟ ಪಂಗಡವಾಗಿ (ಎಸ್‌ಟಿ) ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲಿದೆ ಎಂದು ಮಂಗಳವಾರ ರಾಜೌರಿಯಲ್ಲಿ ಘೋಷಿಸಿದ್ದಾರೆ.

ಗೃಹ ಸಚಿವರ ಈ ಭರವಸೆ ಅನುಷ್ಠಾನಗೊಂಡರೆ, ಈ ಕೋಟಾವು ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿಯನ್ನು ಗಳಿಸಿದ ಮೊದಲ ನಿದರ್ಶನವಾಗಲಿದೆ. ಇದನ್ನು ಅನುಷ್ಠಾನಗಳಿಸಬೇಕೆಂದರೆ ಒಕ್ಕೂಟ ಸರ್ಕಾರವು ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದಿಂದ ರಚಿಸಲಾಗಿರುವ ಜಿ.ಡಿ. ಶರ್ಮಾ ಆಯೋಗವು ವರದಿಯನ್ನು ಕಳುಹಿಸಿದೆ. ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ಅಮಿತ್‌ ಶಾ ಮುಂದಿನ ಚುನಾವಣೆಗೆ ಬಿಜೆಪಿಯ ಪ್ರಚಾರದ ಪ್ರಾರಂಭವೆಂದೆ ಹೇಳಲಾಗಿರುವ ರಾಜೌರಿಯಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಮೀಸಲಾತಿ 6% ದಿಂದ 10%ಕ್ಕೆ ಹೆಚ್ಚಿಸಿದ ತೆಲಂಗಾಣ ಸರ್ಕಾರ

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೇ ಅಂತಹ ಮೀಸಲಾತಿ ಸಾಧ್ಯವಾಗಿದ್ದು, ಈಗ ಇಲ್ಲಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಪಹಾರಿಗಳು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಹೇಳಿದ್ದಾರೆ. ಹೊಸದಾಗಿ ನೀಡಲಾಗುತ್ತಿರುವ ಮೀಸಲಾತಿಯಿಂದ ಅಸ್ತಿತ್ವದಲ್ಲಿರುವ ಎಸ್ಟಿಗಳು ಏನನ್ನೂ ಕಳೆದುಕೊಳ್ಳುವುದಿಲ್ಲ ಎಂದು ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಿದ ಸಾಂವಿಧಾನಿಕ ನಿಬಂಧನೆಗಳಾದ 35 ಎ ಮತ್ತು 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ರದ್ದು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕೆಂದು ಅವರು ಜನರನ್ನು ಕೇಳಿಕೊಂಡಿದ್ದಾರೆ.

ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಜಮ್ಮು ಕಾಶ್ಮೀರವು ಚುನಾಯಿತ ವಿಧಾನಸಭೆಯನ್ನು ಹೊಂದಬಹುದು. ಕ್ಷೇತ್ರಗಳನ್ನು ಗುರುತಿಸುವ ಮತ್ತು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿರುವುದರಿಂದ ಜಮ್ಮು ಕಾಶ್ಮೀರದಲ್ಲಿ ಮೊದಲ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಮೀಸಲಾತಿ ನೀಡಿ ಪಹಾರಿಗಳು ಮತ್ತು ಗುಜ್ಜರ್‌ಗಳಿಗೆ ಅಧಿಕಾರ ನೀಡಿದ ನರೇಂದ್ರ ಮೋದಿಯನ್ನು ಬಲಪಡಿಸುವಂತೆ ಅಮಿತ್‌ ಶಾ ಜನರನ್ನು ಕೇಳಿಕೊಂಡಿದ್ದಾರೆ.

ಯಾರು ಈ ಪಹಾರಿ ಸಮುದಾಯ?

ಪಹಾರಿ ಜನರು ಅಥವಾ ಪಹಾರಿ ಮಾತನಾಡುವ ಜನರು ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಾಕಿಸ್ತಾನದ ಆಡಳಿತದಲ್ಲಿರುವ ಆಜಾದ್ ಕಾಶ್ಮೀರದ ಕೆಲವು ಭಾಗಗಳಲ್ಲಿ ವಾಸಿಸುವ ಸಮುದಾಯವಾಗಿದೆ. ಪಹಾರಿ ಭಾಷೆಯು ಜಮ್ಮು ಕಾಶ್ಮೀರದ ಸಂವಿಧಾನದ ಆರನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಪ್ರಾದೇಶಿಕ ಭಾಷೆಗಳಲ್ಲಿ ಒಂದಾಗಿದೆ.

1991 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಪರಿಶಿಷ್ಟ ಪಂಗಡಗಳೆಂದು ಪಟ್ಟಿ ಮಾಡಿರುವ ಗುಜ್ಜರ್‌ಗಳು ಮತ್ತು ಇತರ ಬುಡಕಟ್ಟು ಸಮುದಾಯಗಳು ಪಹಾರಿ ಮಾತನಾಡುವ ಜನರಿಗೆ ಎಸ್‌ಟಿ ಸ್ಥಾನಮಾನ ಮತ್ತು ಇತರ ರೀತಿಯ ಪ್ರಯೋಜನಗಳನ್ನು ನೀಡುವುದನ್ನು ವಿರೋಧಿಸುತ್ತಿದ್ದಾರೆ. ಇಂತಹ ಕ್ರಮವು ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ಸಂಪೂರ್ಣ ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ. ಪಹಾರಿ ಭಾಷೆ ಮಾತನಾಡುವ ಭಾಷಾ ಗುರುತಿನ ಏಕೈಕ ಆಧಾರದ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿದರೆ ಬುಡಕಟ್ಟುಗಳ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಗುಜ್ಜರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪಹಾರಿ ಮಾತನಾಡುವ ಜನರಲ್ಲಿ ಹೆಚ್ಚಿನವರು ಮೇಲ್ವರ್ಗದ ಮುಸ್ಲಿಮರಾಗಿದ್ದಾರೆ ಎಂದು ಗುಜ್ಜರ್‌ಗಳು ವಾದಿಸುತ್ತಾರೆ. ಅದರಲ್ಲಿ, ಸೈಯದ್, ಖಾಜಿ, ಪರ್, ಬೇಗ್, ರಾಜಾ, ಮಲಿಕ್, ಮಿರ್ಜಾ, ಖಾನ್, ಮೊಘಲರು, ರಜಪೂತರು, ಕಾಶ್ಮೀರಿಗಳು ಮತ್ತು ಮೇಲ್ವರ್ಗದ ಸಿಖ್ಖರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಬ್ರಾಹ್ಮಣರು, ರಜಪೂತರು, ಮಹಾಜನರು ಸೇರಿದ್ದಾರೆ. ಈ ಯಾವುದೆ ಸಮುದಾಯಗಳು ಗುಜ್ಜಾರ್‌ಗಳು, ಬಕರ್‌ವಾಲ್‌ಗಳು, ಗಡ್ಡಿಗಳು ಮತ್ತು ಜಮ್ಮು ಕಾಶ್ಮೀರದ ಇತರ ಬುಡಕಟ್ಟುಗಳಂತಹ ಯಾವುದೇ ಸಾಮಾಜಿಕ ಕಳಂಕ ಅಥವಾ ಜಾತಿ ಅಸಮಾನತೆಯನ್ನು ಅವರು ಎದುರಿಸುವುದಿಲ್ಲ ಎಂದು ಅವರ ವಾದವಾಗಿದೆ.

ಈಗಾಗಲೆ ಈ ಎಲ್ಲಾ ಸುಮುದಾಯಗಳು, ‘ವಾಸ್ತವಿಕ ನಿಯಂತ್ರಣ ರೇಖೆಯ ಆವಾಸಸ್ಥಾನದ ಅಡಿ’ಯಲ್ಲಿ     4%, ಮೀಸಲು ಹಿಂದುಳಿದ ಪ್ರದೇಶದಲ್ಲಿ 10%, ಇತರ ಸಾಮಾಜಿಕ ಜಾತಿಗಳ ಅಡಿಯಲ್ಲಿ 4%, ಆರ್ಥಿಕವಾಗಿ ದುರ್ಬಲ ವರ್ಗದ ಅಡಿಯಲ್ಲಿ 10%, ಪಹಾರಿ ಮಾತನಾಡುವವರ ಅಡಿಯಲ್ಲಿ 4% ಮೀಸಲಾತಿಯನ್ನು ಮತ್ತು ಸಾಮಾನ್ಯ ವರ್ಗದ 48% ಮೀಸಲಾತಿ ಪಡೆಯುತ್ತಿದ್ದಾರೆ.

ಇಷ್ಟೆ ಅಲ್ಲದೆ ಈಗ ST ಅಡಿಯಲ್ಲಿ 10% ನಮ್ಮ ಪಾಲನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುವುದು ಗುಜ್ಜರ್‌ಗಳ ಆತಂಕವಾಗಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಅಲ್ಲದೆ, ಏಪ್ರಿಲ್‌ 2020 ರಲ್ಲಿ, ಜಮ್ಮು ಕಾಶ್ಮೀರ ಸರ್ಕಾರವು ‘ಪಹಾರಿ-ಮಾತನಾಡುವ ಜನರಿಗೆ’ ನೇರ ನೇಮಕಾತಿ ಮತ್ತು ವೃತ್ತಿಪರ ಸಂಸ್ಥೆಗಳಲ್ಲಿ ಸೀಟುಗಳ ಪ್ರವೇಶ ಮತ್ತು ಹಂಚಿಕೆಗಾಗಿ 4% ಮೀಸಲಾತಿಯನ್ನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...