HomeUncategorizedಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ | 2ನೇ ಹಂತದ ಮತದಾನ

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ | 2ನೇ ಹಂತದ ಮತದಾನ

- Advertisement -
- Advertisement -

ಜಮ್ಮು ಕಾಶ್ಮೀರ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಪ್ರಾರಂಭವಾಗಿದ್ದು, ಮೊದಲ ನಾಲ್ಕು ಗಂಟೆಗಳಲ್ಲಿ ಸರಾಸರಿ 24.10% ದಷ್ಟು ಮತದಾನವಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯ ಎರಡನೇ ಹಂತದಲ್ಲಿ 25 ಲಕ್ಷ ಮತದಾರರು ಮತದಾನ ಮಾಡಲಿದ್ದು, ರಾಜ್ಯದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ 26 ಕ್ಷೇತ್ರಗಳ 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಗಿ ಭದ್ರತೆಯ ನಡುವೆ 26 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಧಾನಸಭಾ ಕ್ಷೇತ್ರಗಳು ಕಾಶ್ಮೀರ ಕಣಿವೆಯ ಮೂರು ಮತ್ತು ಜಮ್ಮು ವಿಭಾಗದಲ್ಲಿ ಆರು ಜಿಲ್ಲೆಗಳಿಗೆ ಸೇರಿವೆ ಎಂದು ಅವರು ಹೇಳಿದ್ದಾರೆ.

ಭಾರತದ ಚುನಾವಣಾ ಆಯೋಗವು ಎರಡನೆ ಹಂತದ ಚುನಾವಣೆ ವಿಭಾಗಗಳಲ್ಲಿ 3,502 ಮತಗಟ್ಟೆಗಳನ್ನು ಸ್ಥಾಪಿಸಿದೆ. 1,056 ನಗರ ಮತಗಟ್ಟೆಗಳು ಮತ್ತು 2,446 ಗ್ರಾಮೀಣ ಮತಗಟ್ಟೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್, ಸಶಸ್ತ್ರ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಅರೆಸೇನಾ ಪಡೆಗಳನ್ನು ಒಳಗೊಂಡ ಭದ್ರತಾ ಸಿಬ್ಬಂದಿಯನ್ನು ಮತಗಟ್ಟೆಗಳ ಸುತ್ತಲೂ ಬಿಗಿಯಾಗಿ ನಿಯೋಜಿಸಲಾಗಿದೆ.

ಎರಡನೇ ಹಂತದ ಮತದಾನ ಭಯಮುಕ್ತ ವಾತಾವರಣದಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿ ಮತಗಟ್ಟೆಯ ಸುತ್ತಲೂ ಬಹು ಹಂತದ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ : ಸುಪ್ರೀಂ ಕೋರ್ಟ್

2ನೇ ಹಂತದ ಚುನಾವಣೆಯಲ್ಲಿ 157 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 26 ಮಹಿಳೆಯರು ನಿರ್ವಹಿಸುವ ‘ಗುಲಾಬಿ ಮತಗಟ್ಟೆಗಳು’, 26 ವಿಶೇಷಚೇತನರು ನಿರ್ವಹಿಸುವ ಮತಗಟ್ಟೆಗಳು, 26 ಯುವಕರು ನಿರ್ವಹಿಸುವ ಮತಗಟ್ಟೆಗಳು, 31 ಗಡಿ ಮತಗಟ್ಟೆಗಳು, 26 ಹಸಿರು ಮತಗಟ್ಟೆಗಳು ಮತ್ತು 22 ವಿಶಿಷ್ಟ ಮತಗಟ್ಟೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಂತದಲ್ಲಿ ರಾಜ್ಯದ ಪ್ರಮುಖ ನಾಯಕರಾದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜೆಕೆಪಿಸಿಸಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಮತ್ತು ಜಮ್ಮುಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರ ಭವಿಷ್ಯ ನಿರ್ಧಾರವಾಗಲಿದೆ.

ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ. ಸೆಪ್ಟೆಂಬರ್ 18 ರಂದು ನಡೆದ ಮೊದಲ ಹಂತದ ಮತದಾನದಲ್ಲಿ 61% ಕ್ಕೂ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಮೂರನೇ ಹಂತದ ಮತದಾನ ಅಕ್ಟೋಬರ್ 1 ರಂದು ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...